spot_img
spot_img

HC SEEKS CLARIFICATION : ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮಾಡಿಕೊಂಡು ಬರುತ್ತಿರುವ ಎಂಇಎಸ್‌ಗೆ HC SEEKS CLARIFICATION ಕೇಳಿದ ನ್ಯಾಯ ಪೀಠ, ಪ್ರಕರಣದಲ್ಲಿ ನಿಮ್ಮ ನಿಲುವೇನು ಎಂಬುದನ್ನು ಮುಂದಿನ ವಿಚಾರಣೆಯೊಳಗೆ ಸ್ಪಷ್ಟಪಡಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

bHC SEEKS CLARIFICATION ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಪಿ. ಅಮೃತೇಶ್, ರಾಜ್ಯದಲ್ಲಿ ಪ್ರತಿ ವರ್ಷ ನವಂಬರ್ 1ರಂದು ಆಚರಿಸುವ ಕನ್ನಡ ರಾಜ್ಯೋತ್ಸವವು ಕರ್ನಾಟಕ ಹಾಗೂ ಕನ್ನಡಿಗರ ಹೃದಯ ಮತ್ತು ಆತ್ಮದೊಂದಿಗೆ ಬೆಸೆದುಕೊಂಡಿದೆ. ಆದರೆ, ಗಡಿ ವಿವಾದ ಇರುವ ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯು ರಾಜ್ಯೋತ್ಸವದ ದಿನದಂದೇ ಕರಾಳ ದಿನ ಆಚರಿಸಿಕೊಂಡು ಬರುತ್ತಿದೆ.

ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ.ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ.

ಮೇಲಾಗಿ ಕರಾಳ ದಿನ ಆಚರಿಸಲು ರಾಜ್ಯ ಪೊಲೀಸರೇ ಭದ್ರತೆ ಒದಗಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

NOTICE TO ALL ACCUSED:

ಈ ನಡುವೆ ನ್ಯಾಯಪೀಠ, ಎಂಇಎಸ್ ಪರವಾಗಿ ಯಾರು ಹಾಜರಾಗುತ್ತಿದ್ದಾರೆ ಎಂದು ಪ್ರಶ್ನಿಸಿತು. ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು, ತಾವು ಎಂಇಎಸ್ ನ ಅಧ್ಯಕ್ಷರನ್ನು ಪ್ರತಿನಿಧಿಸುತ್ತಿರುವುದಾಗಿ ತಿಳಿಸಿದರು. ಅದಕ್ಕೆ ನ್ಯಾಯಪೀಠ, ಕರ್ನಾಟಕದಲ್ಲಿ ಮಹಾರಾಷ್ಟ್ರವೇ ಎಂದು ಪ್ರಶ್ನಿಸಿತಲ್ಲದೆ, ಪ್ರಕರಣದಲ್ಲಿ ನಿಮ್ಮ ನಿಲುವೇನು ಎಂಬುದನ್ನು ಮುಂದಿನ ವಿಚಾರಣೆಯೊಳಗೆ ಸ್ಪಷ್ಟಪಡಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಿತು.

ಕಳೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 2019ರಿಂದ ಎಂಇಎಸ್ ಉಗ್ರ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ವಿರೋಧಿಸಿ HC SEEKS CLARIFICATION ಪ್ರತಿಭಟನೆ ನಡೆಸುತ್ತಿದೆ. ಸರ್ಕಾರದ ಎಚ್ಚರಿಕೆಗೆ ಎಂಇಎಸ್ ಕಾರ್ಯಕರ್ತರು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಕಳೆದ ಮೂರು ನಾಲ್ಕು ವರ್ಷಗಳಿಂದ ದುರ್ವರ್ತನೆ ತೋರುತ್ತಿದ್ದಾರೆ. ಮಾರಕಾಸ್ತ್ರಗಳನ್ನು ಪ್ರತಿಭಟನೆಗೆ ಕೊಂಡೊಯ್ಯಲಾಗುತ್ತಿದೆ. ಎಂಇಎಸ್ ಅಧ್ಯಕ್ಷರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಬಳಿಕ ಮಾಧ್ಯಮಗಳ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದ್ದರು.ಸರ್ಕಾರ ಅನುಮತಿಸದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್ ಪ್ರದರ್ಶಿಸುತ್ತಾ ಬಂದಿದೆ. ಇಂಥವರ ವಿರುದ್ಧ ಪೊಲೀಸರು ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದ್ದರು.

ಕರಾಳ ದಿನ ಆಚರಣೆ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಈ ಪಿಐಎಲ್ ಸಂಬಂಧ ಹೈಕೋರ್ಟ್ ಅಕ್ಟೋಬರ್ 30ರಂದು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಅದಾದ ನಂತರವೂ 2024ರ ನವಂಬರ್ 1ರಂದು ಮತ್ತೆ ಕರಾಳ ದಿನ ಆಚರಿಸಿ, ಮೆರವಣಿಗೆ ನಡೆಸಲಾಗಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಹಾಗೂ ಮರಾಠಿ ಪತ್ರಿಕೆಗಳ ವರದಿಗಳನ್ನೊಳಗೊಂಡ ಮೆಮೊ ಅನ್ನು ನವಂಬರ್ 5ರಂದು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಎಂದು ಪೀಠಕ್ಕೆ ವಿವರಿಸಿದರು.

ಇದನ್ನು ಓದಿರಿ : MAATRUTVA SURAKSHA ABHIYAAN : ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...