spot_img
spot_img

GODDES BANASHANKARI : 108 ತರಕಾರಿಗಳಿಂದ ಬನಶಂಕರಿ ದೇವಿಗೆ ಅಲಂಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Haveri News:

ಶಿವಲಿಂಗ ನಗರದಲ್ಲಿರುವ GODDES BANASHANKARI ಜಾತ್ರಾ ಮಹೋತ್ಸವದ ವಿಶೇಷ ಪಲ್ಲೇದ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಸುಮಾರು 108 ತರಕಾರಿಗಳಿಂದ GODDES BANASHANKARI ಯನ್ನು ಅಲಂಕರಿಸುವುದು ಈ ಪಲ್ಲೇದ ಹಬ್ಬದ ವಿಶೇಷ  ನೂರಾರು ವರ್ಷಗಳ ಹಿಂದೆ ಭೂಮಿಯಲ್ಲಿ ಬರಗಾಲ ತಾಂಡವಾಡುತ್ತಿತ್ತು.

ಜನ ಜಾನುವಾರುಗಳು ನೀರಿಲ್ಲದೆ ಪರದಾಡುತ್ತಿದ್ದ ವೇಳೆ ಋಷಿಮುನಿಗಳು GODDES BANASHANKARI ಯ ಮೊರೆ ಹೋಗುತ್ತಾರೆ. GODDES BANASHANKARI ತನ್ನ ದೇಹದ ಉಷ್ಣಾಂಶ ಹೆಚ್ಚಿಸಿಕೊಂಡು ಶಾಕಾಂಬರಿಯಾಗುತ್ತಾಳೆ. ಅಲ್ಲದೆ ಬರದಿಂದ ತತ್ತರಿಸಿದ ಭೂಮಿಗೆ ಮಳೆ ತರುತ್ತಾಳೆ. ಈ ರೀತಿ ತಂದ ಮಳೆಯಲ್ಲಿ ಬೆಳೆದ ತರಕಾರಿಗಳನ್ನು ದೇವಿಗೆ ಅಲಂಕಾರ ಮಾಡಲಾಗುತ್ತದೆ.

ಅಂದಿನಿಂದ ಇದಕ್ಕೆ ಪಲ್ಲೇದ ಹಬ್ಬ ಎಂದು ಕರೆಯಲಾಗುತ್ತದೆ ಎಂಬುದು ಭಕ್ತರ ನಂಬಿಕೆ.ಬನಶಂಕರಿ ದೇವಿ ಜಾತ್ರಾ ಮಹೋತ್ಸವದ ಪಲ್ಲೇದ ಹಬ್ಬವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.  ಇಲ್ಲಿ ಯಾವ ತರಕಾರಿ ಸಹ ಬಿಡದೆ ಕೆಲವೊಂದು ಸೊಪ್ಪುಗಳಿಂದ ಸಹ ತಾಯಿಯನ್ನು ಅಲಂಕರಿಸಲಾಗುತ್ತದೆ. ಈ ಬಾರಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಅರ್ಚಕರು ಮತ್ತು ಭಕ್ತರು ಶ್ರಮಿಸಿ ಬದನೆಕಾಯಿ, ಸೌತೆಕಾಯಿ, ಹಿರೇಕಾಯಿ, ಬೀನ್ಸ್, ಅವರೇ, ಮೆಣಸಿನಕಾಯಿ, ಸಾಂಬಾರಸವತೆ, ಹೂಕೋಸು, ಈರುಳ್ಳಿ, ಗಜ್ಜರಿ, ಮೂಲಂಗಿ, ಆಲೂಗಡ್ಡೆ, ಶುಂಠಿ, ಬೆಟ್ಟದ ನೆಲ್ಲಿಕಾಯಿ ಸರದಿಂದ ದೇವಿಯನ್ನು ಅಲಂಕರಿಸಿದ್ದಾರೆ.

ಈ ವಿಶಿಷ್ಟ ಅಲಂಕಾರ ನೋಡಲು ಭಕ್ತರು GODDES BANASHANKARI ದೇವಸ್ಥಾನಕ್ಕೆ ಬೃಹತ್​ ಸಂಖ್ಯೆಯಲ್ಲಿ ಆಗಮಿಸಿ ಕಣ್ತುಂಬಿಕೊಂಡರು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಈ ರೀತಿಯ ಆಚರಣೆಯನ್ನು ಹಲವು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾವೇರಿಯ ಬನಶಂಕರಿ ದೇವಸ್ಥಾನದಲ್ಲಿ ಕಳೆದ ಐದು ವರ್ಷಗಳಿಂದ ಈ ಆಚರಣೆ ಮಾಡಲಾಗುತ್ತಿದೆ.

ಒಂದು ದಿನ ಮುಂಚಿತವಾಗಿ ಬರುವ ಸುಮಂಗಲೆಯರು ಮಾರುಕಟ್ಟೆಗೆ ತೆರಳಿ ವೈವಿಧ್ಯಮಯ ತರಕಾರಿ ಖರೀದಿ ಮಾಡುತ್ತಾರೆ. ನಂತರ ಅವುಗಳನ್ನು ತಂದು ಸ್ವಚ್ಛಗೊಳಿಸಿ ಮಾಲೆಗಳನ್ನಾಗಿ ಮಾಡುತ್ತಾರೆ. ಅದಾದ ನಂತರ ದೇವಿಗೆ ವಿವಿಧ ಅಭಿಷೇಕ ಸಲ್ಲಿಸುವ ಅರ್ಚಕರು ತರಕಾರಿಗಳಿಂದ ದೇವಿಯನ್ನು ಅಲಂಕರಿಸುತ್ತಾರೆ. ಈ ರೀತಿ ಆಚರಣೆ ಮಾಡಿದರೆ ಇಷ್ಟಾರ್ಥ, ಬೇಡಿಕೆಗಳನ್ನು ದೇವಿ ಈಡೇರಿಸುತ್ತಾಳೆ ಎನ್ನುವ ನಂಬಿಕೆ ಇಲ್ಲಿ ಮನೆ ಮಾಡಿದೆ.

ಅಲಂಕಾರ ಮಾಡಿ ತರಕಾರಿಗಳನ್ನು ಮರುದಿನ ಬೆಳಗ್ಗೆ ದೇವಿಯ ಮೂರ್ತಿಯಿಂದ ತೆಗೆದು ಪ್ರಸಾದ ತಯಾರಿಸಲಾಗುತ್ತದೆ. ಈ ಪ್ರಸಾದವನ್ನು ಸಹಸ್ರಾರು ಭಕ್ತರು ಸೇವಿಸುತ್ತಾರೆ. ಐದು ದಿನಗಳ ಕಾಲ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ವಿವಿಧ ರೀತಿಯ ಅಲಂಕಾರ, ಅಭಿಷೇಕ ಮಾಡಲಾಗುತ್ತದೆ.

ಜಾತ್ರೆಯ ಮಧ್ಯದ ದಿನವಾದ ಶುಕ್ರವಾರ ಬನಶಂಕರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತದೆ. ಈ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿದ್ದು, ವರ್ಷದಿಂದ ವರ್ಷಕ್ಕೆ ಜಾತ್ರಾ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಅಡಳಿತ ಮಂಡಳಿ ಸದಸ್ಯರು ತಿಳಿಸಿದರು.

ಇದನ್ನು ಓದಿರಿ : SATISH JARKIHOLI ON SRIRAMULU : ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...