spot_img
spot_img

GUARANTEE SCHEMES – ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News :

ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಸುವರ್ಣಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಭೇಟಿಯಾಗಿ ಮಾತನಾಡಿದ ಅವರು, “ಗ್ಯಾರಂಟಿಗಳಿಂದ ಬಡವರು, ಮಧ್ಯಮ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಅನುಕೂಲ ಆಗ್ತಿದೆ.

ಗ್ಯಾರಂಟಿಗಳ ಅನುಕೂಲ‌ ಪಡೆದ ಮಹಿಳೆಯರು ಇವತ್ತು ನನ್ನನ್ನು ಭೇಟಿಯಾಗಿದ್ದಾರೆ.‌ ಮಹಿಳೆಯರಿಗೆ ತುಂಬಾ ಅನುಕೂಲ ಆಗಿದೆ” ಎಂದರು. “ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಅಡ್ಡಿಪಡಿಸೋಕೆ ಬಂದ್ರೆ ಕಾನೂನು ಕ್ರಮ ಕೈಗೊಳ್ತೀವಿ.

ಯಾರೇ ಅಡ್ಡಿಪಡಿಸಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.ವಕ್ಫ್ ವಿರುದ್ದ ಬಿಜೆಪಿ ಹೋರಾಟದ ವಿಚಾರವಾಗಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಅವಕಾಶವಿದೆ. ಆದರೆ ದುರುದ್ದೇಶದಿಂದ ಹೋರಾಟ ಮಾಡಬಾರದು.

ನಮ್ಮ ತಪ್ಪುಗಳಿದ್ರೆ ವಿಪಕ್ಷದವರು ಚರ್ಚಿಸಲಿ. ಅಭಿವೃದ್ದಿ ವಿಚಾರಗಳ ಬಗ್ಗೆ ಚರ್ಚೆ ಮಾಡಲಿ. ಎಐಸಿಸಿ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತೆ. ವಕ್ಫ್‌‌ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿ,ಬಿಜೆಪಿ ಕಾಲದಲ್ಲಿ ಒಂದೇ ಒಂದು ಪ್ರಕರಣ ಸಿಬಿಐಗೆ ಕೊಟ್ಟರಾ?. ಯಾವ ನೈತಿಕತೆ ಇದೆ ನಮ್ಮನ್ನು ಪ್ರಶ್ನಿಸಲು?.

ಬಿಜೆಪಿಯವರು ಅಪಪ್ರಚಾರ ಮಾಡ್ತಾರೆ ಎಂದು ತಿರುಗೇಟು ಕೊಟ್ಟರು. ಇದಕ್ಕೂ ಮುನ್ನ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸುವರ್ಣಸೌಧದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಭೇಟಿ ಮಾಡಿದ ಅವರು, ಸಿಎಂಗೆ ಕೃತಜ್ಞತೆ ಸಲ್ಲಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಶಾಸಕ ವಿನಯ್ ಕುಲಕರ್ಣಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

UN AID TO GAZA : ಪರಿಹಾರ ಸಾಮಗ್ರಿ ಹೊತ್ತ 1,000 ಟ್ರಕ್ ಗಾಜಾ ಪ್ರವೇಶ

United Nations News: ಕದನ ವಿರಾಮ ಜಾರಿಯಾಗಿದ್ದರಿಂದ ವಿಶ್ವಸಂಸ್ಥೆಯ ಕಾರ್ಯಕರ್ತರು GAZAದೊಳಕ್ಕೆ ಪರಿಹಾರ ಸಾಮಗ್ರಿ ತಲುಪಿಸುವ ಕಾರ್ಯಗಳನ್ನು ಪುನಾರಂಭಿಸಿದ್ದಾರೆ.ಇದಲ್ಲದೆ ಮನೆ ಮಠ ಕಳೆದುಕೊಂಡ ನಿರಾಶ್ರಿತರಾಗಿರುವ GAZA...

HIGH COURT : ಅವಾಚ್ಯ ಪದ ಬಳಕೆ ಆರೋಪ

Bangalore News: ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ HIGH COURT ಮಧ್ಯಂತರ ಆದೇಶ...

FARMER SUCCESS STORY : ದೇಶಿ ಬೀಜಗಳ ಸಂರಕ್ಷಣೆಗೆ ಪಣ, 18 ತಳಿಗಳ ಜೋಳ ಬೆಳೆದ ರೈತ

Belgaum News: ಸಗಣಿ, ಎರೆ ಹುಳು - ಹಸಿರು ಎಲೆಯಂತಹ ಸಾವಯವ ಗೊಬ್ಬರ ಬಳಸಿ ದೇಶಿ ತಳಿಯ 18 ಬಗೆಯ ಜೋಳ ಬೆಳೆದ ರೈತನ ಬಗ್ಗೆ...

CUCUMBER CARROT PANCAKES : ಭರ್ಜರಿ ರುಚಿಯ ಸೌತೆಕಾಯಿ – ಗಜ್ಜರಿ ಪ್ಯಾನ್ ಕೇಕ್ಸ್ ಸಿದ್ಧಪಡಿಸೋದು ಹೇಗೆ ಗೊತ್ತಾ

Carrot Cucumber Pan Cake Recipe: ಸಂಜೆಯ ಸಮಯದಲ್ಲಿ ಅನೇಕರಿಗೆ ಏನನ್ನಾದರೂ ಸ್ನ್ಯಾಕ್ಸ್ ತಿನ್ನಬೇಕು ಅನಿಸುತ್ತದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಮಮ್ಮಿ ತಿನ್ನಲು ಏನಾದರೂ...