spot_img
spot_img

DEMAND FOR OLD PENSION SCHEME : ನ್ಪಿಎಸ್-ಯುಪಿಎಸ್ ಬೇಡ; OPS ಜಾರಿಗೆ ಸರ್ಕಾರಿ ನೌಕರರ ಬಿಗಿಪಟ್ಟು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇದೀಗ DEMAND FOR OLD PENSION SCHEME ತಲೆನೋವು ಆರಂಭವಾಗಿದೆ.‌ ಈ ಸಂಬಂಧ ರಾಜ್ಯ ಸರ್ಕಾರಿ​​ ನೌಕರರ ಸಂಘದಿಂದ ಫೆ.7ರಂದು ಒಪಿಎಸ್ ಹಕ್ಕೊತ್ತಾಯ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಪಂಚ ಗ್ಯಾರಂಟಿ ಹೊರೆ, ಮಿತಿ ಮೀರಿದ ಬದ್ಧ ವೆಚ್ಚದ ಬರೆ, ಗುರಿ ಮುಟ್ಟದ ಆದಾಯ ಸಂಗ್ರಹದ ಆರ್ಥಿಕ ಮುಗ್ಗಟ್ಟಿನ ಮಧ್ಯೆ ರಾಜ್ಯ ಸರ್ಕಾರದ ಮುಂದೆ ಇದೀಗ ಒಪಿಎಸ್ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ DEMAND FOR OLD PENSION SCHEME NPS) ರದ್ದುಗೊಳಿಸಿ, ರಾಜ್ಯದಲ್ಲಿ ಒಪಿಎಸ್ ಅನುಷ್ಠಾನ ಮಾಡುವಂತೆ ಬಿಗಿ ಪಟ್ಟು ಹಿಡಿದಿದ್ದಾರೆ.

ಈ ಸಂಬಂಧ ಫೆಬ್ರವರಿಯಲ್ಲಿ ಒಪಿಎಸ್ ಹಕ್ಕೊತ್ತಾಯ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಜೆಟ್ ತಯಾರಿಯಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಒಪಿಎಸ್ ಕಗ್ಗಂಟು ದೊಡ್ಡ ತಲೆನೋವಾಗಿ ಪರಿಣಮಿಸಲಿದೆ. ರಾಜ್ಯ ಸರ್ಕಾರಕ್ಕೆ ಇದೀಗ DEMAND FOR OLD PENSION SCHEME (OPS) ತಲೆನೋವು ಶುರುವಾಗಿದೆ. ಸರ್ಕಾರಿ ನೌಕರರು ಒಪಿಎಸ್ ಜಾರಿಗೆ ಪಟ್ಟು ಹಿಡಿದಿದ್ದು, ಹೋರಾಟದ ಹಾದಿ ಹಿಡಿಯಲು ತೀರ್ಮಾನಿಸಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲೂ ರಾಜ್ಯದಲ್ಲಿ ಎನ್​ಪಿಎಸ್​ ರದ್ದುಗೊಳಿಸಿ, ಒಪಿಎಸ್​ ಜಾರಿಯ ಭರವಸೆ ನೀಡಿತ್ತು. ಹೀಗಾಗಿ, ಇದೀಗ ಒಪಿಎಸ್ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಆರ್ಥಿಕ ಹೊರೆಯ ಮಧ್ಯೆ ಒಪಿಎಸ್ ಭಾರ ಅಕ್ಷರಶಃ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಲಿದೆ. ಆದರೆ, ನುಡಿದಂತೆ ನಡೆಯುವ ಅಡಕತ್ತರಿಯಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿದೆ.

What is the OPS enforcement fold?

2022ರ ಅಕ್ಟೋಬರ್​ 13ರಿಂದ ಒಂದು ತಿಂಗಳು ಒಪಿಎಸ್​​ ಸಂಕಲ್ಪ ಯಾತ್ರೆ ಹಾಗೂ 14 ದಿನಗಳ ಕಾಲ ಒಪಿಎಸ್ ಜಾರಿಗಾಗಿ ಫ್ರೀಡಂ ಪಾರ್ಕ್‌ಲ್ಲಿ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ ವೋಟ್​ ಫಾರ್​ ಒಪಿಎಸ್ ಅಭಿಯಾನವನ್ನೂ ಕೈಗೊಳ್ಳಲಾಗಿತ್ತು.

ಸಿಎಂ ಅಧಿಕಾರ ವಹಿಸಿಕೊಂಡ ಬಳಿಕ 2023ರ ಜೂನ್​ 13ರಂದು ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಅಲ್ಲದೆ, 2024ರ ಜ.6ರಂದು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಿಎಂ, ಮುಂದಿನ ಸಂಪುಟ ಸಭೆಯಲ್ಲಿ ಎನ್​ಪಿಎಸ್​ ಯೋಜನೆಯ ರದ್ದತಿಯ ವಿಷಯದ ಬಗ್ಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರಿ​​ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಒಪಿಎಸ್ ಜಾರಿಗೆ ಪಟ್ಟು ಹಿಡಿದಿರುವ ಕರ್ನಾಟಕ ರಾಜ್ಯ ಸರ್ಕಾರಿ​​ ನೌಕರರ ಸಂಘದಿಂದ ಫೆ.7ರಂದು ಒಪಿಎಸ್ ಹಕ್ಕೊತ್ತಾಯ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಜ.19ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.‌

ರಾಜ್ಯ ಸರ್ಕಾರಿ ನೌಕರರು ನಮಗೆ ಎನ್​ಪಿಎಸ್​​ ಬೇಡವೇ ಬೇಡ, ಕೇಂದ್ರ ಸರ್ಕಾರದ ಹೊಸ ಏಕೀಕೃತ ಪಿಂಚಣಿ ಯೋಜನೆಯೂ (UPS) ಬೇಡ ಎಂದು ಪಟ್ಟು ಹಿಡಿದಿದ್ದು, ನಮಗೆ ಒಪಿಎಸ್​​ ಬಿಟ್ಟು ಬೇರೇನು ಬೇಡ ಎಂದು ಬೀದಿಗಿಳಿಯಲು ಮುಂದಾಗಿದ್ದಾರೆ.

What is OPS, NPS, UPS Calculation:

ಹೊಸ ಪಿಂಚಣಿ ಯೋಜನೆ (ಎನ್​ಪಿಎಸ್​) ಯಲ್ಲಿ ಪಿಂಚಣಿ ಯೋಜನೆಗೆ ನೌಕರರು ವಂತಿಕೆ ನೀಡಬೇಕಾಗಿದೆ. ಉದ್ಯೋಗದಲ್ಲಿರುವಾಗಲೇ ತಮ್ಮ‌ ವೇತನದಲ್ಲಿನ ಒಂದರಷ್ಟು ಭಾಗವನ್ನು ಕೊಡುಗೆ ನೀಡಬೇಕು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹಾಗೂ ಉಳಿತಾಯ ಇದರಲ್ಲಿದೆ.

ಎನ್​ಪಿಎಸ್​ನಡಿ ಸರ್ಕಾರಿ ನೌಕರರು ಪಿಂಚಣಿ ನಿಧಿಗೆ 10%ರಷ್ಟು ಕೊಡುಗೆ ನೀಡಬೇಕು‌. ಉದ್ಯೋಗಿಗಳ ಎನ್‌ಪಿಎಸ್ ಖಾತೆಗಳಿಗೆ ಸರ್ಕಾರವು 14%ರಷ್ಟು ಕೊಡುಗೆ ನೀಡುತ್ತದೆ. ಸರ್ಕಾರ ವಾರ್ಷಿಕ 2,500 ಕೋಟಿ ರೂ. ಎನ್​ಪಿಎಸ್​ ನಿಧಿಗೆ ಕೊಡುಗೆ ನೀಡುತ್ತಿದೆ.

ಕರ್ನಾಟಕದಲ್ಲಿ 2006ರಲ್ಲಿ ಎನ್​ಪಿಎಸ್​ ಜಾರಿಯಾದ ಬಳಿಕ ಸುಮಾರು 30,000 ಕೋಟಿ ರೂ. ಸಂಚಿತ ನಿಧಿ ಹೊಂದಿದೆ. ಇದರಲ್ಲಿ 60%ನ್ನು ನೌಕರರು ವಿತ್ ಡ್ರಾ ಮಾಡಬಹುದಾಗಿದೆ. ಉಳಿದ 40%ನ್ನು ವರ್ಷಾಸನದ ಮೇಲೆ ವ್ಯಯಿಸಲಾಗುತ್ತದೆ. ರಾಜ್ಯದಲ್ಲಿ ಏಪ್ರಿಲ್ 2006ರಿಂದ ಎನ್​ಪಿಎಸ್ ಜಾರಿಗೊಳಿಸಲಾಗಿತ್ತು. ಇದರಿಂದ 2006ರ ಏಪ್ರಿಲ್ ನಂತರ ಸೇರಿದ ಸರ್ಕಾರಿ ನೌಕರರಿಗೆ ಎನ್​ಪಿಎಸ್​​ಗೆ ಒಳಪಡುತ್ತಾರೆ. ಅದಕ್ಕೂ ಮುನ್ನ ಸೇರಿದ್ದ ಸರ್ಕಾರಿ ನೌಕರರು ಒಪಿಎಸ್​​ಗೆ ಒಳಪಟ್ಟಿದ್ದಾರೆ‌.

ರಾಜ್ಯದಲ್ಲಿ DEMAND FOR OLD PENSION SCHEME ಗೆ ಒಳಪಟ್ಟ ಸುಮಾರು 2,29,497 ಮಂದಿ ಸರ್ಕಾರಿ ನೌಕರರಿದ್ದಾರೆ. ಅದೇ ರಾಷ್ಟ್ರೀಯ DEMAND FOR OLD PENSION SCHEME ಗೆ ಒಳಪಟ್ಟ ಸುಮಾರು 2,82,536 ಸರ್ಕಾರಿ ನೌಕರರು ಇದ್ದಾರೆ ಎಂದು ಆರ್ಥಿಕ ಇಲಾಖೆ ಮಾಹಿತಿ ನೀಡಿದೆ. ಒಪಿಎಸ್​​ನಡಿ ನಿವೃತ್ತ ನೌಕರರು ತಾವು ಪಡೆದ ಅಂತಿಮ ವೇತನದ 50%ರಷ್ಟನ್ನು ಮಾಸಿಕ ಪಿಂಚಣಿಯಾಗಿ ಪಡೆಯುತ್ತಾರೆ.

ತುಟ್ಟಿ ಭತ್ಯೆ ಹೆಚ್ಚುತ್ತಿದ್ದ ಹಾಗೆಯೇ ಪಿಂಚಣಿ ಮೊತ್ತವೂ ಹೆಚ್ಚಾಗುತ್ತದೆ. ಇತ್ತ, ಕೇಂದ್ರ ಸರ್ಕಾರ ನೌಕರರ ಪ್ರಬಲ ವಿರೋಧದ ಹಿನ್ನೆಲೆಯಲ್ಲಿ ಎನ್​ಪಿಎಸ್ ಬದಲು ಯುಪಿಎಸ್​ ಜಾರಿಗೆ ತರಲು ನಿರ್ಧರಿಸಿದೆ. ಅದರಂತೆ, ಏಪ್ರಿಲ್ 2025ರಿಂದ ಯುಪಿಎಸ್ ಜಾರಿಯಾಗಲಿದೆ. ಯುಪಿಎಸ್​ನಡಿ 25 ವರ್ಷ ಸೇವೆ ಸಲ್ಲಿಸಿದ ಸರ್ಕಾರಿ ನೌಕರರು ತಾವು ನಿವೃತ್ತಿಯಾಗುವ 12 ತಿಂಗಳಲ್ಲಿ ಪಡೆದ ಸರಾಸರಿ ಮೂಲ ವೇತನದ 50%ರಷ್ಟು ಖಾತ್ರಿ ಪಿಂಚಣಿಯನ್ನು ಪಡೆಯಲಿದ್ದಾರೆ. ಕನಿಷ್ಠ 10 ವರ್ಷ ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ಮಾಸಿಕ 10,000 ರೂ. ಕನಿಷ್ಠ ಪಿಂಚಣಿ ಸಿಗಲಿದೆ.

How will the financial burden be?

ರಾಜ್ಯ ಸರ್ಕಾರ ಒಪಿಎಸ್ ಮತ್ತು ಎನ್​ಪಿಎಸ್ ಬದಲಿಗೆ ಯುಪಿಎಸ್ ಜಾರಿ ಬಗ್ಗೆ ಸಂದಿಗ್ದತೆಯಲ್ಲಿದೆ. ಆರ್ಥಿಕ ಇಲಾಖೆಯೂ ಯುಪಿಎಸ್ ಪರ ಒಲವು ಹೊಂದಿದೆ. ರಾಜ್ಯದಲ್ಲಿ ಯುಪಿಎಸ್ ಅಳವಡಿಕೆಯಿಂದ ಸುಮಾರು 1,500 ಕೋಟಿ ರೂ. ವೆಚ್ಚವಾಗುವ ಅಂದಾಜಿಸಲಾಗಿದೆ.

