spot_img
spot_img

DHANANJAY AND DHANYATHA REACTION : ವಿವಾಹದ ಬಳಿಕ ಧನಂಜಯ್ – ಧನ್ಯತಾ ಜೋಡಿ ಫಸ್ಟ್ ರಿಯಾಕ್ಷನ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಮೈಸೂರಿನಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. DHANANJAY AND DHANYATHA REACTION. ಮೈಸೂರು ವಸ್ತು ಪ್ರದರ್ಶನ ಮೈದಾನದಲ್ಲಿ ಮದುವೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊದಲಿಗೆ ಎಲ್ಲಾರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ಮದುವೆ ಸಂಭ್ರಮ ಚೆನ್ನಾಗಿ ನಡೆದಿದೆ. ಯಾವುದಾದರೂ ಸಣ್ಣ ಪುಟ್ಟ ತೊಂದರೆಗಳು ಆಗಿದ್ದರೆ ಕ್ಷಮೆ ಇರಲಿ. ವಿದ್ಯಾಪತಿ ದ್ವಾರದಿಂದ ಅಭಿಮಾನಿಗಳು ಬಂದು ಆಶೀರ್ವಾದ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದೆ. ನಮ್ಮ‌ ಮನೆಯವರು ಖುಷಿಯಾಗಿದ್ದಾರೆ. ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲೇ ಮದುವೆಗೆ ಬಂದಿದ್ದಾರೆ. DHANANJAY AND DHANYATHA REACTION ತುಂಬಾ ಸಮಯ ನಮಗಾಗಿ ಕಾದಿದ್ದಾರೆ. ಅಭಿಮಾನಿಗಳ ಪ್ರೀತಿ ದೊಡ್ಡದು” ಎಂದರು.

“ಮೈಸೂರಿನಲ್ಲಿ ಬೆಳೆದ ಪ್ರತಿಯೊಬ್ಬರಿಗೂ, ಮೈಸೂರು ಒಂದು ಎಮೋಷನಲ್‌. ನನ್ನ ತಾಯಿಯ ನಂಬಿಕೆಯನ್ನು ಉಳಿಸಿಕೊಂಡಿದ್ದೇನೆ. ನನಗೆ ಜೀವನ ಕಟ್ಟಿಕೊಟ್ಟ ಮೈಸೂರಿನಲ್ಲೇ ಮದುವೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ. ಮೈಸೂರಿನ‌ ಸ್ನೇಹಿತರೆಲ್ಲರೂ ಬಂದು ಶುಭ ಹಾರೈಸಿದಕ್ಕೆ ಡಬಲ್‌ ಖುಷಿಯಾಗಿದೆ” ಎಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್‌ ಹೇಳಿದರು.

ಆಸ್ತಿಕತೆ – ನಾಸ್ತಿಕತೆ ನನ್ನ ಬಾಲ್ಯದ ದಿನಗಳಿಂದಲೂ ನೋಡಿದ್ದೇನೆ. ನಮ್ಮೂರ ಜಾತ್ರೆಯಲ್ಲಿ ಭಾಗಿಯಾಗಿದ್ದೇನೆ. ಇದೆಲ್ಲವೂ ನಮ್ಮೂರಲ್ಲಿ ನಡೆಯುತ್ತಿರುವ ಜಾತ್ರೆಯ ಬಗ್ಗೆ ತಿಳಿಸುತ್ತದೆ. ವಿಜ್ಞಾನವು ಬೇಕು, ನಂಬಿಕೆಯೂ ಬೇಕು. ನನ್ನ ಹೆಂಡತಿ ವಿಜ್ಞಾನದಲ್ಲಿದ್ದಾರೆ. ನಮ್ಮ ತಾಯಿ ಆಸ್ಪತ್ರೆಗೆ ಒಳ ಹೋಗುವ ಮುನ್ನ ದೇವರಿಗೆ ಕೈ ಮುಗಿಯುತ್ತಾರೆ. ಅದನ್ನು ನಾನು ಗೌರವಿಸಬೇಕು. ನಾನು ಒಬ್ಬ ಕಲಾವಿದ, ಎಲ್ಲಾದರ ಅನುಭವ ನನಗೆ ಬೇಕು. ಹೀಗಾಗಿ ಪ್ರಶ್ನೆ ಮಾಡುವವರು ಕೂಡಾ ಇರಬೇಕು.

