spot_img
spot_img

ELEPHANTS DESTROY PADDY CROP : ಕಟಾವಿಗೆ ಬಂದ ಭತ್ತ ನಾಶಪಡಿಸಿದ ಕಾಡಾನೆಗಳು

spot_img
spot_img

Share post:

Hassan (Beluru) News:

22 forest elephant ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ ಮಹಿಳೆ ಕಟಾವು ಮಾಡಿ ಒಕ್ಕುವ ಸಲುವಾಗಿ ರಾಶಿ ಹಾಕಿದ್ದ ಭತ್ತವನ್ನು ತುಳಿದು ಹಾಳುಮಾಡಿವೆ. ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಟಾವಿಗೆ ಬಂದ ಭತ್ತವನ್ನ ಕಾಡಾನೆಗಳು ತುಳಿದು ನಾಶಪಡಿಸಿವೆ.

ಹೌದು  ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ forest elephants ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ.ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಮಲಸಾವರ ಹಾಗೂ ಅನುಘಟ್ಟ ಗ್ರಾ. ಪಂ ವ್ಯಾಪ್ತಿಯ ಗ್ರಾಮಗಳ ಸುತ್ತಮುತ್ತ ಕಾಡಾನೆಗಳು ಬೀಡುಬಿಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಆನೆಗಳ ಗುಂಪು ಹಿಂಡು ಹಿಂಡಾಗಿ ಬರುತ್ತಿವೆ.

ರೈತರಿಗೆ ತಾವು ಬೆಳೆದ ಬೆಳಗಳನ್ನು ರಕ್ಷಿಸಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಲೂರು ತಾಲೂಕಿನಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಈಗಾಗಾಲೇ ಆನೆಗಳಿಗೆ ರೇಡಿಯೋ ಕಾಲರ್ ಹಾಕುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿದೆ.ಸರ್ಕಾರ ಕೂಡಲೇ ಆನೆಗಳ ಸ್ಥಳಾಂತರ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಅನುಘಟ್ಟ ಗ್ರಾಮದ ಎ. ಎನ್ ನಾಗರಾಜು ಎಂಬುವರಿಗೆ ಸೇರಿದ 1 ಎಕರೆಯಲ್ಲಿ ಸಮೃದ್ಧವಾಗಿ ಬೆಳೆದಿದ್ದ ಬೆಳೆ ಭುವನೇಶ್ವರಿ ಗುಂಪಿನ ಕಾಡಾನೆಗಳ ಸಂಚಾರದಿಂದ ಧ್ವಂಸವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ.

Forest Department:

ಶ್ರವಣಬೆಳಗೊಳದ ಬೆಟ್ಟದ ತಪ್ಪಲು ಚಿರತೆಗಳ ವಾಸಸ್ಥಾನವಾಗಿದ್ದು, ಸುಂಡಹಳ್ಳಿ, ಚಿನ್ನೇನಹಳ್ಳಿ, ಚಿನ್ನಾಥಪುರ, ನಾಗಯ್ಯನಕೊಪ್ಪಲು, ಹೊಸಹಳ್ಳಿ, ಚಲ್ಯ, ಮಂಜುನಾಥಪುರ, ದೇವರಹಳ್ಳಿ ಬೆಕ್ಕ ಸೇರಿದಂತೆ ತಪ್ಪಲಿನ ಸಮೀಪವಿರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆಗಳು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೇ ಶ್ರವಣಬೆಳಗೊಳ ಬೆಟ್ಟದ ತಪ್ಪಲಿನ ನಾಗಯ್ಯನ ಕೊಪ್ಪಲಿನಲ್ಲಿ ಕೇಶವಮೂರ್ತಿ ಎಂಬುವರ ಮನೆಯ ನಾಯಿಯನ್ನು ತಿನ್ನಲು ಬಂದು ವಿಫಲಯತ್ನ ನಡೆಸಿತ್ತು.

hassan ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ಆಹಾರ ಅರಸಿ ಬಂದ ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ. ಗ್ರಾಮದ ರಘು ಎಂಬುವರ ತೋಟದಲ್ಲಿ ಅರಣ್ಯಾಧಿಕಾರಿಗಳು ಬೋನು ಇಟ್ಟಿದ್ದರು. ನಸುಕಿನಜಾವ 3.45ರ ವೇಳೆ ಚಿರತೆ ಬೋನಿಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬೋನ್ ಇಟ್ಟ 2 ದಿನಗಳ ಬಳಿಕ ಬೋನಿನಲ್ಲಿದ್ದ ನಾಯಿಯನ್ನು ತಿನ್ನಲು ಬಂದು ಚಿರತೆ ಸೆರೆಯಾಗಿದೆ. ಅದರ ಬೆನ್ನಲ್ಲೇ ಸುಂಡಹಳ್ಳಿ ಗ್ರಾಮದ ಬಾರೆಯ ಮೇಲೆ ಚಿರತೆಗಳು ಕಾಣಿಸಿಕೊಂಡಿದ್ದವು.

ಕಳೆದ 2 ವಾರಗಳ ಹಿಂದಷ್ಟೇ ಚಿರತೆಯೊಂದು ನಾಯಿಯೊಂದನ್ನು ಹೊತ್ತೊಯ್ದಿತ್ತು. ಇದರಿಂದ ಕಂಗಾಲಾಗಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಬೋನ್ ಇರಿಸುವಂತೆ ಮನವಿ ಮಾಡಿದ್ದರು. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕೊಂಚ ನಿರಾಳತೆ ಮೂಡಿದ್ದು, ಈ ಭಾಗದಲ್ಲಿ ಕಾಣಿಸಿಕೊಳ್ಳುವ ಚಿರತೆಗಳನ್ನು ಆದಷ್ಟು ಬೇಗ ಸೆರೆಹಿಡಿಯುವ ಮೂಲಕ ಕಾಡಿಗೆ ಬಿಡಬೇಕೆಂದು ಆಗ್ರಹಿಸಿದ್ದಾರೆ. ‘ಸೆರೆಯಾದ ಚಿರತೆಯನ್ನು ಹಾಸನದ ಬುರಡಾಳು ಬಾರೆಯ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ’ ಎಂದು ಅರಣ್ಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...