spot_img
spot_img

DRIP IRRIGATION : ಹಸಿರು ಬೆಳಗಾವಿ ನಿರ್ಮಾಣಕ್ಕೆ ಸಸಿಗಳಿಗೆ ನೀರುಣಿಸಲು ಹನಿ ನೀರಾವರಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News:

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಸಸಿಗಳನ್ನ ಉಳಿಸಿಕೊಳ್ಳಲು DRIP IRRIGATION ಪದ್ಧತಿ ಅಳವಡಿಕೆಗೆ ಮುಂದಾಗಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಸಿದ್ದನಗೌಡ ಪಾಟೀಲ್​ ಅವರ ವಿಶೇಷ ವರದಿ. ಹೌದು, ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗುವ ಮುನ್ನ ನಗರವನ್ನು ಪಾಲಿಕೆ ಸ್ವಚ್ಛಗೊಳಿಸಿತ್ತು.

ಪ್ರಮುಖ ವೃತ್ತಗಳ ಗೋಡೆಗಳ ಮೇಲೆ ಬಣ್ಣ ಬಣ್ಣದ ಚಿತ್ರಗಳನ್ನು ಬಿಡಿಸಿ ಅಂದಗೊಳಿಸಲಾಗಿತ್ತು. ರಸ್ತೆವಿಭಜಕಗಳಿಗೆ ಬಣ್ಣ ಬಳಿದು, ಅಲಂಕಾರಿಕ ಸಸಿಗಳನ್ನು ನೆಡಲಾಗಿತ್ತು. ಪ್ರತಿ ಸಸಿಗೂ‌ ಬಳಸಿ ಬಿಸಾಕಿದ ಪ್ಲಾಸ್ಟಿಕ್ ಬಾಟಲಿಗಳನ್ನು ಕೊರೆಸಿ ಅಳವಡಿಸಿ, ಅವುಗಳ ಮೂಲಕ ನೀರು ಪೂರೈಸಲಾಗುತ್ತಿತ್ತು. ಆದರೆ, ಇದು ವರ್ಕೌಟ್ ಆಗಲಿಲ್ಲ. ಈಗ ಹೊಸ ಪ್ರಯೋಗಕ್ಕೆ ಮುಂದಾಗಿರುವ ಪಾಲಿಕೆ ಅಧಿಕಾರಿಗಳು DRIP IRRIGATION ಪದ್ಧತಿ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ.

ಹಸಿರು ಬೆಳಗಾವಿ ನಗರ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಪಣ ತೊಟ್ಟಿದೆ. ಆ ನಿಟ್ಟಿನಲ್ಲಿ ರಸ್ತೆ ವಿಭಜಕಗಳಲ್ಲಿ ಸಸಿಗಳನ್ನು ನೆಡಲಾಗಿತ್ತು. ಆದರೆ, ಅವುಗಳಿಗೆ ನೀರುಣಿಸುವುದು ದೊಡ್ಡ ಸವಾಲಾಗಿತ್ತು. ಹಾಗಾಗಿ, ಪಾಲಿಕೆ ಅಧಿಕಾರಿಗಳು ಒಂದು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, DRIP IRRIGATION ವ್ಯವಸ್ಥೆಗೆ ಮುನ್ನುಡಿ ಬರೆದಿದ್ದಾರೆ. ಅಶೋಕ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚನ್ನಮ್ಮ ವೃತ್ತ, ಅಂಬೇಡ್ಕರ್ ರಸ್ತೆ, ಶ್ರೀಕೃಷ್ಣದೇವರಾಯ ವೃತ್ತ, ಕೆಎಲ್ಇ ರಸ್ತೆವರೆಗೆ ಅದೇ ರೀತಿ ಚನ್ನಮ್ಮ ವೃತ್ತದಿಂದ ಲಿಂಗರಾಜ ದೇಸಾಯಿ ಕಾಲೇಜು ರಸ್ತೆ, ಸಂಭಾಜಿ ಮಹಾರಾಜ ವೃತ್ತ, ಗೋಗಟೆ ವೃತ್ತ, ಕಾಂಗ್ರೆಸ್ ರಸ್ತೆ ಸೇರಿದಂತೆ ನಗರದ ಸುಮಾರು 6.5 ಕಿ.ಮೀ ಪ್ರದೇಶದ ರಸ್ತೆ ವಿಭಜಕಗಳಲ್ಲಿ ಸಸಿಗಳನ್ನು ನೆಡಲಾಗಿತ್ತು.

