spot_img
spot_img

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ ಬಾರಿಯ ಕನ್ನಡದ ಬಿಗ್​ಬಾಸ್​ನಲ್ಲಿ ದಿನಕೊಂದು ತಿರುವು, ಊಹಿಸಲಾರದ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಸೈಲೆಂಟ್​ ಆಗಿದ್ದ ಬಿಗ್​ಬಾಸ್​ ಮನೆ ಈಗ ಸಖತ್ ವೈಲೆಂಟ್​ ಆಗಿದೆ. ಈ ಬಾರಿಯ ಬಿಗ್​ಬಾಸ್​ ಮನೆಗೆ ಬಂದ ಸ್ಪರ್ಧಿಗಳು ಟಾಸ್ಕ್​ಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಹೌದು, ಈ ಬಾರಿ ಬಿಗ್​​ಬಾಸ್​ ಗೇಮ್​​ನಲ್ಲಿ ಸ್ಪರ್ಧಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ, ಎರಡು ಟಿವಿ ಚಾನೆಲ್​​ಗಳನ್ನ ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. ಅಂತೆಯೇ ಮೊನ್ನೆಯಿಂದ ಬಿಗ್​ಬಾಸ್ ಮನೆ ಎರಡು ಟಿವಿ ವಾಹಿನಿಯಾಗಿ ಪರಿವರ್ತನೆಗೊಂಡಿದೆ. ಅಂತೆಯೇ ಟಿವಿ ವಾಹಿನಿಯ ಎದುರಾಳಿ ಸ್ಪರ್ಧಿಗಳಿಗೆ ಟಾಸ್ಕ್ ನೀಡಲಾಗುತ್ತಿದೆ. ನಿನ್ನೆಯ ಸಂಚಿಕೆಯಲ್ಲಿ ಶಿಶಿರ್ ಗೆಳತಿ ಐಶ್ವರ್ಯಾಗೆ ಮೂರು ಹಾಗಲಕಾಯಿ ತಿನ್ನುವಂತೆ ಕೇಳಿಕೊಂಡಿದ್ದಾರೆ.

ಅದೇ ರೀತಿ ಗೌತಮಿಗೆ ರಜತ್​​ ಎರಡು ಹಸಿ ಮೆಣಸಿನಕಾಯಿ ತಿನ್ನುವ ಟಾಸ್ಕ್​ ನೀಡಲಾಗಿದೆ. ಅಲ್ಲದೇ ರಜತ್​ಗೆ ಉಗ್ರಂ ಮಂಜು ತನ್ನ ತಲೆ ಕೂದಲು ಬೋಳಿಸಿಕೊಳ್ಳುವಂತೆ ಹೇಳಿದ್ದಾರೆ. ಅದಕ್ಕೆ ರಜತ್ ‘ಓಕೆ’ ಎಂದು ತಮ್ಮ ಕೂದಲನ್ನೂ ಟ್ರಿಮ್​ ಮಾಡಿಸಿಕೊಂಡಿದ್ದಾರೆ. ಇಂದು ರಿಲೀಸ್​ ಆದ ಹೊಸ ಪ್ರೋಮೋದಲ್ಲಿ ರಜತ್​ ಟೀಮ್​ ತ್ರಿವಿಕ್ರಮ್​ಗೆ ನೇರವಾದ ಸವಾಲ್ ಹಾಕಿದ್ದಾರೆ.

ಅದುವೆ ಕೂದಲು, ಮೀಸೆ ಹಾಗೂ ಗಡ್ಡವನ್ನು ಬೋಳಿಸಿಕೊಳ್ಳಬೇಕು ಅಂತ. ಆದರೆ ಅದಕ್ಕೆ ತ್ರಿವಿಕ್ರಮ್​ ತಲೆ ಕೂದಲನ್ನು ಮಾತ್ರ ಬೋಳಿಸೋದಾಗಿ ಹೇಳಿದ್ದಾರೆ.
ಆದರೆ ಇಲ್ಲಿ ತ್ರಿವಿಕ್ರಮ್ ಟೀಮ್​ ಅವರು ಅವರಿಗೆ ಇಷ್ಟ ಬಂದ ಹಾಗೇ ಟಾಸ್ಕ್​ ಆಡುತ್ತಿದ್ದಾರೆ ಎಂದು ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಎದುರಾಳಿ ತಂಡದವರು ಕೊಟ್ಟ ಟಾಸ್ಕ್​ ಅನ್ನು ಪದೇ ಪದೇ ಬದಲಾಯಿಸಿದ್ದಾರೆ. ಇದೇ ವಿಚಾರಕ್ಕೆ ರಜತ್​ ತಂಡ ಜೋರಾಗಿ ಗಲಾಟೆ ಮಾಡಿಕೊಂಡಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...