DHANANJAY AND DHANYATHA REACTION  ಮದುವೆ ಸಮಯದಲ್ಲಿ ಮಾಡಿದ ಎಲ್ಲಾ ಸಂಪ್ರದಾಯಗಳನ್ನು ನಾನು ಮಗುವಿನಂತೆ ಸಂಭ್ರಮಿಸಿದ್ದೇನೆ. ನನ್ನ ತಾಯಿಯ ನಂಬಿಕೆಯನ್ನು ನಾನು ಗೌರವಿಸಬೇಕು. ಮದುವೆ ಬಳಿಕ ಸ್ವಲ್ಪ ವಿರಾಮ ಇದ್ದೇ ಇರುತ್ತದೆ. ನಂತರ ಅವರವರು ಅವರ ವೃತ್ತಿ ಮಾಡ್ತಾರೆ. ನಾನು ಚಿತ್ರರಂಗದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಅಭಿಮಾನಿಗಳಿಗೆ ಸಾಕಷ್ಟು ಗೌರವ ಕೊಡಬೇಕು. DHANANJAY AND DHANYATHA REACTION ನಾವು ನಿಗದಿಪಡಿಸಿದ ಸ್ಥಳದಲ್ಲಿ ಅವರನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರರಂಗದ ಗೆಳೆಯರಿಗೂ ಧನ್ಯವಾದಗಳು. ಮದುವೆಯಿಂದ ನನಗೆ ಸಾಕಷ್ಟು ಜವಾಬ್ದಾರಿ ಹೆಚ್ಚಾಗಿದೆ. ಅಭಿಮಾನಿಗಳ ಮೇಲೆ ಗೌರವ ಇನ್ನೂ ಹೆಚ್ಚಿದೆ.

ಈ ಜವಾಬ್ದಾರಿ ನಿಭಾಯಿಸಲೇಬೇಕು ಎಂದು ಕೆಲಸ ಮಾಡಬೇಕು. ತಾಳಿ ಕಟ್ಟುವಾಗ ಭಯವಾಗಲಿಲ್ಲ. ಅಪ್ಪ-ಅಮ್ಮ ಬಹಳ ಖುಷಿಯಾಗಿದ್ದಾರೆ. ಶಿವಣ್ಣ ಪ್ರೀತಿ ದೊಡ್ಡದು. ಅವರು ಬಂದು ನಮಗೆ ಶಕ್ತಿ ತುಂಬಿ ಹೋಗಿದ್ದಾರೆ ಎಂದು ಹೇಳಿದರು.

ಧನ್ಯತಾ ಮಾತನಾಡಿ, “ಅಭಿಮಾನಿಗಳ ಪ್ರೀತಿ ಕಂಡು ಮಾತೇ ಹೊರಡುತ್ತಿಲ್ಲ. ಅವರ ಪ್ರೀತಿಯನ್ನು ನೋಡಿ ನಾನು ತುಂಬಾ ಭಾವುಕಳಾದೆ. ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ಕುಟುಂಬ, ಅವರ ಕುಟುಂಬ ಎರಡೂ ಒಂದೇ. ಇಬ್ಬರು ತುಂಬಾ ಅನ್ಯೋನ್ಯತೆಯಿಂದ ಇರುತ್ತೇವೆ. ಎಲ್ಲವೂ ಚೆನ್ನಾಗಿ ಆಗಿದೆ” ಎಂದು ಹೇಳಿದರು.

ಇದನ್ನು ಓದಿರಿ : India wicketkeeper-batter Rishabh Pant was hit on the knee

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KL RAHUL SACRIFICE:ಕನ್ನಡಿಗ ಕೆ.ಎಲ್.ರಾಹುಲ್ ತ್ಯಾಗಕ್ಕೆ ಫ್ಯಾನ್ಸ್ ಮೆಚ್ಚುಗೆ

KL Rahul: ಹೌದು, ಬಾಂಗ್ಲಾ ನೀಡಿದ್ದ 228 ರನ್​ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್​ ಶರ್ಮಾ (41), ವಿರಾಟ್​ ಕೊಹ್ಲಿ...

HUAWEI MATE XT TRI FOLD PHONE:ಇದರ ಬೆಲೆ 2 ಬುಲೆಟ್ ಬೈಕ್ಗಳಿಗೆ ಸಮ!

Huaveli Re-Launched Ultimate Design News: ಇತ್ತೀಚೆಗೆ ಪ್ರಪಂಚದಾದ್ಯಂತ ಆಯ್ದ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿದೆ. ಆದ್ರೆ ಇದರ ಬೆಲೆ ಎರಡು ರಾಯಲ್​ ಎನ್​ಫೀಲ್ಡ್​ಗೆ ಸಮ. ರಾಯಲ್​ ಎನ್‌ಫೀಲ್ಡ್...

PAYTM SOLAR SOUND BOX:ಸೂರ್ಯನ ಬೆಳಕಿನಿಂದಲೇ ಚಾರ್ಜ್ ಆಗುತ್ತೆ ‘ಪೇಟಿಎಂ ಸೌಂಡ್ಬಾಕ್ಸ್’

Paytm Solar SoundBoss News: ಇತ್ತೀಚೆಗೆ PAYTMನ ಪೋಷಕ ಕಂಪನಿ 'ಒನ್97 ಕಮ್ಯುನಿಕೇಷನ್ಸ್' ಮತ್ತೊಂದು ವಿಷಯದೊಂದಿಗೆ ಸುದ್ದಿಯಲ್ಲಿದೆ. ವ್ಯಾಪಾರಿಗಳಿಗಾಗಿ ದೇಶದ ಮೊದಲ ಸೌರಶಕ್ತಿ ಚಾಲಿತ 'ಸೋಲಾರ್​...

UNSAFE MEDICINES:9 ಔಷಧಗಳ ನಿರ್ಬಂಧಿಸುವಂತೆ ಕೇಂದ್ರಕ್ಕೆ ಸಚಿವ ಗುಂಡೂರಾವ್ ಪತ್ರ

Bangalore News: ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES...