spot_img
spot_img

ಭಾರಿ ಮಳೆ : ಬೆಂಗಳೂರು ತತ್ತರ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗುತ್ತಿರುವುದು ಕಂಡು ಸರ್ಕಾರದ ಮಹತ್ವಾಕಾಂಕ್ಷೆಯ ಬ್ರ್ಯಾಂಡ್ ಬೆಂಗಳೂರು ಯೋಜನೆ ಹಿಡಿದು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳು ಹರಿಹಾಯುತ್ತಿವೆ. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ವಿಚಾರ ಹಿಡಿದು ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. ಅದೇ ರೀತಿ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರಮುಖವಾಕಿ ಐಟಿ ಕಾರಿಡಾರ್ ಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕಾಂಗ್ರೆಸ್ ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು.
ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ ಎಂದು ವ್ಯಂಗ್ಯವಾಡಿದೆ.
ಭ್ರಷ್ಟಾಚಾರ ಮಾಡುತ್ತಲೇ ಕಾಲ ಕಳೆಯುತ್ತಿರುವ ಕಾಂಗ್ರೆಸ್ ಸರ್ಕಾರ, ಒಂದೂ ಅಭಿವೃದ್ಧಿ ಮಾಡದ ಪರಿಣಾಮ ರಾಜಧಾನಿ ಬೆಂಗಳೂರು ಮುಳುಗಿ ಹೋಗಿದೆ.
ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಲೂಟಿ ಹೊಡೆದ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಸಿಎಂ ಕನಸಿನ ಕುರ್ಚಿಯ ಆಸೆ ಬಿಟ್ಟು ಜನತೆಯ ಸಂಕಷ್ಟಕ್ಕೆ ಇನ್ನಾದರೂ ಸ್ಪಂದಿಸಬೇಕು ಎಂದು ಹೇಳಿದರು.
ಹೆಚ್ಚು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕರು ಅದಕ್ಕೆ ತಕ್ಕಂತೆ ಯೋಜನೆ ರೂಪಿಸಬೇಕು.
ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬಿಬಿಎಂಪಿ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಅಕ್ಟೋಬರ್‌ನಲ್ಲಿ ಹೀಗೆ ಮಳೆ ಆಗಿರುವುದು ಆಶ್ಚರ್ಯಕರ. ಹೀಗಾಗಿ ಅಸ್ತವ್ಯಸ್ಥವಾಗಿದೆ. ನ್ಯೂಯಾರ್ಕ್, ಲಂಡನ್‌ನಲ್ಲಿ ಇಂತಹ ಮಳೆ ಬಂದಾಗಲೂ ಹೀಗೆ ಆಗುತ್ತದೆ. ಅದನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
ವಿಪಕ್ಷಗಳಿಗೆ ನೀತಿ ಪಾಠ ಹೇಳುವುದನ್ನು ಬಿಟ್ಟು ತಮ್ಮ ಕರ್ತವ್ಯ ನಿರ್ವಹಣೆ ಮಾಡಿ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಹಣ ಮಂಜೂರು ಮಾಡದೆ ಕೇವಲ ‘ಬ್ರಾಂಡ್ ಬೆಂಗಳೂರು’ ಪ್ರಚಾರ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...