spot_img
spot_img

ಪಾರಂಪರಿಕ ಕಾರಿಡಾರ್ ಆಗಿ ಬಸವನಗುಡಿ ಅಭಿವೃದ್ಧಿ : ಸಿಎಂ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ”ವೃಷಭಾವತಿ ನದಿ ಹುಟ್ಟುವ ಜಾಗಕ್ಕೆ ಮರುಜೀವ ನೀಡಿ, ಜೀವನದಿಯಾಗಿ ರೂಪಿಸಬೇಕು ಹಾಗೂ ಬಸವನಗುಡಿ ಭಾಗವನ್ನು ಬ್ರಾಂಡ್ ಬೆಂಗಳೂರು ಅಡಿ ಧಾರ್ಮಿಕ ಹಾಗೂ ಪಾರಂಪರಿಕ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಬೇಕು ಎನ್ನುವ ಸ್ಥಳೀಯ ಮುಖಂಡರ ಮನವಿಗೆ ಸರ್ಕಾರ ಸ್ಪಂದಿಸಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬ್ರಾಂಡ್ ಬೆಂಗಳೂರು ಯೋಜನೆ ಅಡಿ ಬಸವನಗುಡಿಯನ್ನು ಪಾರಂಪರಿಕ ಕಾರಿಡಾರ್ ಆಗಿ ಅಭಿವೃದ್ಧಿ ಮಾಡಲಾಗುವುದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಸವನಗುಡಿ ಕಡಲೆಕಾಯಿ ಪರಿಷೆ ಉದ್ಘಾಟಿಸಿ ಮಾತನಾಡಿದ ಅವರು, ”ಕಡಲೆಕಾಯಿ ಪರಿಷೆಯನ್ನು ಅಂತಾರಾಷ್ಟೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಶ್ರಮಿಸಬೇಕು.

”ನಮ್ಮ ಅಜ್ಜನ ಕಾಲದಿಂದಲೂ ನಾವು ಕಡಲೆಕಾಯಿ ಬೆಳೆಯುತ್ತಿದ್ದೆವು. ಸುಮಾರು 30 – 40 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯುತ್ತಿದ್ದೆವು. ನಾನೂ ಸಹ ಕಡಲೆಕಾಯಿ ಕೃಷಿ ಮಾಡಿದ್ದೇನೆ. ಕಡಲೆಕಾಯಿ ಬಡವರ ಬಾದಾಮಿಯಾಗಿದೆ. ಒಂದು ಕೆ.ಜಿ ಬಾದಾಮಿಗೆ 1 ಸಾವಿರ ರೂಪಾಯಿ ಬೆಲೆಯಿದೆ, ಅದೇ ಕಡಲೆಕಾಯಿಗೆ 50 ರೂಪಾಯಿ ಬೆಲೆಯಿದೆ” ಎಂದು ಹೇಳಿದರು.

‘ಕಾಂಗ್ರೆಸ್ ಕಡಲೆಕಾಯಿ ಎಂದೂ ಕರೆಯಲಾಗುತ್ತದೆ. ಯಾರು ಈ ಹೆಸರು ಇಟ್ಟರು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಮಹಾತ್ಮ ಗಾಂಧಿ ಅವರು ಇಟ್ಟಿರಬಹುದು ಎನ್ನುವುದು ನನ್ನ ಅಭಿಪ್ರಾಯ. ಚಿಂತಾಮಣಿಯಲ್ಲಿ ಖಾರ ಹಾಕಿ ಕಡಲೆಕಾಯಿಗೆ ಹೊಸ ರೂಪ ನೀಡುತ್ತಾರೆ.

