spot_img
spot_img

GANDHIJI STATUE UNVEILS : ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ

spot_img
spot_img

Share post:

Belgaum News:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುವರ್ಣ ವಿಧಾನಸೌಧ ಉತ್ತರಪ್ರವೇಶ ದ್ವಾರದಲ್ಲಿ 25 ಅಡಿ ಎತ್ತರದ ಮಹಾತ್ಮ GANDHIJI ಕಂಚಿನ ಪ್ರತಿಮೆಯನ್ನು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.ಸುವರ್ಣ ವಿಧಾನಸೌಧ ಉತ್ತರಪ್ರವೇಶ ದ್ವಾರದಲ್ಲಿ 25 ಅಡಿ ಎತ್ತರದ ಮಹಾತ್ಮ GANDHIJI ಕಂಚಿನ ಪ್ರತಿಮೆಯನ್ನು ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಸೌಧದ ಮುಂಭಾಗದಲ್ಲಿ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಲಾಯಿತು.

GANDHIJIಯವರು ತಮ್ಮ ಅಧ್ಯಕ್ಷತೆಯಲ್ಲಿ 1924ರಲ್ಲಿ‌ ಜರುಗಿದ‌ ಅಧಿವೇಶನದಲ್ಲಿ ಅಸ್ಪೃಶ್ಯತೆ‌ ನಿವಾರಣೆಗೆ ಕರೆ‌ ನೀಡಿದ್ದರು. ಆದ್ದರಿಂದ ಈ‌ ನೆಲ‌ವು ಐತಿಹಾಸಿಕ‌ ಮಹತ್ವ ಹೊಂದಿದೆ” ಎಂದರು.ತಿಮೆ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ, ” GANDHIJIಯವರ ಪ್ರತಿಮೆ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ, ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ‌ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು.

GANDHIJIಯವರು ದೇಶಕ್ಕೆ ನೀಡಿದ ಕೊಡುಗೆಯನ್ನು‌ ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ.”1924ರಲ್ಲಿ ಕಾಂಗ್ರೆಸ್ ಅಧಿವೇಶನ‌ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ‌‌ ನಡೆಸಿರುವುದು ಅತ್ಯಂತ‌ ಮಹತ್ವದ್ದಾಗಿದೆ. ಕಲಬುರಗಿಯಲ್ಲೂ ಕೂಡ‌ ಮಹಾತ್ಮ GANDHIJIಯವರ ವಿಶೇಷ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ. ಯಾಕೆಂದರೆ GANDHIJI ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಅಂತಹ ಮಹಾತ್ಮನ ಪ್ರತಿಮೆಯ ಉದ್ಘಾಟನೆ ನನ್ನ ಕೈಯಿಂದ ಆಗಿದ್ದಕ್ಕೆ ನನ್ನ ಜೀವನ ಧನ್ಯವಾಯಿತು” ಎಂದು ಹೇಳಿದರು.

Proposition of Women Empowerment: ಆದರೆ, ಹಿಂದೂ‌ ಧರ್ಮದಲ್ಲಿ ಸಮಾನತೆ‌ ಮತ್ತು‌ ಸಹೋದರತೆಯನ್ನು ಬಯಸಿದ್ದರು. “ಹೇ ರಾಮ್‌” ಎನ್ನುತ್ತಲೇ ಕೊನೆಯುಸಿರೆಳೆದರು. ಆದರೆ, ಅವರನ್ನು ಬಿಜೆಪಿಯವರು ಹಿಂದೂ‌ ವಿರೋಧಿ ಎನ್ನುತ್ತಾರೆ. ಆದರೆ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ” ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಮಾತನಾಡಿ, “ಮಹಾತ್ಮ GANDHIJIಯವರು ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು. GANDHIJIಯವರು ಸದಾ‌ ಶ್ರೀರಾಮನ ಸ್ಮರಣೆ‌‌ಮಾಡುತ್ತಿದ್ದರು. ಅವರು‌ ಅಪ್ಪಟ‌ ಹಿಂದೂ ಎಂಬುದಕ್ಕೆ‌ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಅವರು ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ.

