spot_img
spot_img

DHARANI FOR OPS : ಹೊಸ ಪಿಂಚಣಿ ವ್ಯವಸ್ಥೆ ರದ್ದತಿಗೆ ಒತ್ತಾಯಿಸಿ ಫೆ.7ರಂದು ಒಪಿಎಸ್ ಹಕ್ಕೊತ್ತಾಯ ಧರಣಿಗೆ ತೀರ್ಮಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

NPS ಯೋಜನೆಯ ರದ್ದತಿಗೆ ಒತ್ತಾಯಿಸಿ ಫೆ.7ರಂದು OPS ಹಕ್ಕೊತ್ತಾಯ DHARANI FOR OPS ಮಾಡುವುದಾಗಿ NPS ನೌಕರರ ಸಂಘ ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು 2022ರ ಅ.13ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆ ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ಲ್ಲಿ ಅಹೋ ರಾತ್ರಿ DHARANI FOR OPS ನಡೆಸಲಾಗಿತ್ತು.

ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ NPS ಯೋಜನೆ ರದ್ದುಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಾಗಿತ್ತು ಎಂದಿದೆ. NPS ಯೋಜನೆಯ ರದ್ದತಿಗೆ ಒತ್ತಾಯಿಸಿ ಫೆ.7ರಂದು ‘OPS ಹಕ್ಕೊತ್ತಾಯ’ DHARANI FOR OPS ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ.

ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ 2023ರ ಜೂ.13ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಭರವಸೆ ನೀಡಿದ್ದರು. NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು.

ಮುಖ್ಯಮಂತ್ರಿ 2024ರ ಜ.6 ರಂದು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ NPS ಯೋಜನೆಯ ರದ್ದತಿಯ ವಿಷಯವನ್ನು ಸಂಪುಟದ ಸಹದ್ಯೋಗಿಗಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು ಎಂದು ಪ್ರಕಟಣೆಯಲ್ಲಿ ಸಂಘ ತಿಳಿಸಿದೆ. ಆದರೆ, DHARANI FOR OPS ಈ ನಡುವೆ ಕೇಂದ್ರ ಸರ್ಕಾರ NPS ಬದಲು UPS ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಇದನ್ನು ರಾಷ್ಟ್ರ ಮಟ್ಟದಲ್ಲಿ NMOPS ಮತ್ತು ರಾಜ್ಯದಲ್ಲಿ ನಮ್ಮ ಸಂಘಟನೆ ಈ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ನಮ್ಮ ಬೇಡಿಕೆ ಕೇವಲ ಹಳೆ ಪಿಂಚಣೆ ಯೋಜನೆಯನ್ನು ಮರುಜಾರಿಗೊಳಿಸುವುದಾಗಿದೆ.

“ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, NPS ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ, 2025ರ ಫೆ.7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘OPS ಹಕ್ಕೊತ್ತಾಯ’ DHARANI FOR OPS ನಡೆಸಲು ಬೆಂಗಳೂರಿನಲ್ಲಿ ಭಾನುವಾರ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘ ಮಾಹಿತಿ ನೀಡಿದೆ.

ಈ ನಡುವೆ ರಾಜ್ಯ ಸರ್ಕಾರ ಕೆಲವು ರಾಜ್ಯಗಳಲ್ಲಿ OPS ಜಾರಿಗೊಳಿಸಿದ್ದು, ಸಿದ್ದರಾಮಯ್ಯ ಆ ರಾಜ್ಯಗಳಿಗೆ ಭೇಟಿ ನೀಡಿ ವರದಿ ಪಡೆದು ಪರಿಶೀಲಿಸುವ ಬಗ್ಗೆ ಸಮಿತಿ ರಚಿಸಿದ್ದು, ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ವಿರೋಧಿಸಿದೆ.

ಇದನ್ನು ಓದಿರಿ : COW ATTACK CASE : ಗೋಹತ್ಯೆ ಪ್ರಕರಣ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿದ್ದು, ಕ್ರಮಕ್ಕೆ ಸೂಚನೆ ನೀಡಲಾಗಿದೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...

THE BEAST CAR : ಡೇಟೋನಾ 500 ಮೋಟಾರ್ ರೇಸ್ಗೆ ಜೀವಕಳೆ ತುಂಬಿದ ಟ್ರಂಪ್ ಕಾರ್

The Beast Car : ಅಮೆರಿಕದ ಅಧ್ಯಕ್ಷರ THE BEAST CAR​ ರೇಸ್​ವೊಂದರ ಲ್ಯಾಪ್​ನಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ಹುರಿದುಂಬಿಸಿತು. ಏರ್ ಫೋರ್ಸ್ ಒನ್ ವಿಮಾನ ರೇಸಿಂಗ್...