spot_img
spot_img

ಫುಟ್‌ಪಾತ್‌ ಒತ್ತುವರಿ : ಅನಧಿಕೃತ ಕೇಬಲ್‌ಗಳ ತೆರವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ದಕ್ಷಿಣ ವಲಯದ ಜಯನಗರ 1ನೇ ಬ್ಲಾಕ್ ನ 3ನೇ ಅಡ್ಡರಸ್ತೆ, ಲಕ್ಕಸಂದ್ರ ವಾರ್ಡ್ ನ 16ನೇ ಅಡ್ಡರಸ್ತೆ ಹಾಗೂ ರಾಜರಾಜೇಶ್ವರಿನಗರ ವಲಯದ ನಾಗರಭಾವಿ 2ನೇ ಹಂತದ 6ನೇ ಅಡ್ಡರಸ್ತೆಯಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.

ನಗರದ ಮೂರು ವಿವಿಧ ವಲಯಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪಾದಚಾರಿಗಳ ಅತಿಕ್ರಮಣ ಹಾಗೂ ಅನಧಿಕೃತ ಕೇಬಲ್ ಗಳ ತೆರವು ಕಾರ್ಯಾಚರಣೆಯನ್ನು ಶನಿವಾರ ನಡೆಸಿತು.
ಬಳಿಕ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರ ನಿರ್ದೇಶನಗಳನ್ನು ಅನುಸರಿಸಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಆಯಾ ವಲಯಗಳಲ್ಲಿನ ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿದ ನಂತರ ಅತಿಕ್ರಮಣದಿಂದ ಪಾದಚಾರಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಗಮನಿಸಲಾಯಿತು. ಈ ವೇಳೆ ಅನಧಿಕೃತ ಕೇಬಲ್‌ಗಳು ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವುದಲ್ಲದೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರಿದರು.

ದಕ್ಷಿಣ ವಲಯದ ಜಯನಗರ 1ನೇ ಬ್ಲಾಕ್ ನ 3ನೇ ಅಡ್ಡರಸ್ತೆ, ಲಕ್ಕಸಂದ್ರ ವಾರ್ಡ್ ನ 16ನೇ ಅಡ್ಡರಸ್ತೆ ಹಾಗೂ ರಾಜರಾಜೇಶ್ವರಿನಗರ ವಲಯದ ನಾಗರಭಾವಿ 2ನೇ ಹಂತದ 6ನೇ ಅಡ್ಡರಸ್ತೆಯಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.

ಅಲ್ಲದೆ, ಮಹದೇವಪುರ ವಲಯದ ಹಳೆ ವಿಮಾನ ನಿಲ್ದಾಣ ರಸ್ತೆ, ಮಾರತ್ತಹಳ್ಳಿ ಸೇತುವೆ ಮುಖ್ಯರಸ್ತೆಯಲ್ಲಿನ ಅತಿಕ್ರಮಣ ಹಾಗೂ ಅನಧಿಕೃತ ಓವರ್‌ಹೆಡ್‌ ಕೇಬಲ್‌ಗಳನ್ನು ತೆರವುಗೊಳಿಸಲಾಯಿತು.

ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರ ನಿರ್ದೇಶನದಂತೆ ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳನ್ನು ತೆರವು ಮಾಡಲಾಗಿದ್ದು, ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳನ್ನು ತೆರವು ಮಾಡಿ, ಮತ್ತೆ ವ್ಯಾಪಾರ ಮಾಡದಂತೆ ಕಟ್ಟೆಚ್ಚರ ನೀಡಲಾಗುತ್ತಿದೆ ಎಂದು ಪಾಲಿಕೆ ಎಂಜಿನಿಯರ್ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...