ಎನ್‌ಪಿಎಸ್, ಒಪಿಎಸ್ ಅಥವಾ ಯುಪಿಎಸ್ ಜಾರಿಯಿಂದ ರಾಜ್ಯದ ಸುಮಾರು 5.26 ಲಕ್ಷ ಸರ್ಕಾರಿ ನೌಕರರ ಮೇಲೆ ಪ್ರಭಾವ ಬೀರಲಿದೆ. ಸುಮಾರು 4.5 ಲಕ್ಷ ಪಿಂಚಣಿದಾರರು ರಾಜ್ಯದಲ್ಲಿದ್ದಾರೆ. 2024-25 ಸಾಲಿನಲ್ಲಿ ರಾಜ್ಯ ಸರ್ಕಾರ 80,434 ಕೋಟಿ ರೂ. ಸರ್ಕಾರಿ ನೌಕರರ ವೇತನಕ್ಕೆ ವ್ಯಯಿಸುತ್ತಿದೆ.

32,355 ಕೋಟಿ ರೂ. ಪಿಂಚಣಿಗೆ ವೆಚ್ಚ ಮಾಡುತ್ತಿದೆ. ಯುಪಿಎಸ್ ರದ್ದು ಮಾಡಿದರೆ ಪಿಂಚಣಿ ವೆಚ್ಚ 4 ಪಟ್ಟು ಹೆಚ್ಚಾಗಲಿದೆ. DEMAND FOR OLD PENSION SCHEME ಯನ್ನು ಅನುಷ್ಠಾನ ಮಾಡಿದರೆ ರಾಜ್ಯದ ಮೇಲೆ ಭಾರೀ ಆರ್ಥಿಕ‌ ಹೊರೆ ಬೀಳಲಿದೆ. ಮಧ್ಯಮಾವಧಿ ವಿತ್ತೀಯ ವರದಿಯೂ ಕೂಡ ಒಪಿಎಸ್​​ಗೆ ಮರಳುವುದರಿಂದ ಉಂಟಾಗುವ ಆರ್ಥಿಕ ಸಂಕಷ್ಟದ ಬಗ್ಗೆ ಎಚ್ಚರಿಕೆ ನೀಡಿದೆ.

DEMAND FOR OLD PENSION SCHEME ಗೆ ಮರಳುವುದರಿಂದ ಸರ್ಕಾರಕ್ಕೆ ಎನ್​ಪಿಎಸ್​ನಲ್ಲಿ ಭರಿಸುತ್ತಿರುವ ವೆಚ್ಚದ 4.5 ಪಟ್ಟು ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಆರ್​ಬಿಐ ಕೂಡ ತನ್ನ ವರದಿಯಲ್ಲಿ ಹೇಳಿದೆ. ಆದ್ದರಿಂದ DEMAND FOR OLD PENSION SCHEME ಗೆ ಮರಳುವುದು ದೀರ್ಘಾವಧಿಯಲ್ಲಿ ರಾಜ್ಯದ ಹಣಕಾಸಿನ ಮೇಲೆ ಭಾರಿ ಪೆಟ್ಟು ಬೀಳಲಿದೆ ಹಾಗೂ ಇದರಿಂದ ಕಲ್ಯಾಣ ಕಾರ್ಯಕ್ರಮಗಳ ಮತ್ತು ಅಭಿವೃದ್ಧಿ ವೆಚ್ಚದ ಹಂಚಿಕೆಯು ಕಡಿಮೆಯಾಗಲಿದೆ ಎಂಬ ಎಚ್ಚರಿಕೆ ನೀಡಿದೆ.

Certain employees covered by OPS:

DEMAND FOR OLD PENSION SCHEMEಇತ್ತ, ರಾಜ್ಯ ಸರ್ಕಾರ ಒಂದಷ್ಟು ಉದ್ಯೋಗಿಗಳನ್ನು ಒಪಿಎಸ್ ವ್ಯಾಪ್ತಿಗೆ ಸೇರಿಸಿದೆ. ಅಂದಾಜು 11,300 ಸರ್ಕಾರಿ ಉದ್ಯೋಗಿಗಳನ್ನು ಒಪಿಎಸ್ ವ್ಯಾಪ್ತಿಗೆ ಸೇರ್ಪಡೆಗೊಳಿಸಿದೆ. ಎನ್​ಪಿಎಸ್​ ಜಾರಿಯಾದ ಏಪ್ರಿಲ್ 1, 2006ಕ್ಕೂ ಮುನ್ನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಆದರೆ ನಂತರ ಉದ್ಯೋಗಕ್ಕೆ ಸೇರ್ಪಡೆಗೊಂಡ ಸರ್ಕಾರಿ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.

