spot_img
spot_img

GST COUNCIL MEET : ಜೈಸಲ್ಮೇರ್ನಲ್ಲಿ ನಾಳೆ ಜಿಎಸ್ಟಿ ಕೌನ್ಸಿಲ್ ಸಭೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Jaisalmer, Rajasthan :

ಡಿಸೆಂಬರ್ 21 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1:45 ರವರೆಗೆ ಹೋಟೆಲ್ ಮ್ಯಾರಿಯಟ್​ನಲ್ಲಿ ನಡೆಯಲಿರುವ 55 ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ. ಈ ಮಹತ್ವದ ಸಭೆಯಲ್ಲಿ ಹಣಕಾಸು ಸಚಿವರು, ಉಪಮುಖ್ಯಮಂತ್ರಿಗಳು ಮತ್ತು ರಾಜ್ಯಗಳ ಇತರ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ದಿನಗಳ ಭೇಟಿಗಾಗಿ ಇಂದು ಜೈಸಲ್ಮೇರ್ ಗೆ ಆಗಮಿಸಲಿದ್ದಾರೆ. ಅವರು ಡಿಸೆಂಬರ್ 20 ರಂದು ಮಧ್ಯಾಹ್ನ 12:30 ಕ್ಕೆ ದೆಹಲಿಯಿಂದ ಹೊರಟು ಮಧ್ಯಾಹ್ನ 2:20 ಕ್ಕೆ ಜೈಸಲ್ಮೇರ್ ತಲುಪಲಿದ್ದಾರೆ.

ನಂತರ ಇಲ್ಲಿನ ಹೋಟೆಲ್ ಮ್ಯಾರಿಯಟ್​ನಲ್ಲಿ ಸಂಜೆ 4 ರಿಂದ 7:30 ರವರೆಗೆ ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಅವರು ಜೈಸಲ್ಮೇರ್​ನಲ್ಲಿಯೇ ತಂಗಲಿದ್ದು, ಡಿಸೆಂಬರ್ 21 ರಂದು 55 ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಭಾಗವಹಿಸಲು ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ, ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಇತರ ಪ್ರಮುಖ ನಾಯಕರು ಜೈಸಲ್ಮೇರ್ ತಲುಪಲಿದ್ದಾರೆ. ದಿಯಾ ಕುಮಾರಿ ಮೂರು ದಿನಗಳ ಕಾಲ ಜೈಸಲ್ಮೇರ್ ನಲ್ಲಿ ಉಳಿಯಲಿದ್ದು, ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 21 ರಂದು ಜೈಸಲ್ಮೇರ್ ತಲುಪಲಿದ್ದಾರೆ.

All CMs involved:

ದೆಹಲಿ ಮುಖ್ಯಮಂತ್ರಿ ಅತಿಶಿ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಗೋವಾ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಪ್ರಮೋದ್ ಸಾವಂತ್, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Deputy Chief Ministers from these states participated in the meeting:

ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದಿಯೋರಾ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ ಚೌನಾ ಮೇ, ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್, ಉತ್ತರಾಖಂಡದ ಹಣಕಾಸು ಸಚಿವ ಪ್ರೇಮ್ ಚಂದ್ ಅಗರ್ವಾಲ್, ನಾಗಾಲ್ಯಾಂಡ್ ಉಪಮುಖ್ಯಮಂತ್ರಿ ಟಿ.ಆರ್.ಜೆಲಿಯಾಂಗ್, ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಡಾ.ವಿ.ಅಂತಾ ನಾಗೇಶ್ವರನ್, ಮಣಿಪುರ ಆರೋಗ್ಯ ಸಚಿವ ಡಾ.ಸಪರಮ್ ರಂಜನ್ ಸಿಂಗ್, ಹಣಕಾಸು ರಾಜ್ಯ ಸಚಿವ ಪಂಕಜ್ ಚವಾಣ್ ಕೂಡ ಸಭೆಯಲ್ಲಿ ಭಾಗವಹಿಸಲು ಜೈಸಲ್ಮೇರ್ ತಲುಪಲಿದ್ದಾರೆ. ಜಿಎಸ್​ಟಿ ಸಭೆಯ ಹಿನ್ನೆಲೆಯಲ್ಲಿ ಜೈಸಲ್ಮೇರ್​ನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕಾಗಿ ಸುಮಾರು 2,000 ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAMSUNG GALAXY S25 SERIES : ಭಾರತೀಯ ಮಾರುಕಟ್ಟೆಗೆ ಕಾಲಿಟ್ಟ ಸ್ಯಾಮ್ಸಂಗ್ ಹೊಸ ಸ್ಮಾರ್ಟ್ಫೋನ್ಗಳು

Hyderabad News: ಬಹುನಿರೀಕ್ಷಿತ SAMSUNG GALAXY S25ಸರಣಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳು ಇಲ್ಲಿವೆ.ದಕ್ಷಿಣ ಕೊರಿಯಾದ ಟೆಕ್ ದೈತ್ಯ...

WANKHEDE STADIUM 50TH ANNIVERSARY:14,505 ಲೆದರ್ ಬಾಲ್ಗಳಿಂದ ‘ವಾಕ್ಯ’ ರಚಿಸಿ ಗಿನ್ನೆಸ್ ದಾಖಲೆ.

Mumbai News: ಎಂಸಿಎ ಈ ದಾಖಲೆಯನ್ನು ಆ ಪಂದ್ಯದಲ್ಲಿ ಶತಕ ಗಳಿಸಿದ ದಿವಂಗತ ಏಕನಾಥ್ ಸೋಲ್ಕರ್ ಮತ್ತು ಕ್ರೀಡೆಗೆ ಅಸಾಧಾರಣ ಕೊಡುಗೆಗಳನ್ನು ನೀಡಿದ ಮುಂಬೈನ ಇತರ...

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ...

PINK SALT BENEFITS FOR HEALTH : ಪಿಂಕ್ ಉಪ್ಪಿನಿಂದ ಆರೋಗ್ಯಕ್ಕೆ ಹಲವು ಪ್ರಯೋಜನ

Pink Salt Benefits for Health News: ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್ ಉಪ್ಪು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ...