Haveri News:
ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ DEPUTY LOKAYUKTA VISIT ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಗರಂ ಆದ ಉಪ ಲೋಕಾಯುಕ್ತರು, ಸರಿಯಾದ ಜಿಎಸ್ಟಿ ನಂಬರ್ ಇಲ್ಲದ ಬಿಲ್ ಬುಕ್, ಬಿಲ್ ನೀಡದೇ ತರಕಾರಿ ಮಾರಾಟ ಮಾಡುತ್ತಿದ್ದ ಏಜೆಂಟರನ್ನು ತರಾಟೆಗೆ ತಗೆದುಕೊಂಡರು.
ನಗರದ ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ ಸೇರಿದಂತೆ ಇಂದು ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ DEPUTY LOKAYUKTA VISIT ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸಾರ್ವಜನಿಕರ ಮತ್ತು ರೈತರ ಸಮಸ್ಯೆ ಆಲಿಸಿದರು. ನಂತರ ನಗರದ ಕೆಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಪಾರ್ಕಿಂಗ್ ಸ್ಥಳ, ಬಿಲ್ ಬುಕ್ ಚೆಕ್ ಮಾಡಿದರು.
ಬೈಕ್, ಕಾರುಗಳಿಗೆ ಮನಬಂದಂತೆ ಹಣ ಪಡೆಯುತ್ತಿದ್ದ ಟೆಂಡರ್ದಾರನಿಗೆ ಅಲ್ಲಿಯೂ ಸಹ ತರಾಟೆ ತಗೆದುಕೊಂಡರು. ಯಾವುದೇ ಸಮಯದಲ್ಲಿ ಬಂದರು 30 ರೂಪಾಯಿ ಹೇಗೆ ತೆಗೆದುಕೊಳ್ಳುತ್ತೀರಿ? ಎಂದು ಪ್ರಶ್ನಿಸುವ ಮೂಲಕ ಪುಸ್ತಕ ಸರಿಯಾಗಿ ನಿರ್ವಹಣೆ ಮಾಡುವಂತೆ ತಾಕೀತು ಮಾಡಿದರು.
DEPUTY LOKAYUKTA VISIT ಒಂದು ಬಾಕ್ಸ್ ತರಕಾರಿಗೆ 10 ರೂಪಾಯಿ ಕಮೀಷನ್ ತೆಗೆದುಕೊಳ್ಳುತ್ತಿದ್ದ ದಲ್ಲಾಳಿಗಳ ಕ್ರಮಕ್ಕೆ ಹಾಗೂ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಕ್ಕೆ ಬೇಸರ ವ್ಯಕ್ತಪಡಿಸಿ, ಎಪಿಎಂಸಿಯ ಕಾರ್ಯದರ್ಶಿಯನ್ನು ಕರೆದು ಸ್ಥಳದಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡರು.
ಹಾವೇರಿ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳಕಾಲ ಅವರು ವಿವಿಧ ಇಲಾಖೆ ಕಚೇರಿಗಳಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಚೇರಿಗಳ ವ್ಯವಸ್ಥೆ ಹಾಗೂ ಭ್ರಷ್ಟಾಚಾರ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬಸ್ ನಿಲ್ದಾಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿರುವ ಕುರಿತಂತೆ ಕೆಸ್ಆರ್ಟಿಸಿ ಡಿಸಿಗೆ ಮಾಹಿತಿ ಕೇಳಿದರು.
ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದು, ಪ್ರಯಾಣಿಕರಿಗೆ ಸರಿಯಾದ ಸೌಲಭ್ಯಗಳಿಲ್ಲದಿರುವುದನ್ನು ಕಂಡು ಗರಂ ಆದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿರಿ : under the Unlawful Activities (Prevention) Act in the 2017 terror funding case.