spot_img
spot_img

GOOD NEWS FOR TOBACCO FARMERS: ಸಂಸದ ಯದುವೀರ್ ಮನವಿಗೆ ಕೇಂದ್ರ ಸ್ಪಂದನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore/New Delhi News:

ಪರವಾನಗಿರಹಿತ ತಂಬಾಕು ಬೆಳೆಗಾರರು ಎಫ್​ಸಿವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೇ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ.

ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದರು. ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಸಂಸದರ ಮನವಿಗೆ ಸ್ಪಂದಿಸಿರುವ ಕೇಂದ್ರ, ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ.ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡುವಂತೆ ಬಿಜೆಪಿ ಸಂಸದ ಯದುವೀರ್ ಮಾಡಿದ್ದ ಮನವಿಗೆ ‌ಕೇಂದ್ರ ಸರ್ಕಾರ ಸ್ಪಂದಿಸಿದೆ.ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಮರ್ಪಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದರು.ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ.

40,487 ನೋಂದಾಯಿತ ಹಾಗೂ 12,838 ಪರವಾನಗಿರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ.  ಇದು FARMERSನ್ನು ಸಂಕಷ್ಟಕ್ಕೆ ದೂಡಿತ್ತು ಎಂದು ಮನವರಿಕೆ ಮಾಡಿಕೊಡಲಾಗಿತ್ತು ಎಂದು ಯದುವೀರ್ ಹೇಳಿದರು.ಕಳೆದ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ತಂಬಾಕು ಬೆಳೆ ನಷ್ಟವಾಗಿತ್ತು. ಬೆಳೆ ಉಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರಿ‌ಂದ ಒಟ್ಟಾರೆಯಾಗಿ ಬೆಳೆಗಾರರಿಗೆ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿತ್ತು.ಫೆಬ್ರವರಿ 6ರಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

 

ಇದನ್ನು ಓದಿರಿ :Assam Man’s Tryst With Wildlife Over 4000 Animals, Reptiles & Birds

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...