spot_img
spot_img

ಮಾರ್ಗದರ್ಶಿ ಚಿಟ್​ಫಂಡ್ ಹೊಸ​ ಶಾಖೆಗಳು ಆರಂಭ

spot_img
spot_img

Share post:

ಹೈದರಾಬಾದ್​: ಮಾರ್ಗದರ್ಶಿ ಚಿಟ್​​ಫಂಡ್​ ಪ್ರೈವೇಟ್​ ಲಿಮಿಟೆಡ್​​ ತನ್ನ ಹೊಸ ಶಾಖೆಗಳನ್ನು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಬುಧವಾರದಿಂದ ಆರಂಭಿಸಲಿದೆ. ರಾಮೋಜಿ ಸಮೂಹ ಸಂಸ್ಥೆಗಳ ಕಂಪನಿಗಳಲ್ಲಿ ಒಂದಾದ ಮಾರ್ಗದರ್ಶಿ ಚಿಟ್​​ಫಂಡ್​ ಪ್ರೈವೇಟ್​ ಲಿಮಿಟೆಡ್​​ ತನ್ನ ಮತ್ತೆರಡು ಶಾಖೆಗಳನ್ನು ಕರ್ನಾಟಕ, ತಮಿಳುನಾಡಿನಲ್ಲಿ ಕಾರ್ಯಾರಂಭಿಸಲಿದೆ.

119ನೇ ಶಾಖೆ ಕರ್ನಾಟಕದ ಬೆಂಗಳೂರಿನ ಕೆಂಗೇರಿ, 120ನೇ ಶಾಖೆ ತಮಿಳುನಾಡಿನ ಹೊಸೂರಿನಲ್ಲಿ ಇಂದು (ಡಿಸೆಂಬರ್​ 11) ಉದ್ಘಾಟನೆಯಾಗಲಿವೆ.

ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಸ್ನೇಹಿಯಾಗಿರುವ ಮಾರ್ಗದರ್ಶಿ ಚಿಟ್​​ಫಂಡ್ ಸಂಸ್ಥೆಯು ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತನ್ನ ಜಾಲ ಹೊಂದಿದೆ. ತನ್ನ ಹೂಡಿಕೆದಾರರು, ಗ್ರಾಹಕರ ಸಬಲೀಕರಣಕ್ಕೆ ಸಂಸ್ಥೆಯು ಕಠಿಬದ್ಧವಾಗಿದೆ.

“ಸಂಸ್ಥೆಯು 1962ರಲ್ಲಿ ಪ್ರಾರಂಭವಾದಾಗಿನಿಂದಲೂ ನಂಬಿಕೆ ಮತ್ತು ವಿಶ್ವಾಸಾರ್ಹತೆ ಕಾಪಾಡಿಕೊಂಡು ಬಂದಿದೆ. 60 ಲಕ್ಷ ಗ್ರಾಹಕರಿಗೆ ಅತ್ಯುತ್ತಮ ಸೇವೆ ಸಲ್ಲಿಸುತ್ತಿದೆ. 9,396 ಕೋಟಿ ರೂಪಾಯಿಗಳ ವಹಿವಾಟು ನಡೆಸುತ್ತಿದೆ. ಕಂಪನಿಯು ಮೌಲ್ಯಗಳ ಆಧಾರದ ಮೇಲೆ, ಆರ್ಥಿಕ ಶಿಸ್ತು ಮತ್ತು ಪಾರದರ್ಶಕತೆ, ಗ್ರಾಹಕರ ಹಣಕ್ಕೆ ಭದ್ರತೆ ನೀಡುತ್ತದೆ” ಎಂದು ಶೈಲಜಾ ಸ್ಪಷ್ಟಪಡಿಸಿದರು.

