spot_img
spot_img

2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಕ್ಯಾನ್ಸಲ್ ! ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಕಂತು ಬಂದಿಲ್ಲ ಎಂದು 2-3  ತಿಂಗಳಿಂದ ನೀವು ಹಾದಿ ನೋಡುತ್ತಿದ್ದರೆ, ನಿಮ್ಮಲ್ಲಿ ಬಹುತೇಕರಿಗೆ ಈ ಯೋಜನೆಯೇ ರದ್ದಾಗಿರುವ ಸಾಧ್ಯತೆ ಇರುತ್ತದೆ. ಹೌದು ಸದ್ದಿಲ್ಲದೆ ಐಟಿ,ಜಿಎಸ್‌ಟಿ ಯೋಜನೆ.

ರಾಜ್ಯ ಸರಕಾರದ ಪಂಚ ‘ಗ್ಯಾರಂಟಿ’ ಗಳಲ್ಲಿಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಸದ್ದಿಲ್ಲದೆ ಐಟಿ (ಆದಾಯ ತೆರಿಗೆ) ಶಾಕ್‌ ನೀಡಿದೆ. ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇನ್ನು ಮುಂದೆ ಗೃಹಲಕ್ಷ್ಮೀ ಹಣ ಸಿಗಲ್ಲ.ಇದುವರೆಗೆ ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’. ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಹೊರಗಿಡಲಾಗಿದೆ. IT GST ಪಾವತಿದಾರರ ಪಟ್ಟಿ ಸಿದ್ಧವಾಗಿದ್ದು, ಅವರಿಗೆ ಯೋಜನೆ ಸ್ಥಗಿತಗೊಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪರಿಶೀಲಿಸಿ

ಕಳೆದ 2-3 ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂದಿಲ್ಲ. ಇವತ್ತು – ನಾಳೆ ಅಷ್ಟೂ ತಿಂಗಳ ಹಣ ಒಟ್ಟಿಗೇ ಬರುತ್ತದೆ ಎಂದು ನಿರೀಕ್ಷಿ ಇಟ್ಟುಕೊಳ್ಳುವುದು ಹಾಗೂ ಬ್ಯಾಂಕ್‌ಗಳಿಗೆ ಪದೇಪದೆ ಈ ಉದ್ದೇಶದಿಂದ ಅಲೆಯುವುದು ಬೇಡ. ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಾಲಯದಲ್ಲಿ ವಿಚಾರಿಸಿದರೆ ಕಾರಣ ಸ್ಪಷ್ಟವಾಗಲಿದೆ. ಎನ್‌ಪಿಸಿಐ ಇನ್‌ ಆಕ್ಟಿವ್‌ ಆದ ಫಲಾನುಭವಿಗಳಿಗೂ ಹಣ ಖಾತೆಗೆ ಜಮೆಯಾಗಿಲ್ಲ.

ಆಧಾರ್‌ ಲಿಂಕ್‌, ಬ್ಯಾಂಕ್‌ ಖಾತೆ ಜೋಡಣೆ ಮೊದಲಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಕಾರಣದಿಂದ ಯೋಜನೆ ಹಣ ಬರದಿದ್ದರೆ ಅಪ್‌ಡೇಟ್‌ ಮಾಡಿಸಿಕೊಂಡ ಹಾಗೂ ಸಮಸ್ಯೆ ಬಗೆಹರಿದ ಕೂಡಲೇ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ ಆಗಲಿದೆ.

ಇದನ್ನೂ ಓದಿ: ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.!

2 ಲಕ್ಷ ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ

ರಾಜ್ಯದ 1.28 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಲ್ಲಿ ಸದ್ಯದ ಲಭ್ಯ ಮಾಹಿತಿ ಪ್ರಕಾರ ಸುಮಾರು 2 ಲಕ್ಷ ಮಹಿಳೆಯರನ್ನು ಐಟಿ, ಜಿಎಸ್‌ಟಿ ಪಾವತಿ ಕಾರಣದಿಂದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ತುಮಕೂರು ಜಿಲ್ಲೆಯೊಂದರಲ್ಲೇ ಐಟಿ, ಜಿಎಸ್‌ಟಿ ಕಟ್ಟುವ 7,343 ಮಹಿಳೆಯರು ಗೃಹಲಕ್ಷ್ಮೀ’ಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ:ನಾಗಮಂಗಲ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ; ಸಚಿವ ಪರಮೇಶ್ವರ ಹೇಳಿದ್ದಾರೆ.!

ಅಧಿಕೃತ ಹಿಂಬರಹ

ಐಟಿ, ಜಿಎಸ್‌ಟಿ ಪಾವತಿದಾರ ಮಹಿಳೆಯರು ‘ಗೃಹಲಕ್ಷ್ಮೀ’ ಹಣ ಬಂದಿಲ್ಲವೆಂದು ಕಚೇರಿಗೆ ಅಲೆಯುತ್ತಿದ್ದರೆ, ಅವರನ್ನು ಆ ಉದ್ದೇಶಕ್ಕಾಗಿ ಅಲೆಸಬಾರದು. ಜಿಎಸ್‌ಟಿ, ಐಟಿ ಪಾವತಿದಾರರಾಗಿರುವುದರಿಂದ ನಿಮಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗುವುದಿಲ್ಲಎಂದು ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆದೇಶಿಸಿದ್ದಾರೆ.

ಐಟಿ, ಜಿಎಸ್‌ಟಿ ಕ್ಯಾತೆ ಏಕೆ?

ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ, ‘ತನ್ನ ಪತ್ನಿಗೂ ಸೇರಿದಂತೆ ಪ್ರತಿಯೊಬ್ಬ ಮಹಿಳೆಯರಿಗೂ ಗ್ಯಾರಂಟಿ ಲಾಭ ಸಿಗಲಿದೆ. ಗೃಹಲಕ್ಷ್ಮೀ ಯೋಜನೆ ಹಣ 2000 ರೂ. ಮಾಸಿಕವಾಗಿ ಬ್ಯಾಂಕ್‌ ಖಾತೆಗೆ ಸಂದಾಯವಾಗಲಿದೆ’ ಎಂದಿದ್ದರು. ಆದರೆ ಈಗ ‘ಷರತ್ತುಬದ್ಧ ಗ್ಯಾರಂಟಿ’ ನೀಡಿಕೆ ಟೀಕೆಗೆ ಅಸ್ತ್ರವಾಗುತ್ತಿದೆ.

ಇದನ್ನೂ ಓದಿ:ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

ಐಟಿ, ಜಿಎಸ್‌ಟಿ ಪಾವತಿದಾರರನ್ನು ಗೃಹಲಕ್ಷ್ಮೀ ಯೋಜನೆಯಿಂದ ಕೈಬಿಡಲಾಗಿದೆ. ಫಲಾನುಭವಿಗಳ ಪಟ್ಟಿಯಿಂದ ಕೈಬಿಟ್ಟವರಿಗೆ ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಸೂಚಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...