spot_img
spot_img

EMERGENCY FILM SPECIAL SCREENING : ನಾಗ್ಪುರದಲ್ಲಿ ಕಂಗನಾ, ಅನುಪಮ್ ಖೇರ್ ಜೊತೆ ಕುಳಿತು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Nagpur News:

ನಾಗ್ಪುರದಲ್ಲಿ ಸಚಿವ ನಿತಿನ್ ಗಡ್ಕರಿ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದರು.ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, FILMದ ವಿಶೇಷ ಸ್ಕ್ರೀನಿಂಗ್​ನ ಕೆಲ FILMಗಳನ್ನು ಶೇರ್ ಮಾಡಿದ್ದಾರೆ. ಗಡ್ಕರಿ, ಕಂಗನಾ ಮತ್ತು ಖೇರ್ ಪರಸ್ಪರ ಮಾತನಾಡುತ್ತಿರುವುದನ್ನು ಒಂದು ಚಿತ್ರದಲ್ಲಿ ಕಾಣಿಸುತ್ತದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ನಾಗ್ಪುರದಲ್ಲಿ ಕಂಗನಾ ರನೌತ್ ಮತ್ತು ಅನುಪಮ್ ಖೇರ್ ಅಭಿನಯದ ‘ಎಮರ್ಜೆನ್ಸಿ’FILM ವೀಕ್ಷಿಸಿದರು.”ಜನವರಿ 17ರಂದು ಬಿಡುಗಡೆಯಾಗಲಿರುವ ಎಮರ್ಜೆನ್ಸಿ ಚಿತ್ರದ ಪ್ರದರ್ಶನದಲ್ಲಿ ನಿತಿನ್‌ ಜಿ ಅವರೊಂದಿಗೆ” ಎಂದು ಕಂಗನಾ ತಮ್ಮ ಪೋಸ್ಟ್​ಗೆ ಶೀರ್ಷಿಕೆ ಬರೆದಿದ್ದಾರೆ.

“ಇಂದು ನಾಗ್ಪುರದಲ್ಲಿ ಟೀಂ ಕಂಗನಾ ಮತ್ತು ಅನುಪಮ್ ಖೇರ್ ಅಭಿನಯದ ‘ಎಮರ್ಜೆನ್ಸಿ’ ಚಲನಚಿತ್ರದ ಪ್ರದರ್ಶನದಲ್ಲಿ ಭಾಗಿಯಾಗಿದ್ದೆ. ನಮ್ಮ ರಾಷ್ಟ್ರದ ಇತಿಹಾಸದ ಕರಾಳ ಅಧ್ಯಾಯವನ್ನು ಇಷ್ಟೊಂದು ಸತ್ಯಾಸತ್ಯತೆ ಮತ್ತು ಉತ್ಕೃಷ್ಟತೆಯೊಂದಿಗೆ ಪ್ರಸ್ತುತಪಡಿಸಿದ ಚಲನಚಿತ್ರ ನಿರ್ಮಾಪಕರು ಮತ್ತು ನಟರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಭಾರತದ ಇತಿಹಾಸದಲ್ಲಿನ ಮಹತ್ವದ ಅವಧಿಯೊಂದನ್ನು ಚಿತ್ರಿಸುವ ಈ ಚಿತ್ರವನ್ನು ಎಲ್ಲರೂ ನೋಡಬೇಕೆಂದು ನಾನು ಕರೆ ನೀಡುತ್ತೇನೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.ಇತ್ತೀಚೆಗೆ, ಕಂಗನಾ ಮತ್ತು ಖೇರ್ ಇಬ್ಬರೂ ಎಎನ್ಐ ಜೊತೆ FILM ನಿರ್ಮಾಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. 1975ರಿಂದ 1977ರವರೆಗೆ 21 ತಿಂಗಳ ಕಾಲ ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಮತ್ತು ದೇಶದಲ್ಲಿ ಅದರಿಂದಾದ ಪರಿಣಾಮಗಳ ಬಗ್ಗೆ ಸಿನಿಮಾದಲ್ಲಿ ಚಿತ್ರಿಸಲಾಗಿದೆ.ಖೇರ್ ಮತ್ತು ಕಂಗನಾ ಅಭಿನಯದ FILM ‘ಎಮರ್ಜೆನ್ಸಿ’ ಜನವರಿ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದರಲ್ಲಿ ಶ್ರೇಯಸ್ ತಲ್ಪಾಡೆ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ನಟಿಸಿದ್ದಾರೆ.FILMದ ಬಗ್ಗೆ ಮಾತನಾಡಿದ ಕಂಗನಾ, “FILM ನಿರ್ಮಾಣದಲ್ಲಿ ಅನುಪಮ್ ಖೇರ್ ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಖೇರ್ ಅವರನ್ನು FILMದ ನಿಜವಾದ ಹೀರೋ ಎಂದು ಕರೆದ ಕಂಗನಾ, ಖೇರ್ ಕೈ ಜೋಡಿಸದಿದ್ದರೆ FILM ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ” ಎಂದು ಹೇಳಿದರು.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಚಿವ ಗಡ್ಕರಿ, ನಮ್ಮ ರಾಷ್ಟ್ರದ ಇತಿಹಾಸದ ಕರಾಳ ಅಧ್ಯಾಯವನ್ನು ಸತ್ಯಾಸತ್ಯತೆ ಮತ್ತು ಉತ್ಕೃಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಕ್ಕಾಗಿ ಎಮರ್ಜೆನ್ಸಿ FILM ತಂಡವನ್ನು ಶ್ಲಾಘಿಸುವುದಾಗಿ ಹೇಳಿದ್ದಾರೆ.”ಈ ಚಿತ್ರದಲ್ಲಿ ಅನುಪಮ್ ಜಿ ಇರುವುದು ನನಗೆ ಬಹಳ ಮುಖ್ಯವಾಗಿತ್ತು.

ಅವರು ‘ಎಮರ್ಜೆನ್ಸಿ’ FILM ನಿರ್ಮಾಣದಲ್ಲಿ ಭಾಗಿಯಾಗಲು ನಿರಾಕರಿಸಿದ್ದರೆ, ಈ ಚಿತ್ರ ಮಾಡಲು ನನಗೆ ಸಾಧ್ಯವಾಗುತ್ತಿರಲಿಲ್ಲ. FILMದಲ್ಲಿ ಅವರ ವ್ಯಕ್ತಿತ್ವವನ್ನು ನೋಡಿ… ಅವರ ಮುಖದಲ್ಲಿ ಪ್ರಾಮಾಣಿಕತೆ ಕಾಣಿಸುತ್ತದೆ. ಜಯಪ್ರಕಾಶ್ ನಾರಾಯಣ್ ಅವರ ಪಾತ್ರವನ್ನು ಖೇರ್ ಹೊರತುಪಡಿಸಿದರೆ ಬೇರಾರೂ ಮಾಡಲು ಸಾಧ್ಯವಿಲ್ಲ” ಎಂದು ಕಂಗನಾ ಹೇಳಿದರು.

ಇದನ್ನು ಓದಿರಿ : PAKISTAN TTP : ಟಿಟಿಪಿ ಉಗ್ರರಿಂದ ಪರಮಾಣು ಆಯೋಗದ 16 ಕಾರ್ಮಿಕರ ಅಪಹರಣ,

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...