spot_img
spot_img

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

spot_img
spot_img

Share post:

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ (ಅವಿಭಜಿತ ದಕ್ಷಿಣ ಕನ್ನಡ) ಜಿಲ್ಲೆಗಳು ಬ್ಯಾಂಕಿಂಗ್​ ಕ್ಷೇತ್ರದಲ್ಲಿ ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿವೆ. ಇಲ್ಲಿಂದ ಆರಂಭವಾಗಿದ್ದ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ವಿಜಯಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ಮತ್ತು ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್ ಪ್ರಮುಖ ಬ್ಯಾಂಕುಗಳಾಗಿ ಗುರುತಿಸಿಕೊಂಡಿವೆ.
1925ರಲ್ಲಿ ಸಿಂಡಿಕೇಟ್ ಬ್ಯಾಂಕ್ ಆರಂಭವಾಗಿತ್ತು. ‘ಡೈಲಿ ಡಿಪಾಸಿಟ್ ಸ್ಕೀಮ್’ (ಪಿಗ್ಮಿ ಸಂಗ್ರಹಿಸಿ) ಎಂಬ ವಿನೂತನ ಯೋಜನೆಯ ಮೂಲಕ ಬಡವರಿಗೆ ಬ್ಯಾಂಕ್ ಮೆಟ್ಟಿಲೇರಲು ಅನುಕೂಲ ಮಾಡಿಕೊಟ್ಟಿತು. 1906ರಿಂದಲೂ ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಾ ಬರುತ್ತಿದೆ. ಕೆನರಾ ಬ್ಯಾಂಕ್ 1906‌ರಲ್ಲಿ ಆರಂಭವಾಗಿತ್ತು. ಕೆನರಾ ಪ್ರಥಮವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಆರಂಭಿಸಿತ್ತು. 1906ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ಕೂಡ ಕಾರ್ಯಾಚರಣೆ ಆರಂಭಿಸಿತ್ತು.
ಇದು ಕೃಷಿಕರಿಗೆ ಆರ್ಥಿಕ ನೆರವು ಒದಗಿಸುವಲ್ಲಿ ಮುಂಚೂಣಿಯಲ್ಲಿತ್ತು. ವಿಜಯಾ ಬ್ಯಾಂಕ್ 1931ರಲ್ಲಿ ಆರಂಭವಾಗಿ ವ್ಯಾಪಾರ ಮತ್ತು ಸಮುದಾಯದ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಿದವು. ಇನ್ನು 1924ರಲ್ಲಿ ಆರಂಭವಾದ ಕರ್ಣಾಟಕ ಬ್ಯಾಂಕ್ ಖಾಸಗಿ ವಲಯದಲ್ಲಿ ಅತ್ಯುತ್ತಮ ಸೇವೆಗಳನ್ನು ಒದಗಿಸುತ್ತಿದ್ದು, ದೇಶದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿದೆ.
“ಅವಿಭಿಜಿತ ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷ ರೀತಿಯಲ್ಲಿ ಬೆಳೆದಿದೆ. ಇಲ್ಲಿನ ಕೆನರಾ ಬ್ಯಾಂಕ್ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿದೆ. ಸಿಂಡಿಕೇಟ್ ಬ್ಯಾಂಕ್ ಸ್ಥಾಪನೆಯಾದಾಗ ಆರಂಭಿಸಿದ ಡೈಲಿ ಡೆಪಾಸಿಟ್​ ಸ್ಕೀಮ್​ ಠೇವಣಿಯ ಮೊತ್ತ ದಿನಕ್ಕೆ 25 ಪೈಸೆ ಆಗಿತ್ತು. ಈ ಮೊತ್ತವನ್ನು ರೈತರಿಗೆ ಸಾಲದ ರೂಪದಲ್ಲಿ ನೀಡಿತ್ತು. ಇದು ಸಿಂಡಿಕೇಟ್ ಬ್ಯಾಂಕ್​ನ ದೊಡ್ಡ ಸಾಧನೆ. ದಕ್ಷಿಣ ಕರ್ನಾಟಕದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿದ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿ. ಇದಕ್ಕೆ ಕಾರಣ ಬ್ಯಾಂಕ್‌ಗಳು. ಇಲ್ಲಿ ಸ್ಥಾಪನೆಯಾದ ಬ್ಯಾಂಕ್‌ಗಳು ಕೇವಲ ಬ್ಯಾಂಕ್‌ಗಳಲ್ಲ, ರೈತರು ಮತ್ತು ಇತರ ಜನರ ಅರ್ಥಿಕತೆಗೆ ಬೆನ್ನೆಲುಬು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕತೆಯೂ ಅಭಿವೃದ್ಧಿ ಹೊಂದಿತು” ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಬ್ಯಾಂಕ್ ದಿನದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿಯ ಬ್ಯಾಂಕಿಂಗ್ ಇತಿಹಾಸವನ್ನು ಸ್ಮರಿಸುವುದು ಮಾತ್ರವಲ್ಲ, ಇಂದಿನ ಸವಾಲುಗಳನ್ನು ಚರ್ಚಿಸುವುದು ಮಹತ್ವವಾಗಿದೆ. ಹೆಚ್.ವಿ.ರಾವ್ ಅವರಂತೆ, “ಬ್ಯಾಂಕ್‌ಗಳ ಬದಲಾವಣೆಯು ಸ್ಥಳೀಯ ಆರ್ಥಿಕತೆಯನ್ನು ಬಲಪಡಿಸಬೇಕು” ಎಂಬ ನಿಲುವು ಇಡೀ ದೇಶದ ಅಭಿವೃದ್ಧಿಗೆ ಪೂರಕವಾಗಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ಕು ರಾಷ್ಟ್ರೀಕೃತ ಮತ್ತು ಒಂದು ಖಾಸಗಿ ರಂಗದ ಬ್ಯಾಂಕ್​ಗಳು ಆರಂಭವಾದರೂ ಇದೀಗ ಒಂದು ರಾಷ್ಟ್ರೀಕೃತ ಮತ್ತು ಒಂದು ಖಾಸಗಿ ಬ್ಯಾಂಕ್ ಮಾತ್ರ ಉಳಿದಿದೆ. ಬ್ಯಾಂಕ್ ಆಫ್​ ಬರೋಡಾದೊಂದಿಗೆ ವಿಜಯ ಬ್ಯಾಂಕ್, ಕೆನರಾ ಬ್ಯಾಂಕ್​ನೊಂದಿಗೆ ಸಿಂಡಿಕೇಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಜೊತೆ ಕಾರ್ಪೋರೇಷನ್ ಬ್ಯಾಂಕ್ ವಿಲೀನವಾಗಿದೆ. ಇದರ ಪರಿಣಾಮ, ಇದೀಗ ಕೆನರಾ ಬ್ಯಾಂಕ್ ಮತ್ತು ಕರ್ಣಾಟಕ ಬ್ಯಾಂಕ್ ಮಾತ್ರ ಉಳಿದುಕೊಂಡಿದೆ.
ಎಐಬಿಇಎ (ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯಿಸ್ ಅಸೋಸಿಯೇಶನ್)ನ ಮಾಜಿ ರಾಜ್ಯ ಉಪಾಧ್ಯಕ್ಷ ಹೆಚ್.ವಿ.ರಾವ್, ದಕ್ಷಿಣ ಕನ್ನಡ ಮತ್ತು ಉಡುಪಿಯ ಬ್ಯಾಂಕಿಂಗ್ ಕ್ಷೇತ್ರದ ಇತಿಹಾಸ ಮತ್ತು ಪ್ರಸ್ತುತ ಸ್ಥಿತಿಯ ಕುರಿತು ತೀವ್ರವಾಗಿ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಹಲವಾರು ಶಾಖೆಗಳು ಮುಚ್ಚಲ್ಪಟ್ಟಿದ್ದು, ಬ್ಯಾಂಕ್ ಉದ್ಯೋಗಾವಕಾಶಗಳು ಕಡಿಮೆಯಾಗಿವೆ. ಸಿಂಡಿಕೇಟ್ ಬ್ಯಾಂಕ್​ನ ಹಂಪನಕಟ್ಟಾ ಶಾಖೆಯೊಂದರಲ್ಲೇ ಹಿಂದೊಮ್ಮೆ 120 ನೌಕರರಿದ್ದರು. ಇಂದು ಕೇವಲ 18 ಮಂದಿ ಮಾತ್ರ ಇದ್ದಾರೆ. 1970ರ ದಶಕದಲ್ಲಿ ದಕ್ಷಿಣ ಕನ್ನಡದ ಯುವಜನತೆಯಲ್ಲಿ 20% ಮಂದಿ ಬ್ಯಾಂಕ್ ಉದ್ಯೋಗಸ್ಥರಾಗಿದ್ದರು. ಆದರೆ ಇಂದು ಈ ಪ್ರಮಾಣ 5%ಕ್ಕೆ ಇಳಿದಿದೆ” ಎಂದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...