spot_img
spot_img

ಕಾಂಗ್ರೇಸ್ನಲ್ಲಿ ಏನಾಗ್ತಿದೆ ಗೊತ್ತಾ? ಸಂಚಲನ ಮೂಡಿಸಿದ ಜಾರಕಿಹೊಳಿ ಹೈಕಮಾಂಡ್ ಗುಪ್ತ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ  ಪ್ರಕರಣದಲ್ಲಿ ತಗ್ಲಾಕೊಂಡಿದ್ದಾರೆ. ಕಾನೂನು ಹೋರಾಟ ಫೇಸ್‌ ಮಾಡುತ್ತಿರುವ ಸಿದ್ದರಾಮಯ್ಯರ ಸಿಎಂ ಖುರ್ಚಿಯ ಮೇಲೆ ಕಾಂಗ್ರೆಸ್ ನಾಯಕರ ಕಣ್ಣುಹಾಕಿದಂತಿದೆ. ಸಿದ್ದರಾಮಯ್ಯ ಅವರನ್ನ ಚೆಂಜ್‌ ಮಾಡಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲಿದೆ.

ಮೊನ್ನೆಯಷ್ಟೇ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ನಾನು ಸಚಿವ ಆಗಿ ದಣಿದು ಬೆಂಡಾಗಿದ್ದೇನೆ. ಮುಂದೆ ಸಿಎಂ ಆಗಬೇಕು ಎನ್ನುವ ಆಸೆ ಬಂದಿದೆ. ಜೀವನದಲ್ಲಿಎಲ್ಲರಿಗೂ ಮಹತ್ವಾಕಾಂಕ್ಷೆಗಳು ಇದ್ದೇ ಇರುತ್ತವೆ. ನಾನು ಮುಖ್ಯಮಂತ್ರಿ ಆಗಬೇಕು ಎಂದು ಆಸೆ ಆಗಿದೆ ಎಂದಿದ್ದರು. ಅವರ ಹೇಳಿಕೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಚರ್ಚೆ ಮುಂದೆ ಬಂದಿದೆ. ಇದರ ಜೊತೆಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ‌ ಅವಾಜಿಲ್ಲದೇ ದೆಹಲಿಗೆ ಹೋಗಿ ಬಂದಿರೋದು ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಠಿಸಿದೆ.

ಬಲ್ಲ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ಸತೀಶ್ ದೆಹಲಿಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿಯಾಗಿ ಬಂದಿದ್ದಾರೆ. ಬೆನ್ನಲ್ಲೇ ದೆಹಲಿ ವರಿಷ್ಠರ ಭೇಟಿ ನೀಡಿರುವ ವಿಚಾರ ಭಾರೀ ಸಂಚಲನ ಮೂಡಿಸಿದೆ. ಮತ್ತೊಂದು ಕಡೆ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಭೇಟಿ ಮಾಡಿದ್ದಾರೆ.

ಇನ್ನು ದೆಹಲಿ ಭೇಟಿ ಬಳಿಕ ಮಂತ್ರಿ ಸತೀಶ್ ಜಾರಕಿಹೊಳಿ ಫುಲ್ ಸೈಲೆಂಟ್ ಆಗಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದೆ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ಜಿ ಪರಮೇಶ್ವರ್ ಜೊತೆ ರಹಸ್ಯ ಸಭೆ ನಡೆಸಿದ್ದರು. ಊಟದ ನೆಪದಲ್ಲಿ ತಮ್ಮ ಸರ್ಕಾರಿ ಮನೆಯಲ್ಲಿ ರಹಸ್ಯ ಸಮಾಲೋಚನೆ ನಡೆಸಿದ್ದರು. ಇದರ‌ ಬೆನ್ನಲ್ಲೆ ಸಡನ್‌ ಆಗಿ ದೆಹಲಿಗೆ ತೆರಳಿದ್ದರು.

ಸತೀಶ್ ಜಾರಕಿಹೊಳಿ-ಪರಮೇಶ್ವರ್​ರಿಂದ ದೆಹಲಿ ವರಿಷ್ಠರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್.. ಮುಖ್ಯಮಂತ್ರಿ ರೇಸ್​ ಏನೂ ಇಲ್ಲ. ನಾನೇ‌ನಕ್ಕೋ ಭೇಟಿ ಮಾಡ್ತೇ‌ನೆ, ಅವರೇನಕ್ಕೋ ಭೇಟಿ ಮಾಡ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿ ಮಾಡೋದು ಪದ್ದತಿ. ಹಾಗಾಗಿ ಅವರು ಹೋಗಿ ಭೇಟಿ ಮಾಡಿರ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕೋದು ಬೇಡ ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...