spot_img
spot_img

Developers Limited ವಿರುದ್ಧ FIR ವಂಚನೆ ಆರೋಪ

spot_img
spot_img

Share post:

ಬೆಂಗಳೂರು: 3,300 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಓಜೋನ್ ಅರ್ಬನ್ ಇನ್‌ಫ್ರಾ ಡೆವಲಪರ್ಸ್ ಲಿಮಿಟೆಡ್ ವಿರುದ್ಧ ಫ್ಲ್ಯಾಟ್ ಖರೀದಿದಾರರು ನ್ಯಾಯಾಲಯದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಓಜೋನಾ ನಗರ ಖರೀದಿದಾರರ ಕಲ್ಯಾಣ ಸಂಘದ ಅಧ್ಯಕ್ಷ ಎರೋಲ್ ಜಾನ್ ನೊರೊನ್ಹಾ ಅವರು ಎಫ್‌ಐಆರ್ ದಾಖಲಿಸಿದ್ದು, ಓಜೋನ್ ಅರ್ಬನ್ ಇನ್‌ಫ್ರಾ ಡೆವಲಪರ್ಸ್ ಲಿಮಿಟೆಡ್ ಮತ್ತು ಕೆಲವು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 406, 409, 420 ಮತ್ತು 120 ಬಿ, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಓಜೋನ್ ಅರ್ಬನ್ ಇನ್‌ಫ್ರಾ ಡೆವಲಪರ್ಸ್ ಲಿಮಿಟೆಡ್ ಮತ್ತು ಕೆಲವು ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೇವನಹಳ್ಳಿ ತಾಲ್ಲೂಕಿನ ಓಜೋನ್ ಅರ್ಬನಾ ಟೌನ್‌ಶಿಪ್ ಯೋಜನೆಯ ಕ್ಷೇಮಾಭಿವೃದ್ಧಿ ಸಂಘವು ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಎಫ್ಐಆರ್ ದಾಖಲಿಸಿದೆ.
ಎಫ್ಐಆರ್ ನಲ್ಲಿ ಬಿಲ್ಡರ್ ನನ್ನು ಆರೋಪಿ ನಂ.1 ಎಂದು ಹೆಸರಿಸಲಾಗಿದ್ದು, ನಿರ್ದೇಶಕರು ಮತ್ತು ಇತರ ಸಿಬ್ಬಂದಿಗಳಾದ ವಾಸುದೇವನ್ ಸತ್ಯಮೂರ್ತಿ, ಪ್ರಿಯಾ ವಾಸುದೇವನ್ ಮತ್ತು ಸತ್ಯಮೂರ್ತಿ ಸಾಯಿ ಪ್ರಸಾದ್ ಅವರನ್ನು ಎ2 ರಿಂದ 4 ರವರೆಗೆ ಹೆಸರಿಸಲಾಗಿದೆ.
ಪ್ರಕರಣ ಸಂಬಂಧ ಓಝೋನ್ ಅರ್ಬಾನಾ ಖರೀದಿದಾರರ ಕಲ್ಯಾಣ ಸಂಘವನ್ನು ಪ್ರತಿನಿಧಿಸುವ ವಕೀಲ ರೆನಾಲ್ಡ್ ಡಿ’ಸೋಜಾ ಅವರು ಮಾತನಾಡಿ, ಪೊಲೀಸ್ ಆಯುಕ್ತರು (ಅಪರಾಧ) ಹೊರಡಿಸಿದ ಆದೇಶದ ನಂತರ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳು ಖರೀದಿದಾರರಿಗೆ ಮಾಹಿತಿ ನೀಡದೆ 1,500 ಕೋಟಿ ರೂ.ಗೆ ಫ್ಲ್ಯಾಟ್ ಗಳನ್ನು ಅಡಮಾನವಿಟ್ಟಿದ್ದಾರೆ. ಮನೆ ಖರೀದಿದಾರರಿಂದ 1,800 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ. ಒಟ್ಟಾರೆ ಮನೆ ಖರೀದಿದಾರರಿಗೆ 3,300 ಕೋಟಿ ರೂ. ಹಣ ವಂಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣದಲ್ಲಿ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್, ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್, ಬ್ಯಾಂಕ್ ಆಫ್ ಬರೋಡಾ, ಪ್ರೈಮಲ್ ಕ್ಯಾಪಿಟಲ್ ಮತ್ತು ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನ ಅಧಿಕಾರಿಗಳನ್ನೂ ಆರೋಪಿಗಳೆಂದು ಹೆಸರಿಸಲಾಗಿದೆ.
ಕನ್ನಮಂಗಲ ಗ್ರಾಮದ ವಸತಿ ಸಮುಚ್ಚಯವು 45 ಎಕರೆ ಪ್ರದೇಶಲ್ಲಿ 1,800 ಫ್ಲಾಟ್‌ಗಳನ್ನು ಹೊಂದಿದ್ದು, ಫ್ಲಾಟ್‌ಗಳ ಮಾರಾಟವು 2013 ರಲ್ಲಿ ಪ್ರಾರಂಭವಾಗಿತ್ತು. ಫ್ಲ್ಯಾಟ್ ಗಳನ್ನು 2017 ರಲ್ಲಿ ಖರೀದಿದಾರರಿಗೆ ಹಸ್ತಾಂತರಿಸಬೇಕಿತ್ತು. ಪ್ರಾಜೆಕ್ಟ್ ಪ್ರಾರಂಭವಾಗಿ 12 ವರ್ಷಗಳು ಕಳೆದಿವೆ. ಆದರೆ, ಖರೀದಿದಾರರಿಂದ ಹಣ ಪಡೆದು, ಇಲ್ಲಿಯವರೆಗೆ ಫ್ಲ್ಯಾಟ್ ಗಳನ್ನು ವಿತರಿಸಿಲ್ಲ. ಇಂದಿನವರೆಗೆ ಕೇವಲ 49 ಪ್ರತಿಶತದಷ್ಟೇ ಯೋಜನೆ ಪೂರ್ಣಗೊಂಡಿದೆ. ಈ ಹಿಂದೆ ಕರ್ನಾಟಕ-ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ಮನೆ ಮಾಲೀಕರಿಗೆ ಹಣ ಮರುಪಾವತಿಸುವಂತೆ ಕಂಪನಿಗೆ ನಿರ್ದೇಶನ ನೀಡಿತ್ತು. ಆದರೆ, ಆದೇಶಗಳನ್ನು ಪಾಲನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಆಕ್ಯುಪೆನ್ಸಿ ಸರ್ಟಿಫಿಕೇಟ್ ಮತ್ತು ಇತರ ಸೌಲಭ್ಯಗಳಿಲ್ಲದೆಯೇ ಹಲವರು ಫ್ಲ್ಯಾಟ್ ಗಳಲ್ಲಿ ಜೀವನ ನಡೆಸಲು ಆರಂಭಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಆರ್‌ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಬಿಲ್ಡರ್ ಕೇಳಿದ ಸಂಪೂರ್ಣ ಹಣವನ್ನು ನೀಡಿದ್ದಾರೆ. ಹೀಗಾಗಿ ಬ್ಯಾಂಕ್ ಅಧಿಕಾರಿಗಳು ಕೂಡ ವಂಚನೆಯಲ್ಲಿ ಭಾಗಿಯಾಗಿರುವುದು ಸಾಬೀತಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...