spot_img
spot_img

FIR AGAINST SANDALWOOD ACTRESS:ಸ್ಯಾಂಡಲ್ವುಡ್ ಪೋಷಕ ನಟಿ ವಿರುದ್ಧ ಎಫ್ಐಆರ್ .

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಶಶಿಕಲಾ ಅವರ ಪತಿ ಹಾಗೂ ನಿರ್ದೇಶಕ ಹರ್ಷವರ್ಧನ್ ಟಿ.ಜಿ. ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಪತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಸ್ಯಾಂಡಲ್​ವುಡ್ ಪೋಷಕ ನಟಿ ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

Complaint Details:ಅವರು ಸಹ ಒಪ್ಪಿದ್ದರು. ಆದರೆ ಕೆಲವು ದಿನಗಳ ಬಳಿಕ ಶಶಿಕಲಾ ಅವರು ಮದುವೆ ಆಗುವಂತೆ ಬಲವಂತ ಮಾಡಿದರು. ತಮ್ಮಿಬ್ಬರ ನಡುವಿನ ಕಾಲ್ ರೆಕಾರ್ಡ್ಸ್ ಇಟ್ಟುಕೊಂಡು ಬೆದರಿಸಿದ್ದರು ಎಂದು ದೂರಿನಲ್ಲಿ ಹರ್ಷವರ್ಧನ್ ಆರೋಪಿಸಿದ್ದಾರೆ.

2021ರಲ್ಲಿ ಸಿನಿಮಾ ಶೂಟಿಂಗ್​ಗೆ ಕಲಾವಿದೆಯಾಗಿ ಬಂದಾಗ ಶಶಿಕಲಾ ಪರಿಚಯವಾಗಿತ್ತು. ಬಳಿಕ ಅವರೇ ನನ್ನ ಫೋನ್ ನಂಬರ್ ಪಡೆದಿದ್ದರು. ತನ್ನೊಂದಿಗೆ ರಿಲೇಶನ್​ಶಿಪ್ ಹೊಂದಿದರೆ ತಾವೂ ಸಹ ಸಿನಿಮಾದಲ್ಲಿ ಹಣ ಹೂಡಿಕೆ ಮಾಡುವುದಾಗಿ ನನಗೆ ಅವರು ನಂಬಿಸಿದ್ದರು.

ತನ್ನ ಜೊತೆ ರಿಲೇಶನ್​ಶಿಪ್​ ಹೊಂದುವಂತೆ ಬಲವಂತ ಮಾಡಿದರು. ಸಿನಿಮಾ ನಿರ್ಮಾಣ ಮಾಡುತ್ತಾರೆಂದು ಆಸೆಯಿಂದ ನಾನು ಒಪ್ಪಿಕೊಂಡೆ. ಆದರೆ ನಾನು ಮೊದಲೇ ಅವರಿಗೆ ನಿಮ್ಮನ್ನು ಮದುವೆಯಾಗಲು ಆಗುವುದಿಲ್ಲ ಎಂದು ಹೇಳಿದ್ದೆ.

Assault charges:ಆ ಸಂದರ್ಭದಲ್ಲಿ “ಸುಮ್ಮನೆ ಸಿನಿಮಾ ಕರಿಯರ್ ಹಾಳಾಗುವುದು ಬೇಡ, ಅವರನ್ನು ಮದುವೆಯಾಗು” ಎಂದು ನಿರ್ಮಾಪಕರು ನೀಡಿದ್ದ ಸಲಹೆ ಮೇರೆಗೆ 2022ರ ಮಾರ್ಚ್‌ನಲ್ಲಿ ಶಶಿಕಲಾ ಅವರನ್ನು ಮದುವೆಯಾದೆ. ಆದರೆ ಮದುವೆಯಾದ ಕೆಲ ದಿನಗಳ ನಂತರ ನಿರ್ಮಾಪಕರು, ನಿರ್ದೇಶಕ ಹಾಗೂ ಕಲಾವಿದರು ಮನೆಗೆ ಬಂದು ಹೋಗಲಾರಂಭಿಸಿದ್ದರು.

ಅದನ್ನು ಪ್ರಶ್ನಿಸಿದಾಗ ತಮ್ಮನ್ನು ಮನೆಯಿಂದ ಹೊರಹಾಕುತ್ತಿದ್ದರು‌. ಒಂದೆರಡು ಗಂಟೆಗಳ ಬಳಿಕ ತಾವೇ ಮನೆಯೊಳಗೆ ಸೇರಿಸುತ್ತಿದ್ದರು ಎಂದು ಹರ್ಷವರ್ಧನ್ ಆರೋಪ ಮಾಡಿದ್ದಾರೆ.

ಜೈಲಿನಿಂದ ಹೊರ ಬಂದ ಬಳಿಕವೂ ನನಗೆ ಸಿನಿಮಾ ನಿರ್ದೇಶನ ಮಾಡಲು ಬಿಡುವುದಿಲ್ಲ ಎಂದು ಶಶಿಕಲಾ ಬೆದರಿಸಿದ್ದರು ಎಂದು ಹರ್ಷವರ್ಧನ್ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.ಮದುವೆಗೆ ಒಪ್ಪದಿದ್ದಾಗ ನಾಗರಭಾವಿಯಲ್ಲಿರುವ ಕಚೇರಿಗೆ ಬಂದು ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದರು.

ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಗೆ ತಾನು ದೂರು ನೀಡಿದ್ದೆ. ಬಳಿಕ ಇಬ್ಬರಿಗೂ ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದರು. ಆದರೆ 2022ರಲ್ಲಿ ಶಶಿಕಲಾ ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ನನ್ನನ್ನು ಬಂಧಿಸಿದ್ದರು.

ಹರ್ಷವರ್ಧನ್ ನೀಡಿರುವ ದೂರಿನ ಅನ್ವಯ ಶಶಿಕಲಾ ಸೇರಿದಂತೆ ಇಬ್ಬರ ವಿರುದ್ಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ನಡುವೆ ಅಮ್ಮನ ಮಡಿಲು ಹೆಸರಿನಲ್ಲಿ ಶಶಿಕಲಾ ಅನಾಥಾಶ್ರಮ ಆರಂಭಿಸಿದ್ದರು. ಯಾಕೆ ಎಂದು ಪ್ರಶ್ನಿಸಿದಾಗ, ”ಕಪ್ಪು ಹಣವನ್ನು ಬದಲಾಯಿಸುವ ಅವಕಾಶ ಸಿಗುತ್ತದೆ” ಎಂದಿದ್ದರು. ಅಲ್ಲದೆ, 2024ರ ಆಗಸ್ಟ್‌ನಲ್ಲಿ ತಮ್ಮನ್ನು ಮನೆಯಿಂದ ಹೊರಹಾಕಿರುವ ಶಶಿಕಲಾ, ಯೂಟ್ಯೂಬ್ ಚಾನೆಲ್‌ವೊಂದರ ಸಿಬ್ಬಂದಿಯೊಂದಿಗೆ ಸೇರಿ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅವರೂ ಸಹ ನನ್ನೊಂದಿಗೆ ಬದುಕುತ್ತಿಲ್ಲ, ನನಗೂ ನೆಮ್ಮದಿಯಾಗಿರಲು ಬಿಡುತ್ತಿಲ್ಲ ಎಂದು ಹರ್ಷವರ್ಧನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

ಇದ್ದನು ಓದಿರಿ :SNAKEBITE CASES:ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...