ಸದ್ಯ ನಗರದ ಶ್ರೀಕೃಷ್ಣದೇವರಾಯ ವೃತ್ತದ ಬಳಿ ಪ್ರಾಯೋಗಿಕವಾಗಿ DRIP IRRIGATION ವ್ಯವಸ್ಥೆ ಕೈಗೊಳ್ಳಲಾಗಿದೆ. ರಸ್ತೆ ವಿಭಜಕದ ಮೇಲೆ ಒಂದು ಸಣ್ಣ ಕಬ್ಬಿಣದ ಟ್ಯಾಂಕ್ ಅಳವಡಿಸಲಾಗಿದೆ. ಅದಕ್ಕೆ ಪೈಪ್ ಜೋಡಿಸಿದ್ದು, ಒಂದೊಂದು ಸಸಿಗೆ ಒಂದೊಂದು ಪಾಯಿಂಟ್ ತೆರೆಯಲಾಗಿದೆ. ಹನಿ ಹನಿಯಾಗಿ ನೀರು ಬೀಳುವಂತೆ ಮಾಡಲಾಗಿದೆ. ನೀರು ಖಾಲಿ ಆದ ಮೇಲೆ ಸಿಬ್ಬಂದಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕ್​ಗೆ ನೀರು ತುಂಬುತ್ತಿದ್ದಾರೆ.

ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ. ಅವರು ಮಾತನಾಡಿ, ‘ಪಾಲಿಕೆಯವರು ಸಸಿಗಳನ್ನು ನೆಡುತ್ತಾರೆ. ಆದರೆ, ಅವುಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದಿಲ್ಲ ಎಂಬ ಅಪವಾದವಿತ್ತು. ಹಾಗಾಗಿ, ಈ ಬಾರಿ ಅಧಿವೇಶನ ಸಂದರ್ಭದಲ್ಲಿ ಹೊಸದಾಗಿ ಸಸಿಗಳನ್ನು ನೆಟ್ಟಿದ್ದೆವು. ಈ ವೇಳೆ ನೀರುಣಿಸಲು ಪ್ರತಿ ಸಸಿಗೆ ಬಾಟಲಿ ಕಟ್ಟಿದ್ದೆವು. ಆಗ ಬಹಳಷ್ಟು ನೀರು ಪೋಲಾಗುತ್ತಿತ್ತು. ಅಲ್ಲದೇ ಸಿಬ್ಬಂದಿಗೆ ಬಹಳಷ್ಟು ಸಮಯ ಹಿಡಿಯುತ್ತಿತ್ತು.  ಹಾಗಾಗಿ, DRIP IRRIGATION ಮೂಲಕ ನೀರು ಹಾಕುತ್ತಿದ್ದೇವೆ’ ಎಂದು ಹೇಳಿದರು. ಪುಣೆ ಮತ್ತು ಕೊಲ್ಹಾಪುರದಿಂದ ತಂದಿದ್ದ ಬಬೂನ್ ವಿಲ್ಲಾ, ಜತ್ರಾಪ್, ಡಾಗ್ ಇಕ್ಸೋರಾ, ಕ್ರಿಸ್ಟೇನಾ, ಗೋಲ್ಡನ್ ಸೈಪ್ರಸ್, ಸೈಕಸ್ ಪಾಂಡಾ ತರಹದ 4500 ಅಲಂಕಾರಿಕ ಸಸಿಗಳನ್ನು ನೆಟ್ಟಿದ್ದರು. ಈಗ ಬಹುತೇಕ ಸಸಿಗಳು ಚಿಗುರೊಡೆದಿದ್ದು, ನಗರದ ಸೌಂದರ್ಯವನ್ನು ಹೆಚ್ಚಿಸುತ್ತಿವೆ.

ಆರಂಭದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ನೀರು ಪೂರೈಕೆಗೆ ಬಳಸಲಾಗಿತ್ತು. ಅದು ಅಷ್ಟೊಂದು ಪರಿಣಾಮಕಾರಿ ಆಗದ ಹಿನ್ನೆಲೆ ಹೊಸ ಉಪಾಯ ಕಂಡುಕೊಂಡ ಪಾಲಿಕೆ ಅಧಿಕಾರಿಗಳು ಹನಿ ನೀರಾವರಿಯ ಮೊರೆ ಹೋಗಿದ್ದಾರೆ. ಪಾಲಿಕೆ ಆರ್ಥಿಕತೆಗೆ ತೊಂದರೆ ಆಗದಂತೆ‌‌ ಸಿಎಸ್​ಆರ್ ಅನುದಾನದಿಂದ ಪೈಪ್ ಅಳವಡಿಸುವ ಕೆಲಸ ಆಗುತ್ತಿದೆ. ಸ್ಥಳಿಯರಾದ ಸತೀಶ್ ಶೆಟ್ಟಿ ಮಾತನಾಡಿ, ‘ಮಹಾನಗರ ಪಾಲಿಕೆಯಿಂದ ಇದೊಂದು ಉತ್ತಮ ಬೆಳವಣಿಗೆ.

