spot_img
spot_img

ಕಾಂಗ್ರೇಸ್ನಲ್ಲಿ ಏನಾಗ್ತಿದೆ ಗೊತ್ತಾ? ಸಂಚಲನ ಮೂಡಿಸಿದ ಜಾರಕಿಹೊಳಿ ಹೈಕಮಾಂಡ್ ಗುಪ್ತ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ  ಪ್ರಕರಣದಲ್ಲಿ ತಗ್ಲಾಕೊಂಡಿದ್ದಾರೆ. ಕಾನೂನು ಹೋರಾಟ ಫೇಸ್‌ ಮಾಡುತ್ತಿರುವ ಸಿದ್ದರಾಮಯ್ಯರ ಸಿಎಂ ಖುರ್ಚಿಯ ಮೇಲೆ ಕಾಂಗ್ರೆಸ್ ನಾಯಕರ ಕಣ್ಣುಹಾಕಿದಂತಿದೆ. ಸಿದ್ದರಾಮಯ್ಯ ಅವರನ್ನ ಚೆಂಜ್‌ ಮಾಡಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲಿದೆ.

ಮೊನ್ನೆಯಷ್ಟೇ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ನಾನು ಸಚಿವ ಆಗಿ ದಣಿದು ಬೆಂಡಾಗಿದ್ದೇನೆ. ಮುಂದೆ ಸಿಎಂ ಆಗಬೇಕು ಎನ್ನುವ ಆಸೆ ಬಂದಿದೆ. ಜೀವನದಲ್ಲಿಎಲ್ಲರಿಗೂ ಮಹತ್ವಾಕಾಂಕ್ಷೆಗಳು ಇದ್ದೇ ಇರುತ್ತವೆ. ನಾನು ಮುಖ್ಯಮಂತ್ರಿ ಆಗಬೇಕು ಎಂದು ಆಸೆ ಆಗಿದೆ ಎಂದಿದ್ದರು. ಅವರ ಹೇಳಿಕೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಚರ್ಚೆ ಮುಂದೆ ಬಂದಿದೆ. ಇದರ ಜೊತೆಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ‌ ಅವಾಜಿಲ್ಲದೇ ದೆಹಲಿಗೆ ಹೋಗಿ ಬಂದಿರೋದು ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಠಿಸಿದೆ.

ಬಲ್ಲ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ಸತೀಶ್ ದೆಹಲಿಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿಯಾಗಿ ಬಂದಿದ್ದಾರೆ. ಬೆನ್ನಲ್ಲೇ ದೆಹಲಿ ವರಿಷ್ಠರ ಭೇಟಿ ನೀಡಿರುವ ವಿಚಾರ ಭಾರೀ ಸಂಚಲನ ಮೂಡಿಸಿದೆ. ಮತ್ತೊಂದು ಕಡೆ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಭೇಟಿ ಮಾಡಿದ್ದಾರೆ.

ಇನ್ನು ದೆಹಲಿ ಭೇಟಿ ಬಳಿಕ ಮಂತ್ರಿ ಸತೀಶ್ ಜಾರಕಿಹೊಳಿ ಫುಲ್ ಸೈಲೆಂಟ್ ಆಗಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದೆ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ಜಿ ಪರಮೇಶ್ವರ್ ಜೊತೆ ರಹಸ್ಯ ಸಭೆ ನಡೆಸಿದ್ದರು. ಊಟದ ನೆಪದಲ್ಲಿ ತಮ್ಮ ಸರ್ಕಾರಿ ಮನೆಯಲ್ಲಿ ರಹಸ್ಯ ಸಮಾಲೋಚನೆ ನಡೆಸಿದ್ದರು. ಇದರ‌ ಬೆನ್ನಲ್ಲೆ ಸಡನ್‌ ಆಗಿ ದೆಹಲಿಗೆ ತೆರಳಿದ್ದರು.

ಸತೀಶ್ ಜಾರಕಿಹೊಳಿ-ಪರಮೇಶ್ವರ್​ರಿಂದ ದೆಹಲಿ ವರಿಷ್ಠರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್.. ಮುಖ್ಯಮಂತ್ರಿ ರೇಸ್​ ಏನೂ ಇಲ್ಲ. ನಾನೇ‌ನಕ್ಕೋ ಭೇಟಿ ಮಾಡ್ತೇ‌ನೆ, ಅವರೇನಕ್ಕೋ ಭೇಟಿ ಮಾಡ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿ ಮಾಡೋದು ಪದ್ದತಿ. ಹಾಗಾಗಿ ಅವರು ಹೋಗಿ ಭೇಟಿ ಮಾಡಿರ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕೋದು ಬೇಡ ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...