spot_img
spot_img

GOVT SCHOOLS CLOSED : ಚಾಮರಾಜನಗರದಲ್ಲಿ 20 ಸರ್ಕಾರಿ ಶಾಲೆಗಳು ಬಂದ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Chamarajanagar News:

ಶೂನ್ಯ ದಾಖಲಾತಿಯಿಂದಾಗಿ ಚಾಮರಾಜನಗರದ  GOVT SCHOOLS CLOSED. ಸರ್ಕಾರಿ ಶಾಲೆಗೆ ಸೇರಿಸಬೇಕೆಂದರೆ ಪ್ರಿ ಕೆಜಿ, ಇಂಗ್ಲಿಷ್ ಮಾಧ್ಯಮ, ಶಾಲಾ ವಾಹನ ಸೌಲಭ್ಯದ ಬೇಡಿಕೆಗಳನ್ನು ಪೋಷಕರು ಮುಂದಿಡುತ್ತಿದ್ದಾರೆ. 2023-24ರಲ್ಲಿ 12 ಮತ್ತು ಈ ಸಾಲಿನಲ್ಲಿ 8 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಶೂನ್ಯ ದಾಖಲಾತಿಯಿಂದ ಬಂದ್ ಆಗಿವೆ.

ಪ್ರಿ ಕೆಜಿಗಳನ್ನು ಆರಂಭಿಸಿದರೆ, ಇಂಗ್ಲಿಷ್ ಮಾಧ್ಯಮ ಇದ್ದರೆ, ಶಾಲಾ ವಾಹನ ಸೌಲಭ್ಯ ಕಲ್ಪಿಸಿದರೆ ಮಾತ್ರ ಸರ್ಕಾರಿ ಶಾಲೆಗೆ ಸೇರಿಸುವುದಾಗಿ ಪೋಷಕರು ಶಿಕ್ಷಣ ಇಲಾಖೆಗೆ ತಿಳಿಸುತ್ತಿದ್ದಾರೆ. ಇಂಗ್ಲಿಷ್​​ ಮೇಲಿನ ಅಕ್ಕರೆ, ಕಾನ್ವೆಂಟ್​​​​ ವ್ಯಾಮೋಹ ಹಾಗೂ ಸಾರಿಗೆ ತೊಂದರೆಯಿಂದಾಗಿ ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ 20 ಸರ್ಕಾರಿ ಶಾಲೆಗಳು ಬಂದ್​ ಆಗಿವೆ.

Which schools are closed?:

ಗುಂಡ್ಲುಪೇಟೆ ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ಬರಗಿ ಕಾಲೊನಿ, ಮೇಲುಕಾಮನಹಳ್ಳಿ, ಮರಳಾಪುರ ಶಾಲೆ 2024-25ನೇ ಸಾಲಿನಲ್ಲಿ ಹುತ್ತೂರು, ಕಬ್ಬಳ್ಳಿ, ಈದ್ಗಾ ಮೊಹಲ್ಲಾ, ಹಕ್ಕಲಪುರ ಶಾಲೆಗಳು ಬಂದ್ ಆಗಿದ್ದು ಮುಚ್ಚಲ್ಪಟ್ಟಿದ್ದ ಹೊಸಪುರ, ಉತ್ತನಗೆರೆಹುಂಡಿ ಶಾಲೆಗಳು ಪುನಾರಂಭಗೊಂಡಿವೆ.

2023 ಮತ್ತು 24ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಸಾಣೇಗಾಲ, ಕಳ್ಳಿಪುರ, ಪುಟ್ಟೇಗೌಡನಹುಂಡಿ, ಹೊಸಹಳ್ಳಿ 2024-25ನೇ ಸಾಲಿನಲ್ಲಿ ಮೂಡ್ಲುಪುರ, ಗೆಜ್ಜಲ್ ಪಾಳ್ಯ, ಅಂಚಿತಾಳಪುರ, ಗೋವಿಂದವಾಡಿ, ಕುರುಬರಹುಂಡಿ GOVT SCHOOLS CLOSED. ಮುಚ್ಚಲ್ಪಟ್ಟಿದ್ದ ಕಿರಗಸೂರು ಶಾಲೆಯನ್ನು ಪುನಾರಂಭಿಸಲಾಗಿದೆ. ಹನೂರು ತಾಲೂಕಿನಲ್ಲಿ 2024-25ನೇ ಸಾಲಿನಲ್ಲಿ ಚಂಗಡಿ, ಎಡಳಿದೊಡ್ಡಿ ಶಾಲೆಗಳು, ಯಳಂದೂರು ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ದಾಸನಹುಂಡಿ‌ ಶಾಲೆಗಳು ಬಂದ್ ಆಗಿವೆ.

Education Department Response:

ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡಿದ್ದು ಅವರೂ ಕೂಡ ಇದನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಪಾಲಕರ ಬೇಡಿಕೆಯನ್ನು ಪುರಸ್ಕರಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯೋಜನೆ ಹಾಕುತ್ತಿದ್ದೇವೆ. 4 ಉರ್ದು ಶಾಲೆಗಳಿರುವ ಊರಿನಲ್ಲಿ ಮುಸ್ಲಿಂ ಸಮುದಾಯದ ಮಕ್ಕಳೇ ಇಲ್ಲ. ಆ ಹಿನ್ನೆಲೆಯಲ್ಲಿ ಅದನ್ನು ಕನ್ನಡ ಮತ್ತು ಉರ್ದು ದ್ವಿಭಾಷಾ ಶಾಲೆಯನ್ನಾಗಿ ಪರಿವರ್ತಿಸಲು ಮುಂದಾಗಿದ್ದೇವೆ.

ಶಾಲಾ ವಾಹನ, ಸಾರಿಗೆ ಸೌಲಭ್ಯ ಕೊಟ್ಟರೆ ಮಕ್ಕಳನ್ನು ಕಳುಹಿಸುತ್ತೇವೆ ಎಂಬುದು ಕೂಡ ಹಲವು ಪಾಲಕರ ಬೇಡಿಕೆಯಾಗಿದೆ. ಇದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಿಎಸ್ಆರ್ ಫಂಡ್​ನಿಂದ ಶಾಲಾ ವಾಹನ ಕಲ್ಪಿಸುವ ಮತ್ತು ದಾನಿಗಳಿಂದ ಸರ್ಕಾರಿ ಶಾಲೆಯನ್ನು ದುರಸ್ತಿಪಡಿಸಲು ಮುಂದಾಗಿದ್ದೇವೆ ಎಂದರು.

ಇದನ್ನು ಓದಿರಿ : LONE WOMEN MURDER CASE : ಒಂಟಿ ಮಹಿಳೆಯರ ಕೊಲೆ ಪ್ರಕರಣ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...