ಮೊದಲೆಲ್ಲಾ ಅಧಿವೇಶನ ಬಂದಾಗ ಸಸಿಗಳನ್ನು ನೆಟ್ಟು ಸುಮ್ಮನಾಗುತ್ತಿದ್ದರು. ಸರಿಯಾಗಿ ನಿರ್ವಹಣೆ ಆಗುತ್ತಿರಲಿಲ್ಲ. ಆದರೆ, ಈಗ DRIP IRRIGATION ಮೂಲಕ ನೀರುಣಿಸುವ ಕಾರ್ಯ ಶ್ಲಾಘನೀಯ. ಅದೇ ರೀತಿ ಸಸಿಗಳ ಸುತ್ತಲೂ ಕಸ ಬೆಳೆಯದಂತೆ ನೋಡಿಕೊಳ್ಳಬೇಕು. ಸ್ವಚ್ಛ, ಸುಂದರ, ಹಸಿರು ಬೆಳಗಾವಿ ನಿರ್ಮಾಣಕ್ಕೆ ನಾವು ಕೂಡ ಪಾಲಿಕೆಗೆ ಕೈಜೋಡಿಸುತ್ತೇವೆ’ ಎಂದು ಭರವಸೆ ನೀಡಿದರು. ಸ್ವಚ್ಛ ಸುಂದರ, ಹಸಿರು ಬೆಳಗಾವಿ ನಿರ್ಮಿಸಬೇಕು ಎಂಬ ಧ್ಯೇಯದೊಂದಿಗೆ ಈಗ 6.5 ಕಿ.ಮೀ ಸಸಿಗಳನ್ನು ನೆಡಲಾಗಿದೆ.

ಸಂಘ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಮೂಲಕ‌ DRIP IRRIGATION ಪೈಪ್ ಅಳವಡಿಸಿದ್ದೇವೆ. ಇದಕ್ಕೆ ಅಂತಾ ಪಾಲಿಕೆಯಿಂದ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಬರುವ ದಿನಗಳಲ್ಲಿ ನಗರದ ಎಲ್ಲಾ ರಸ್ತೆ ವಿಭಜಕಗಳಲ್ಲಿ ತರಹೇವಾರಿ ಅಲಂಕಾರಿಕ ಸಸಿಗಳನ್ನು ನೆಟ್ಟು, ಕುಂದಾನಗರಿ ಬಣ್ಣ ಬಣ್ಣದ ಹೂವುಗಳಿಂದ ಕಂಗೊಳಿಸುವಂತೆ ಮಾಡುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾಲಿಕೆ ಪರಿಸರ ಅಭಿಯಂತರ ಹನುಮಂತ ಕಲಾದಗಿ ಅವರು ಮಾತನಾಡಿ, ‘ನಗರದ ಬಸವೇಶ್ವರ ಉದ್ಯಾನ ಮತ್ತು ಬಾಬು ಜಗಜೀವನರಾಮ್ ಉದ್ಯಾನದಲ್ಲಿ‌ ಮಹಾನಗರ ಪಾಲಿಕೆಯಿಂದಲೇ ಸಸಿಗಳನ್ನು ಬೆಳೆಸುತ್ತಿದ್ದೇವೆ. ಇನ್ಮುಂದೆ ಬೇರೆ ಕಡೆಯಿಂದ ಸಸಿಗಳನ್ನು ತರುವುದಿಲ್ಲ. ನಾವು ಬೆಳೆಸಿದ ಸಸಿಗಳನ್ನು ಬಳಸಿಕೊಳ್ಳುತ್ತೇವೆ. ಸ್ವಚ್ಛ ಮತ್ತು ಹಸಿರು ಬೆಳಗಾವಿ ನಿರ್ಮಾಣಕ್ಕೆ ಸಾರ್ವಜನಿಕರು ಕೂಡ ನಮ್ಮ ಜೊತೆ ಕೈಜೋಡಿಸಿ’ ಎಂದು ಕೇಳಿಕೊಂಡರು.

ಇದನ್ನುಒದಿರಿ : CM SIDDARAMAIAH : ಫೆ.10 ರೊಳಗೆ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...