spot_img

GAVISIDDESHWARA FAIR : 25 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಪ್ರಸಾದ ಸ್ವೀಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Koppala News:

ಜನವರಿ 12ರಿಂದ ಕೊಪ್ಪಳದ GAVISIDDESHWARA FAIR ದೇವಾಲಯದಲ್ಲಿ ಆರಂಭವಾದ ಮಹಾದಾಸೋಹ ಬುಧವಾರ ಸಂಪನ್ನಗೊಂಡಿತು.

ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ಮಹಾದಾಸೋಹ ಹಾಗೂ GAVISIDDESHWARA FAIR ಬುಧವಾರ ವಿಧ್ಯುಕ್ತ ತೆರೆ ಬಿತ್ತು.

Consumption of 1,200 quintals of rice:

ಜನವರಿ 12ರಿಂದ ಆರಂಭವಾದ ಗವಿಮಠದ ಜಾತ್ರೆಯ ಮಹಾ ದಾಸೋಹದಲ್ಲಿ ಈ ಬಾರಿ 20 ಲಕ್ಷ ರೊಟ್ಟಿ, 1,200 ಕ್ವಿಂಟಾಲ್ ಅಕ್ಕಿ, 20 ಲಕ್ಷ ಜಿಲೇಬಿ, 8 ಲಕ್ಷ ಮಿರ್ಚಿ, ಟನ್‌ಗಟ್ಟಲೆ ತರಕಾರಿ, ಹಾಲು, ತುಪ್ಪ.. ಹೀಗೆ ನಾನಾ ವಿಧದ ಪದಾರ್ಥಗಳು ಬಳಕೆಯಾಗಿವೆ.

GAVISIDDESHWARA FAIR ಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವಿತರಿಸುವ ವ್ಯವಸ್ಥೆ ಮೊದಲ ದಿನದಿಂದ ಕೊನೆಯ ದಿನದವರೆಗೂ ಅಚ್ಚುಕಟ್ಟಾಗಿ ಜರುಗಿದೆ. ಪ್ರತಿದಿನ ಲಕ್ಷಾಂತರ ಜನರು ಪ್ರಸಾದ ಸೇವನೆಗಾಗಿ ಬಂದರೂ, ಒಂದು ದಿನವೂ ಯಾರಿಗೂ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮುಖ್ಯವಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ನಿರಂತರ ಕುಡಿಯುವ ನೀರಿನ ಸರಬರಾಜು, ಬೆಳಕು, ನೆರಳಿನ ವ್ಯವಸ್ಥೆ, ಊಟಕ್ಕೆ ಬೇಕಾಗುವ ತಟ್ಟೆ, ಸಾವಿರಾರು ಜನರು ಸ್ವಯಂ ಸೇವಕರಾಗಿ ಬಂದು ದಾಸೋಹದಲ್ಲಿ ಕೆಲಸ ನಿರ್ವಹಿಸಿದ್ದು ವಿಶೇಷ.

ದಾಸೋಹಕ್ಕಾಗಿ ಸಿಹಿತಿನಿಸುಗಳನ್ನು ಭಕ್ತರು ನೀಡಿದ್ದು, ಅವುಗಳನ್ನೂ ದಾಸೋಹದಲ್ಲಿ ಬಳಸಲಾಗಿತ್ತು. ಜಾತ್ರೆಯಲ್ಲಿ ಪ್ರಸಾದಕ್ಕಾಗಿ ಅಡುಗೆ ಮಾಡುವುದು, ತರಕಾರಿ ಕತ್ತರಿಸುವುದು, ಊಟ ಬಡಿಸುವುದು ಎಲ್ಲವನ್ನೂ ಭಕ್ತರೇ ಮಾಡುತ್ತಾರೆ.

ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ದಾಸೋಹದಲ್ಲಿ ಊಟ ಮಾಡಿದ್ದಾರೆ. ಮಹಾದಾಸೋಹಕ್ಕೆ ನಿನ್ನೆ ತೆರೆ ಬಿದ್ದರೂ ಮಠಕ್ಕೆ ಬರುವ ಭಕ್ತರಿಗೆ ನಿತ್ಯವೂ ದಾಸೋಹ ಸೇವೆ ಇರುತ್ತದೆ.

ಇದನ್ನು ಓದಿರಿ : DELHI ASSEMBLY ELECTION 2025 : ಕೇಜ್ರಿವಾಲ್ ವಿರುದ್ಧ ಮೋದಿ ಗುಡುಗು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

DELTA AIRLINES PLANE FLIPS : ಲ್ಯಾಂಡಿಂಗ್ ವೇಳೆ ರನ್ವೇಯಲ್ಲಿ ಜಾರಿ ಪಲ್ಟಿಯಾದ ವಿಮಾನ

Toronto (Canada) News: ವೇಗವಾಗಿ ಬೀಸುತ್ತಿದ್ದ ಗಾಳಿಯ ಜೊತೆಗೆ ರನ್​ವೇಯಲ್ಲಿ ಹಿಮವೂ ಇದ್ದ ಕಾರಣ ವಿಮಾನ ತಲೆಕೆಳಗಾಗಿ ಉರುಳಿ ಬಿದ್ದಿದೆ. ತಕ್ಷಣವೇ ನಿಲ್ದಾಣದ ತುರ್ತು ಸೇವಾ...

UNITED NATIONS : ‘ಪಾಕಿಸ್ತಾನ ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು’

United Nations: UNITED NATIONS ಸ್ವತಃ ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದುವಾಗಿರುವ ಪಾಕಿಸ್ತಾನ, ತಾನು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದಾಗಿ ಹೇಳಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಭಾರತ ಹೇಳಿದೆ.ಪಾಕಿಸ್ತಾನವು...

MAHA KUMBH 2025 : ಮಹಾಕುಂಭ ಮೇಳದ ಮುಕ್ತಾಯದ ದಿನಾಂಕ ವಿಸ್ತರಣೆ?

Mahakumbha Nagar (Uttar Pradesh) News: MAHA KUMBH 2025 ಮುಕ್ತಾಯದ ದಿನಾಂಕವು ವಿಸ್ತರಣೆ ಆಗಲಿದೆ ಎಂಬ ಸುದ್ದಿಗಳ ಕುರಿತಂತೆ ಪ್ರಯಾಗ್‌ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಪಷ್ಟನೆ...

ICC CHAMPIONS TROPHY : ಪಾಕಿಸ್ತಾನಕ್ಕೆ ಪ್ರಯಾಣಿಸಲಿರುವ ಮೂವರು ಭಾರತೀಯ ಕ್ರಿಕೆಟರ್ಸ್

ICC Champions Trophy 2025: ಐಸಿಸಿ ಚಾಂಪಿಯನ್ಸ್​ ಟ್ರೋಫಿ ಬುಧವಾರದಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್​ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.ICC CHAMPIONS TROPHY...