ಆ ಮೂಲಕ ಅಂದಾಜು 11,300 ಸರ್ಕಾರಿ ಉದ್ಯೋಗಿಗಳು ಒಪಿಎಸ್​ಗೆ ಸೇರ್ಪಡೆಯಾಗಿದ್ದಾರೆ. 2024ರ ಜನವರಿಯಲ್ಲಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ DEMAND FOR OLD PENSION SCHEME ಯ ಬದಲಾಗಿ DEMAND FOR OLD PENSION SCHEME ಯನ್ನು ಜಾರಿಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಪುನರಚನೆ ಮಾಡಲಾಗಿದೆ.

11.12.2018 ಮತ್ತು 01.03.2023ರಲ್ಲಿ ಸರ್ಕಾರ ಈ ಬಗ್ಗೆ ಸಮಿತಿ ರಚನೆ ಮಾಡಿ ಆದೇಶಿಸಿತ್ತು. ಈ ಸಮಿತಿಯನ್ನು 16.08.2024ರಲ್ಲಿ ಪುನರ್ ರಚಿಸಿ ಕಾಂಗ್ರೆಸ್ ಸರ್ಕಾರ ಆದೇಶಿಸಿತ್ತು.‌ ಈ ಸಮಿತಿಗೆ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ. ಈ ಸಮಿತಿಯು ಈಗಾಗಲೇ ಸುಮಾರು ಮೂರು ಸಭೆಗಳನ್ನು ನಡೆಸಿದೆ. ರಾಜಸ್ಥಾನ, ಛತ್ತೀಸ್​​ಘಡ, ಪಂಜಾಬ್, ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಎನ್​ಪಿಎಸ್ ರದ್ದು ಮಾಡಿ ಒಪಿಎಸ್​ಗೆ ಮರಳಲಾಗಿದೆ.

ಈ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಲು ಒಂದು ತಂಡವನ್ನೂ ರಚಿಸಲಾಗಿದೆ. ಸಮಿತಿಯು ಅಧ್ಯಯನ ನಡೆಸುತ್ತಿದ್ದು, ಒಪಿಎಸ್ ಜಾರಿಯ ಸಾಧ್ಯತೆ, ಆರ್ಥಿಕ ಹೊರೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಪರಿಶೀಲಿಸುತ್ತಿದೆ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ. ಮುಂಬರುವ ಬಜೆಟ್​​ನಲ್ಲೇ ಎನ್​ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಬೇಕು.

ನಮಗೆ ಯುಪಿಎಸ್ ಕೂಡ ಬೇಡ. ಶೀಘ್ರದಲ್ಲಿ ಒಪಿಎಸ್ ಜಾರಿ ಮಾಡಬೇಕು. ಸರ್ಕಾರವು ಸಮಿತಿ ರಚಿಸುವ ಮೂಲಕ ಕಾಲಹರಣ ಮಾಡುತ್ತಿದೆ. ಹಣಕಾಸು ಇಲಾಖೆ, ಸಿಎಂ ಜೊತೆಗೆ ಸಭೆ ನಡೆಸಿದ್ದು, ಅನುಷ್ಠಾನದ ಭರವಸೆ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಪ್ರಣಾಳಿಕೆಯಲ್ಲೂ ಭರವಸೆ ನೀಡಿದೆ.

ಇದರ ಜಾರಿಗೆ ರಾಜಕೀಯ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರ ಒಪಿಎಸ್ ಜಾರಿ ಬಗ್ಗೆ ವಿಳಂಬ ನೀತಿ ಜೊತೆಗೆ ವಿಷಯಾಂತರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ ಆರೋಪ ಮಾಡಿದ್ದಾರೆ.

 

ಇದನ್ನು ಓದಿರಿ : ISRAEL HAMAS CEASEFIRE : ಗಾಜಾದಲ್ಲಿ ಕದನ ವಿರಾಮ: ಮತ್ತೆ ತಲೆ ಎತ್ತಲಿದೆಯಾ ಹಮಾಸ್?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...