ಕನಕಪುರದಲ್ಲಿ ಕಡಲೆ ಮಿಠಾಯಿ ಮಾಡುತ್ತಾರೆ. ತುಮಕೂರು ಭಾಗದಲ್ಲಿ ವಿವಿಧ ಜಾತಿಯ ಕಡಲೆಕಾಯಿ ತಳಿಗಳಿವೆ. ನಾನು ಒಮ್ಮೆ ವಿದೇಶಕ್ಕೆ ಹೋದಾಗ ಹೆಬ್ಬೆಟ್ಟು ಗಾತ್ರದ ಕಡಲೆಕಾಯಿ ನೋಡಿದ್ದೆ. ಅದನ್ನು ಭಾರತಕ್ಕೆ ಕಳುಹಿಸಿ, ನಾನು ಬೆಳೆಯಬೇಕು ಎಂದು ಸ್ನೇಹಿತರಿಗೆ ತಿಳಿಸಿದ್ದೆ. ಅದು ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು ಈ ಬಾರಿ ಸುಂಕ ಸಂಗ್ರಹವನ್ನು ರದ್ದು ಮಾಡಿದ್ದೇವೆ. ಈ ವರ್ಷದಿಂದ ಸುಂಕವಿಲ್ಲದ ಕಡಲೆಕಾಯಿ ಪರಿಷೆ ಪ್ರಾರಂಭವಾಗಿದೆ” ಎಂದರು.

ಬೆಂಗಳೂರಿನ ಸುತ್ತಲಿನ ರೈತರು ಇಲ್ಲಿಗೆ ಬಂದು, ನಮ್ಮ ಶ್ರಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೆಂಪೇಗೌಡರು ರೈತರನ್ನು ಉಳಿಸಲು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರು ನಡೆಯೋಣ. ವೃಷಭಾವತಿ ನದಿ ಜನಿಸುವ ಸ್ಥಳದಲ್ಲಿ ನಿಂತು ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸದಲ್ಲಿ ನಾವೆಲ್ಲರೂ ನಿರತರಾಗಿದ್ದೇವೆ.

ಈ ದೇಶದ ಆಸ್ತಿ ನಮ್ಮ ಸಂಸ್ಕೃತಿ. ಮಲ್ಲಿಕಾರ್ಜುನ ಸ್ವಾಮಿ, ಗವಿ ಗಂಗಾಧರೇಶ್ವರ, ಆಂಜನೇಯ, ಬಸವೇಶ್ವರ, ಗಣಪತಿ ದೇವರುಗಳ ಸನ್ನಿಧಾನದಲ್ಲಿ ನಾವೆಲ್ಲರೂ ಸೇರಿರುವುದೇ ನಮ್ಮ ಭಾಗ್ಯ ಎಂದರು.

”ಪ್ರತಿಪಕ್ಷದ ನಾಯಕರು ಬ್ರಾಂಡ್ ಬೆಂಗಳೂರು ಬಗ್ಗೆ ಟೀಕೆ ಮಾಡಿದ್ದರು. ಇದಕ್ಕೆ 2028ಕ್ಕೆ ಮುಂಚಿತವಾಗಿ ನಾನು ಉತ್ತರ ನೀಡುತ್ತೇನೆ. ಈ ಯೋಜನೆಯಡಿ ಯಾವ ಕೆಲಸಗಳನ್ನು ಮಾಡಿದ್ದೇನೆ, ಮಾಡಲಿದ್ದೇನೆ ಎಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಪಡಿತರ ಚೀಟಿ ರದ್ಧತಿ ಬಗ್ಗೆ ಬಿಜೆಪಿ ಅಪಪ್ರಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ”ನಮ್ಮ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇದರ ಬಗ್ಗೆ ಆತಂಕಪಡುವ ಆಗತ್ಯವಿಲ್ಲ, ಯಾರಿಗೂ ತೊಂದರೆಯಾಗಲು ಬಿಡುವುದಿಲ್ಲ. ಸರ್ಕಾರ ಜಮೀನು ಕಬಳಿಸುತ್ತದೆ ಎನ್ನುವ ಬಿಜೆಪಿ ಅಪಪ್ರಚಾರ ಮಾಡುತ್ತಿದೆ” ಎಂದು ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...