spot_img
spot_img

HARBHAJAN SINGH : ಕನ್ನಡಿಗ ಇರುವ ತನಕ ತಂಡದಲ್ಲಿ ಎಲ್ಲವೂ ಚೆನ್ನಾಗಿತ್ತು,

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್​ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ತೋರಿರುವ ಕುರಿತು HARBHAJAN SINGH ​ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್​ ವಿರುದ್ಧ ನಡೆದ 3 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವೈಟ್​ವಾಶ್ ಆಗಿದ್ದ ಭಾರತ, ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದೆ. ಇದರೊಂದಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ ಶಿಪ್​ ಫೈನಲ್​ ರೇಸ್​ನಿಂದಲೂ ಹೊರಬಿದ್ದಿದೆ.

ಕೆಲವು ತಿಂಗಳಿಂದ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾದ ಪ್ರದರ್ಶನ ಗಮನಾರ್ಹವಾಗಿಲ್ಲ. ಅದರಲ್ಲೂ ಟೆಸ್ಟ್​ನಲ್ಲಿ ಕಳಪೆ ಪ್ರದರ್ಶನದಿಂದ ಭಾರತ ಸತತ ಸೋಲು ಅನುಭವಿಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಬ್ಯಾಟರ್​​ಗಳ ಪ್ರದರ್ಶನ ಗಮನಿಸಿದರೆ ಟೀಂ ಇಂಡಿಯಾ ಸ್ಟಾರ್ ಆಟಗಾರರ ಆಯ್ಕೆ ಸಂಸ್ಕೃತಿಯನ್ನು ಕೈಬಿಡಬೇಕು.ಏತನ್ಮಧ್ಯೆ, ಭಾರತದ ಕಳಪೆ ಪ್ರದರ್ಶನದ ಬಗ್ಗೆ ಮಾಜಿ ಬೌಲರ್​ HARBHAJAN SINGH ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿರುವವರೆಗೆ ತಂಡದಲ್ಲಿ ಎಲ್ಲವೂ ಚೆನ್ನಾಗಿತ್ತು. ಕಳೆದ ಆರು ತಿಂಗಳಲ್ಲಿ ಭಾರತದ ಪರಿಸ್ಥಿತಿ ಏನಾಗಿದೆ ನೋಡಿ ಎಂದರು.ಕಳೆದ ಆರು ತಿಂಗಳಲ್ಲಿ ನಾವು ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಕಳೆದುಕೊಂಡಿದ್ದೇವೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಆಗಿದ್ದೇವೆ.

ಈಗ ಆಸ್ಟ್ರೇಲಿಯಾದಲ್ಲಿ 3-1 ಅಂತರದಲ್ಲಿ ಸೋತಿದ್ದೇವೆ. ಇದೆಲ್ಲವನ್ನು ಗಮನಿಸಿದರೆ ಭಾರತ ತಂಡ ಕುಸಿದಂತೆ ಕಾಣುತ್ತಿದೆ’ ಎಂದು HARBHAJAN SINGHಹೇಳಿದ್ದಾರೆ.ರಾಹುಲ್ ದ್ರಾವಿಡ್ ಕೋಚ್ ಆಗಿದ್ದಾಗ ಎಲ್ಲವೂ ಚೆನ್ನಾಗಿಯೇ ಇತ್ತು. ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆಲುವು ಸಾದಿಸಿದ್ದೆವು. ಇದಲ್ಲದೇ ಭಾರತ ಟಿ20 ವಿಶ್ವಕಪ್ ಕೂಡ ಗೆದ್ದುಕೊಂಡಿತು. ಆದರೆ ಅದರ ನಂತರ ಇದ್ದಕ್ಕಿದ್ದಂತೆ ಏನಾಯಿತು? ನನಗೇನೂ ಅರ್ಥವಾಗುತ್ತಿಲ್ಲ.

ಈ ಹಿಂದೆ ಕಪಿಲ್‌ದೇವ್ ಮತ್ತು ಅನಿಲ್ ಕುಂಬ್ಳೆಯಂತಹ ಬಿಗ್​ ಮ್ಯಾಚ್ ವಿನ್ನರ್‌ಗಳನ್ನು ತಂಡದಿಂದ ಕೈಬಿಟ್ಟ ಸಂದರ್ಭಗಳು ಇವೆ. ಇಂತಹ ಸಮಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರರ ಸಂಸ್ಕೃತಿಯನ್ನು ಕೈಬಿಡಬೇಕು ಎಂದರು.ಆಸೀಸ್ ಪ್ರವಾಸದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತೀವ್ರ ನಿರಾಸೆ ಮೂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಭಜ್ಜಿ, ‘ಪ್ರತಿಯೊಬ್ಬ ಆಟಗಾರನಿಗೂ ಒಂದಷ್ಟು ಜನಪ್ರಿಯತೆ ಮತ್ತು ಖ್ಯಾತಿ ಇರುತ್ತದೆ. ಆದಾಗ್ಯೂ, ಆಟಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ.

ಅಭಿಮನ್ಯು ಈಶ್ವರನ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆಯಾಗಿದ್ದು, ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಸರ್ಫರಾಜ್ ಖಾನ್​ಗೂ ಇದೇ ಪರಿಸ್ಥಿತಿ. ಹಾಗಾಗಿ ಖ್ಯಾತಿ ಪಡೆದಿರುವ ಆಟಗಾರರಿಗಿಂತಲೂ ಟ್ಯಾಲೆಂಟ್​ ಇರುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು HARBHAJAN SINGHಸಲಹೆ ನೀಡಿದ್ದಾರೆ.ಈ ಹಿನ್ನೆಲೆ ಬುಮ್ರಾ ಕುರಿತು ಪ್ರತಿಕ್ರಿಯೆ ನೀಡಿದ್ದ ಭಜ್ಜಿ, ಬುಮ್ರಾ ಇಲ್ಲದಿದ್ದರೆ ಭಾರತ ಈ ಸರಣಿಯನ್ನು 5-0 ಅಂತರದಿಂದ ಕಳೆದುಕೊಳ್ಳುತ್ತಿತ್ತು. ಅವರು ಪರ್ತ್ ಟೆಸ್ಟ್‌ನಲ್ಲಿ ನಾಯಕನಾಗಿ ಭಾರತವನ್ನು ಗೆಲ್ಲಿಸಿದರು.

ಇದಷ್ಟೇ ಅಲ್ಲದೇ ಉಳಿದ ಪಂದ್ಯಗಳಲ್ಲೂ ಬೌಲರ್​ ಆಗಿ ಉತ್ತಮ ಪ್ರದರ್ಶನ ತೋರಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ತೋರಿದ ಏಕೈಕ ಆಟಗಾರ ಎಂದರೇ ಅದು ಬುಮ್ರಾ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಬುಮ್ರಾ 5 ಪಂದ್ಯಗಳಲ್ಲಿ 32 ವಿಕೆಟ್‌ಗಳು ಉರುಳಿಸಿ ಅಗ್ರ ವಿಕೆಟ್ ಟೇಕರ್ ಆದರು.

ಇದನ್ನು ಓದಿರಿ : ICC CHAMPIONS TROPHY : ಶಾಕಿಂಗ್ ನ್ಯೂಸ್! ಚಾಂಪಿಯನ್ಸ್ ಟ್ರೋಫಿಗೂ ಮೊದಲೇ ಭಾರತಕ್ಕೆ ಆಘಾತ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...