spot_img
spot_img

ರೈತರಿಗೆ ಖುಷಿ ವಿಷಯ ನಂದಿನಿ ಹಾಲಿನ ದರ ಹೆಚ್ಚಳ: ಮಾಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು.!

spot_img
spot_img

Share post:

ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇದೇ ವರ್ಷದ ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ.

ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಈ ಹೆಚ್ಚಳ ಮಾಡಿದ ಹಾಲಿನ ದರ ನೇರವಾಗಿ ರೈತರಿಗೆ ಹೋಗಬೇಕು ಎಂದರು.

ನಂದಿನ ಹಾಲಿನ ದರವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹೆಚ್ಚಳ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ಹಾಲಿನ ದರ ಹೆಚ್ಚಳ ಮಾಡಿದಾಗ ಟೀಕಿಸುವ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, “ನೀವು(ಜೆಡಿಎಸ್ ನಾಯಕರು) ರೈತರ ಮಕ್ಕಳು ಎಂದು ಹೇಳಿಕೊಳ್ಳುತ್ತೀರಿ. ಆದರೆ, ನೀವು ಯಾರಾದರೂ ರೈತರಿಗೆ ಏನಾದರೂ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ಏನೂ ಮಾಡದೇ ನಾವು ರೈತರ ಮಕ್ಕಳು ಅಂತ ಹೇಳಿಕೊಳ್ಳುತ್ತೀರಿ. ನಾವು ಹಾಲಿನ ದರ 3 ರೂ. ಹೆಚ್ಚಳ ಮಾಡಿ ಅದರ ಲಾಭವನ್ನು ರೈತರಿಗೆ ವರ್ಗಾಯಿಸಲು ಮುಂದಾದರೆ ಅದನ್ನು ವಿರೋಧಿಸುತ್ತೀರಿ” ಎಂದು ಟೀಕಿಸಿದರು.

ಇದನ್ನೂ ಓದಿ:IIMB Recruitment 2024; ನಮ್ಮ ರಾಜ್ಯದಾನಿಯಲ್ಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನ.!.

ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಬಹಳಷ್ಟು ಒಕ್ಕಲಿಗ ನಾಯಕರು ಅನಿಸಿಕೊಂಡವರು ಮಾಡಲಿಲ್ಲ ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರಿ ಸಿಎಂ ಟಾಂಗ್​ ನೀಡಿದರು.

ನಂದಿನ ಹಾಲಿನ ದರ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಯಥಾ ಪ್ರಕಾರ ಮತ್ತೆ ಹಳೇ ಡೈಲಾಗ್​​ ಹೊಡೆದ ಸಿಎಂ, ಜೆಡಿಎಸ್​​ ಟೀಕಿಸುತ್ತಾ ಹೆಚ್ಚಳ ಮಾಡುವ ದರ ರೈತರಿಗೆ ವರ್ಗಾಯಿಸುವ ಮಾತ್ನಾಡಿದ್ದಾರೆ. ಸಿದ್ದು ಈ ಮಾತಿಗೆ ಕೆರಳಿದ ಶಿವಮೊಗ್ಗ ಸಂಸದ ರಾಘವೇಂದ್ರ, ಈ ಹಿಂದೆಯೂ ಇದೇ ಕಥೆ ಹೇಳಿದ್ರಿ, ಈಗಲೂ ಅದೇ ರಿಪೀಟ್​​ ಮಾಡ್ತಿದ್ದೀರಿ. ಇದನ್ನ ಯಾವುದೇ ಕಾರಣಕ್ಕೋ ಒಪ್ಪಲ್ಲ ಅಂತ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

ಇದೇ ಜೂನ್ ತಿಂಗಳಲ್ಲಿ ಹಾಲಿನ ದರವನ್ನು 2 ರೂ.ಗಳಿಗೆ ಸರ್ಕಾರ ಹೆಚ್ಚಳ ಮಾಡಿತ್ತು. ಅಲ್ಲಿಗೆ, ಪ್ರತಿ 1 ಲೀಟರ್ ಹಾಲಿನ ಬೆಲೆ 22 ರೂ.ಗಳಿಂದ 24 ರೂ.ಗಳಿಗೆ ಹೆಚ್ಚಾಗಿತ್ತು. ಆಗ ವ್ಯಾಪಾರಿ ಜಾಣ್ಮೆ ಪ್ರದರ್ಶನ ಮಾಡಿದ್ದ ಸರ್ಕಾರ, ಲೀಟರ್ ಪ್ಯಾಕ್ ಮೇಲೆ 50 ಮಿ.ಲೀಟರ್ ಹೆಚ್ಚುವರಿ ನೀಡಿ 2 ರೂ. ಹೇರಿಕೆ ಮಾಡಿತ್ತು.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...