spot_img
spot_img

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತುಮಕೂರು:ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಡೀ ದೇಶದಲ್ಲೇ ರಾಜ್ಯದ ಆದಾಯ (GDP- Gross Domestic Product) ಮೊದಲ ಸ್ಥಾನದಲ್ಲಿದೆ. ದೇಶದ ಆದಾಯ(ರಾಷ್ಟ್ರೀಯ ಆದಾಯ) ಇನ್ನೂ ಶೇ 8ರಷ್ಟಿದೆ. ಆದರೆ, ರಾಜ್ಯದ ಆದಾಯ ಶೇ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದರು.
ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದು ಹೇಳಿದರು.

ತುಮಕೂರು ಜಿಲ್ಲಾಡಳಿತದ ವತಿಯಿಂದ ಇಂದು ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂ. ಮೊತ್ತದ 23,000ಕ್ಕೂ ಅಧಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದು ಹೇಳಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ.

SCP/TSP ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ. ಆದ್ದರಿಂದ ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

ಹಳ್ಳಿಗಳ, ತಾಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ GDP(ರಾಷ್ಟ್ರೀಯ ಆದಾಯ) ಪ್ರಗತಿ ಕಾಣಲು ಸಾಧ್ಯ.

ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ. ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...

EARTHQUAKE IN AFGHANISTAN:ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು

Kabul, Afghanistan News: ಜನವರಿ 30 ರಂದು ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿತ್ತು. ಸೋಮವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದ ಅಲ್ಲಿನ ಜನ ಭಯಭೀತಗೊಂಡಿದ್ದಾರೆ.ಈ ರೀತಿಯ...

205 INDIANS DEPORTED BY US:ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

Amritsar News: ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ INDIANSನ್ನು ಮರಳಿ ತವರಿಗೆ...