spot_img
spot_img

HYDERABAD STUDENT SHOT DEAD : ವಾಷಿಂಗ್ಟನ್ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ವಾಶಿಂಗ್ಟನ್ ಡಿಸಿಯಲ್ಲಿ ಭಾರತೀಯ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.ಪೆಟ್ರೋಲ್ ಪಂಪ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, STUDENT ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ನಡೆದಿರುವ ಬಗ್ಗೆ ನಾರ್ತ್ ಅಮೆರಿಕನ್ ಅಸೋಸಿಯೇಷನ್ ಆಫ್ ಇಂಡಿಯನ್ ಸ್ಟೂಡೆಂಟ್ಸ್ (ಎನ್ಎಎಐಎಸ್) ದೃಢಪಡಿಸಿದೆ.ವಾಷಿಂಗ್ಟನ್ ಡಿಸಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹೈದರಾಬಾದ್ ಮೂಲದ 26 ವರ್ಷದ STUDENT ಮೃತಪಟ್ಟಿದ್ದಾನೆ. ಮೃತ STUDENTಯನ್ನು ರವಿತೇಜ ಎಂದು ಗುರುತಿಸಲಾಗಿದೆ.

ಘಟನೆಯ ಬಗೆಗಿನ ಹೆಚ್ಚಿನ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಘಟನಾ ಸ್ಥಳದ ಬಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದ್ವೇಷ ಅಪರಾಧ ಸೇರಿದಂತೆ ಎಲ್ಲಾ ಕೋನಗಳಿಂದ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಹೈದರಾಬಾದಿನ ಚೈತನ್ಯಪುರಿಯ ಗ್ರೀನ್ ಹಿಲ್ಸ್ ಕಾಲೋನಿ ನಿವಾಸಿಯಾಗಿರುವ ರವಿತೇಜ, ಬಿಸಿನೆಸ್ ಅಡ್ಮಿನಿಸ್ಟ್ರೇಷನ್​ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 2022ರ ಮಾರ್ಚ್​ನಲ್ಲಿ ಅಮೆರಿಕಕ್ಕೆ ತೆರಳಿದ್ದರು.

ಪ್ರಸ್ತುತ ಅಧ್ಯಯನವನ್ನು ಪೂರ್ಣಗೊಳಿಸಿದ್ದ ಅವರು ಅಮೆರಿಕದಲ್ಲಿ ನೌಕರಿಯ ಹುಡುಕಾಟದಲ್ಲಿದ್ದರು.ಈ ದುರಂತ ಘಟನೆಯಿಂದ ರವಿ ತೇಜ ಅವರ ಕುಟುಂಬ ತೀವ್ರ ಆಘಾತಕ್ಕೀಡಾಗಿದೆ. ರವಿತೇಜ ಅವರ ತಂದೆ ಕೆ. ಚಂದ್ರಮೌಳಿ ಅವರು ಸಂತೈಸಲಾಗದಷ್ಟು ದುಃಖಿತರಾಗಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಕುಟುಂಬವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ವಿನಂತಿಸಿದೆ.

Second incident in four months: ಸಾಯಿ ತೇಜ ನುಕಾರಪು (22) ಎಂಬ ಯುವಕನ ಮೇಲೆ ಚಿಕಾಗೋ ಬಳಿಯ ಗ್ಯಾಸ್ ಸ್ಟೇಷನ್ ನಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ನುಕಾರಾಪು ಭಾರತದಲ್ಲಿ ಬಿಬಿಎ ಮುಗಿಸಿ ಅಮೆರಿಕದಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಮೃತರು ನಾಲ್ಕು ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ತೆರಳಿದ್ದು, ಅರೆಕಾಲಿಕ ಕೆಲಸ ಮಾಡುತ್ತಿದ್ದರು.

ರವಿತೇಜ ಕಳೆದ ನಾಲ್ಕು ತಿಂಗಳಲ್ಲಿ ಅಮೆರಿಕದಲ್ಲಿ ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ತೆಲಂಗಾಣದ ಎರಡನೇ ಯುವಕನಾಗಿದ್ದಾರೆ. ಸೆಪ್ಟೆಂಬರ್ 29, 2024 ರಂದು, ತೆಲಂಗಾಣದ ಖಮ್ಮಮ್ ಜಿಲ್ಲೆಯ ಯುವಕನನ್ನು ಆತ ಕೆಲಸ ಮಾಡುತ್ತಿದ್ದ ಗ್ಯಾಸ್ ಸ್ಟೇಷನ್​ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ಇದನ್ನು ಓದಿರಿ : INDIA VS ENGLAND FIRST T20 : ಇಂಗ್ಲೆಂಡ್ ವಿರುದ್ಧ 13 ವರ್ಷದ ಹಳೆ ಸೇಡು ತೀರಿಸಿಕೊಳ್ಳಲು

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...