“ಆರು ದಶಕಗಳಿಗೂ ಹೆಚ್ಚು ಕಾಲ, ಮಾರ್ಗದರ್ಶಿಯು ಸಾವಿರಾರು ಕುಟುಂಬಗಳ ಆರ್ಥಿಕ ವ್ಯವಹಾರಕ್ಕೆ ಧನಸಹಾಯ, ಶಿಕ್ಷಣ, ವಿವಾಹ, ಮನೆ ಖರೀದಿ, ಉದ್ಯಮ ಆರಂಭಕ್ಕೆ ಬೆಂಗಾವಲಾಗಿ ನಿಂತಿದೆ. ಕೆಂಗೇರಿ ಮತ್ತು ಹೊಸೂರಿನಲ್ಲಿ ಆರಂಭವಾಗಲಿರುವ ಹೊಸ ಶಾಖೆಗಳು ಈ ಭಾಗದ ಜನರ ಜೀವನವನ್ನು ಸಶಕ್ತಗೊಳಿಸುವ ಪಯಣದಲ್ಲಿ ಮತ್ತೊಂದು ಹೆಜ್ಜೆಯಾಗಲಿದೆ” ಎಂದು ಹೇಳಿದ್ದಾರೆ.

ಮಾರ್ಗದರ್ಶಿ ಚಿಟ್‌ಫಂಡ್‌ ಸಂಸ್ಥೆಯಲ್ಲಿ 4,100 ಮಂದಿ ಉದ್ಯೋಗಿಗಳಿದ್ದು, 18 ಸಾವಿರ ಏಜೆಂಟ್​ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಸಂಸ್ಥೆ ಅನೇಕರಿಗೆ ಜೀವನೋಪಾಯದ ಮೂಲಾಧಾರವಾಗಿದೆ.

ಬದುಕಿನ ಪ್ರಮುಖ ಘಟನಾವಳಿಗಳ ಸಂದರ್ಭಗಳಲ್ಲಿ ಕುಟುಂಬಗಳಿಗೆ ಸಹಾಯ ಮಾಡುವುದರಿಂದ ಹಿಡಿದು, ಕಾರ್ಯನಿರತ ಬಂಡವಾಳದೊಂದಿಗೆ ಉದ್ಯಮಿಗಳಿಗೆ ಬೆಂಬಲ ನೀಡುವವರೆಗೆ ಮಾರ್ಗದರ್ಶಿ ಸಂಸ್ಥೆಯು ತನ್ನ ಚಂದಾದಾರರ ಅಗತ್ಯಗಳಿಗೆ ಅನುಗುಣವಾಗಿ ಆರ್ಥಿಕ ಪರಿಹಾರಗಳನ್ನು ನಿರಂತರವಾಗಿ ತಲುಪಿಸಿದೆ. ಹೊಸೂರು ಮತ್ತು ಕೆಂಗೇರಿ ಶಾಖೆಗಳು ಈ ಶ್ರೇಷ್ಠ ಸಂಪ್ರದಾಯವನ್ನು ಮುಂದುವರಿಸಲಿವೆ. ಚಂದಾದಾರರಿಗೆ ಅವರ ಆರ್ಥಿಕ ಗುರಿ, ಆಕಾಂಕ್ಷೆಗಳನ್ನು ಸಾಧಿಸಲು ಸಂಸ್ಥೆ ನೆರವಾಗುತ್ತದೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸುವ ಕುರಿತು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾರ್ಗದರ್ಶಿ ಚಿಟ್ ಫಂಡ್‌ನ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ಕಿರಣ್, “ಸಂಸ್ಥೆಯು ಮತ್ತೆರಡು ಶಾಖೆಗಳನ್ನು ವಿಸ್ತರಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ.

ನಮ್ಮ ಗ್ರಾಹಕರ ಗುರಿಗಳನ್ನು ಸಾಕಾರ ಮಾಡಲು ಮಾರ್ಗದರ್ಶಿಯು ಬದ್ಧವಾಗಿದೆ. ಗ್ರಾಹಕರು ನಿರೀಕ್ಷಿಸಿದ ಮಟ್ಟದಲ್ಲಿ ಸೇವೆಯನ್ನು ಮುಂದುವರಿಸಲು ನಾವು ಉತ್ಸುಕರಾಗಿದ್ದೇವೆ” ಎಂದು ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...