Program to Honor Freedom Fighters:  ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ , “ಇದೊಂದು‌ ಐತಿಹಾಸಿಕ‌ ಕಾರ್ಯಕ್ರಮ. ಇದು ಕೇವಲ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾತ್ರವಲ್ಲ. ಸ್ವಾತಂತ್ರ್ಯ ಯೋಧರಿಗೆ ಗೌರವಿಸುವ ಮತ್ತು ಸಂವಿಧಾನದ ಘನತೆ ಎತ್ತಿ ಹಿಡಿಯುವ ಪವಿತ್ರ ಕಾರ್ಯಕ್ರಮವಾಗಿದೆ. ರಾಮರಾಜ್ಯ‌ ಮತ್ತು ಗ್ರಾಮರಾಜ್ಯ GANDHIJIಯವರ ಕನಸಾಗಿತ್ತು” ಎಂದು ಹೇಳಿದರು. ಮಹಾತ್ಮ GANDHIJIಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ಗಾಂಧಿ ಭಾರತಕ್ಕೆ ದಾರಿದೀಪವಾಗಲಿದೆ” ಎಂದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್​, “ಮಹಾತ್ಮ GANDHIJIಯ ಪ್ರತಿಮೆ‌ ಅನಾವರಣ ಒಂದು ಅವಿಸ್ಮರಣೀಯ ಗಳಿಗೆಯಾಗಿದೆ. ವಿಗ್ರಹವಲ್ಲ ಚೈತನ್ಯದ ಹರವು ಎಂದು ಬಣ್ಣಿಸಿದ ಅವರು, ಪ್ರತಿಮೆಯು ಗಾಂಧೀಜಿ ಅನುಯಾಯಿಗಳಿಗೆ ಪ್ರೇರಣೆಯಾಗಲಿದೆ.ಗದುಗಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಯಲಯವನ್ನು “ಮಹಾತ್ಮ GANDHIJI ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ” ಎಂದು ಮರುನಾಮಕರಣ‌ ಮಾಡುವುದರ ಜತೆಗೆ ನೂತನ ಲಾಂಛನವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ವೇಳೆ ಕುಲಪತಿ ಡಾ.ಸುರೇಶ್ ನಾಡಗೌಡರ ಉಪಸ್ಥಿತರಿದ್ದರು.ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ರಂದೀಪ್ ಸಿಂಗ್ ಸುರ್ಜೇವಾಲ, ಜೈರಾಮ್ ರಮೇಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Issue of Special Postage Stamps: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೊರತರಲಾದ “ಗಾಂಧಿ‌ ಭಾರತ-ಮರುನಿರ್ಮಾಣ” ಹಾಗೂ ಉದಯ ಕಾಲ ಸಮೂಹದ ಗಾಂಧಿ ಬಿತ್ತಿದ ಬೆಳಕು ಪುಸ್ತಕಗಳನ್ನು ಗಣ್ಯರು ಬಿಡಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧಿ ಭಾರತ ವಿಶೇಷ ಅಂಚೆ ಲಕೋಟೆಯನ್ನು ಗಣ್ಯರು ಬಿಡುಗಡೆಗೊಳಿಸಿದರು.ಕರ್ನಾಟಕ ಏಕೀಕರಣ ಚಳವಳಿಗೆ ಪ್ರೇರಣೆಯಾಗಿದ್ದ ಹುಯಿಲಗೋಳ ನಾರಾಯಣರಾವ್ ಅವರು ರಚಿಸಿದ ” ಉದಯವಾಗಲಿ ನಮ್ಮ ಚೆಲುವು ಕನ್ನಡ‌ ನಾಡು” ಗೀತೆಯನ್ನು ಸಾದ್ವಿನಿ ಕೊಪ್ಪ ಅವರು ಪ್ರಸ್ತುತಪಡಿಸಿದರು.ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ‌ ಪರವಾಗಿ ಅತಿಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಂದಿಸಿದರು. ಬಿ.ಸಿ.ಭಾನುಮತಿ ಕಾರ್ಯಕ್ರಮವನ್ನು ನಿರೂಪಿಸಿದರು. ರಾಜ್ಯದ ಎಲ್ಲ ಸಚಿವರು, ಶಾಸಕರು, ಅನೇಕ‌ ಸಂಸದರು, ಮಾಜಿ ಶಾಸಕರು ಸೇರಿದಂತೆ ಅನೇಕ ಗಣ್ಯರು, ತೆಲಂಗಾಣದ ಜನಪ್ರತಿನಿಧಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿರಿ : JACKPOT FOR YOUNG BOWLER : ಗೌತಮ್ ಗಂಭೀರ್ ಶಿಷ್ಯನಿಗೆ ಬಿಗ್ ಜಾಕ್ಪಾಟ್

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...