spot_img
spot_img

GAVISIDDESHWARA JATRE 2025 : ದಕ್ಷಿಣ ಭಾರತದ ಕುಂಭಮೇಳ ‘ಗವಿಮಠ ರಥೋತ್ಸವ’ಕ್ಕೆ ಕ್ಷಣಗಣನೆ

spot_img
spot_img

Share post:

Koppala News:

ದಕ್ಷಿಣ ಭಾರತದ ಕುಂಭಮೇಳ ಅಂತಲೇ ಕರೆಯುವ ಕೊಪ್ಪಳದ ಸುಪ್ರಸಿದ್ಧ GAVISIDDESHWARA JATRE 2025 ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಭಾರತದ ಕುಂಭ ಮೇಳ ಎಂದೇ ಹೆಸರುವಾಸಿಯಾಗಿರುವ ಕೊಪ್ಪಳದ GAVISIDDESHWARA JATRE 2025  ಜ.15 ರಂದು ಸಂಜೆ 5:30 ಗಂಟೆಗೆ ಜರುಗಲಿದ್ದು, ಇಡೀ ಕೊಪ್ಪಳ ನಗರ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ರಥೋತ್ಸವ ವರ್ಷದಿಂದ ವರ್ಷಕ್ಕೆ ವಿಶೇಷಗಳನ್ನೇ ಹೊತ್ತು ತರುವ ಮೂಲಕ ಹಾಗೂ ಅನ್ನ, ಅಕ್ಷರ, ಅಧ್ಯಾತ್ಮ ಎಂಬ ತ್ರಿವಿಧ ದಾಸೋಹಕ್ಕೆ ಆದ್ಯತೆ ನೀಡುವ ಮೂಲಕ ಜಗದ್ವಿಖ್ಯಾತಿ ಪಡೆಯುತ್ತಿದೆ.

Social Concerns:

ಜಾತ್ರೆ ಎಂದರೆ ಕೇವಲ ಭಕ್ತಿಗೆ ಸೀಮಿತವಾಗಿರದೇ ಜನರಲ್ಲಿ ಅನ್ನ ದಾಸೋಹ, ಅಕ್ಷರ ದಾಸೋಹ, ಪರಿಸರ ಕಾಳಜಿ, ರಕ್ತದಾನ, ಅಂಗಾಂಗ ದಾನ, ಜಲದೀಕ್ಷೆ, ಸಕಲ ಚೇತನ, ಹೀಗೆ.. ಅದ್ಭುತ ಸಾಮಾಜಿಕ ಕಾಳಜಿ ಮತ್ತು ಉದ್ದೇಶಗಳ ಅಭಿಯಾನಗಳಿಂದ ವರ್ಷದಿಂದ ವರ್ಷಕ್ಕೆ ಸತ್ಕಾರ್ಯಗಳನ್ನು ಮಾಡುತ್ತಿರುವ ಗವಿಮಠದ ಜಾತ್ರೆಯ ಮತ್ತೊಂದು ವಿಶೇಷವಾಗಿದೆ.

ಸತತ 15 ದಿನಗಳ ಕಾಲ ಮಹಾ ದಾಸೋಹ ನಡೆಸಿಕೊಂಡು ಬರುತ್ತಿರುವುದು ಜಾತ್ರೆಯ ಮಗದೊಂದು ವಿಶೇಷ. ಈ ವರ್ಷದ ಜಾತ್ರೆಯಲ್ಲಿ ಮೊದಲ ದಿನದ ಪ್ರಸಾದದಲ್ಲಿ ಭಕ್ತರು ಬೆಲ್ಲದ ಜಿಲೇಬಿ ಸವಿ ಸವಿದರು. ಈ ಮಹಾ ದಾಸೋಹಕ್ಕೆ ತಿಂಗಳ ಹಿಂದಿನಿಂದಲೇ ಸುತ್ತಮುತ್ತಲ ಗ್ರಾಮದ ಜನರು ಹೋಳಿಗೆ, ತುಪ್ಪ, ರೊಟ್ಟಿ, ಚಟ್ನಿ, ಕಾಯಿಪಲ್ಯಗಳನ್ನು ತಂದು ಶ್ರೀಮಠಕ್ಕೆ ಅರ್ಪಿಸುವುದು ವಾಡಿಕೆ.

Gavishri Sports Festival:

ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಈ ಬಾರಿಯ ಜಾತ್ರೆಯಲ್ಲಿ ಮ್ಯಾರಥಾನ್ ಸೇರಿದಂತೆ ಹಲವು ದೇಶಿ ಕ್ರೀಡೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಮಲ್ಲಗಂಬ, ಮುಂಗೈ ಕುಸ್ತಿ, ಕಬ್ಬಡ್ಡಿ, ಸಂಗಾಣಿ ಕಲ್ಲೆತ್ತುವುದು ಸೇರಿದಂತೆ ವಿವಿಧ ಕ್ರೀಡೆಗಳನ್ನ ಶ್ರೀಮಠದ ಆವರಣದಲ್ಲಿ ಈ ಬಾರಿ ಆಯೋಜಿಸಲಾಗಿದೆ. ಮಹಿಳೆಯರಿಗಾಗಿ ವಿಶೇಷವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ.

ಮೂರು ದಿ‌ಗಳಕಾಲ ಜಾತ್ರಾ ಮಹೋತ್ಸವದ ನಿಮಿತ್ತ ಗುಡ್ಡದ ಮೇಲೆ ನಿರ್ಮಿಸಿರುವ ಕೈಲಾಸ ಮಂಟಪದಲ್ಲಿ ಭಕ್ತ ಹಿತ ಚಿಂತನ ಸಭೆ ಕೂಡ ಜರುಗಿತು. ಈ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ವಿದ್ವಾಂಸರು, ಸಾಧನ ಪುರುಷರು ಆಗಮಿಸಿ ಉಪದೇಶಾಮೃತ ನೀಡಿದರು. ಗವಿಮಠ ಜಾತ್ರೆ ಎಂದರೆ ಅದೊಂದು ವಿಶಿಷ್ಟ ಮತ್ತು ವಿಭಿನ್ನ. ಭಕ್ತಿ, ಪ್ರಸಾದ, ಜ್ಞಾನ ನೀಡುವುದು ಈ ಜಾತ್ರೆಯ ವಿಶೇಷ.

ಇದನ್ನು ಓದಿರಿ : DEPORTATION OF 45 ROWDY SHEETERS : ಹುಬ್ಬಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾದ ಪೊಲೀಸ್ ಕಮಿಷನರ್

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...