spot_img
spot_img

50 ಲಕ್ಷ ರೂ ಹಣ ನೀಡದಿದ್ದರೆ ದುಷ್ಪರಿಣಾಮ ಎದುರಿಸಬೇಕು : ಸಚಿವರಿಗೆ ಬೆದರಿಕೆ ಸಂದೇಶ

spot_img
spot_img

Share post:

ನವದೆಹಲಿ: ಮೂರು ದಿನದಲ್ಲಿ 50 ಲಕ್ಷ ರೂ ಹಣ ನೀಡದಿದ್ದರೆ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಸಂಜಯ್ ಸೇಠ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ.

50 ಲಕ್ಷ ಹಣ ನೀಡುವಂತೆ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್​ ಸೇಠ್​ ದೃಢಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡರು ತನಿಖೆಗೆ ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವರು, ಬೆದರಿಕೆ ಸಂದೇಶ ಕುರಿತು ನಿನ್ನೆ ಸಂಜೆಯೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಸಿಡಿಪಿ ಮತ್ತು ಇತರೆ ಹಿರಿಯ ಅಧಿಕಾರಿಗಳು ಈ ಕುರಿತು ತನಿಖೆಗೆ ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಸಚಿವಾಲಯ ಕೂಡ ಈ ಸಂಬಂಧ ಜಾರ್ಖಂಡ್​ ಡಿಜಿಪಿ ಅನುರಾಗ್​ ಗುಪ್ತಾ ಅವರಿಗೆ ಔಪಚಾರಿಕ ದೂರು ನೀಡಿದೆ. ಈ ಕುರಿತು ತಕ್ಷಣಕ್ಕೆ ಕ್ರಮ ಕೈಗೊಳ್ಳುವಂತೆ ಕೂಡ ತಿಳಿಸಲಾಗಿದೆ.

ಶನಿವಾರ ಸಂಜೆ ಸಚಿವರ ಮೊಬೈಲ್​ಗೆ ಈ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಬರುತ್ತಿದ್ದಂತೆ ಸೇಠ್​​ ಅವರು ಡಿಸಿಪಿ ಅವರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಹಾಗೇ ದೆಹಲಿ ನಿವಾಸದಲ್ಲಿ ಹಿರಿಯ ಪೊಲೀಸ್​ ಅಧಿಕಾರಿಗಳು ಕೂಡ ಅವರನ್ನು ಭೇಟಿಯಾಗಿ, ಈ ಕುರಿತು ಮಾಹಿತಿ ಪಡೆದಿದ್ದಾರೆ.

ಇದೇ ವೇಳೆ ಜಾರ್ಖಂಡ್​ ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ನನಗಿಂತ ಹೆಚ್ಚಾಗಿ ಮುಖ್ಯಮಂತ್ರಿಗಳು ಮತ್ತು ಡಿಜಿಪಿಗಳಿಗೆ ನಿರ್ದೇಶಿಸಬೇಕು. ಪ್ರತಿಯೊಬ್ಬರ ಸುರಕ್ಷತೆ ಜೊತೆಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮತ್ತು ಖಾತ್ರಿಪಡಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದರು.

ಮೂರು ದಿನದಲ್ಲಿ 50 ಲಕ್ಷ ರೂ ಹಣ ನೀಡಬೇಕು. ಹಣ ಪಾವತಿಸದೆ ಹೋದರೆ, ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಚಿವರಿಗೆ ದುಷ್ಕರ್ಮಿಗಳು ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಈ ಬೆದರಿಕೆ ಸಂದೇಶ ಕಳುಹಿಸಿರುವ ಮೊಬೈಲ್ ಸಂಖ್ಯೆಯು ಜಾರ್ಖಂಡ್​ನ ರಾಂಚಿಯಿಂದ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ನನ್ನ ಜವಾಬ್ದಾರಿಯಂತೆ ನಾನು ಘಟನೆ ಸಂಬಂಧ ದೂರು ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ನಾನು ನನ್ನ ಕೆಲಸದಲ್ಲಿ ಮಗ್ನನಾಗಿದ್ದು, ಸಾಮಾನ್ಯ ಜನರನ್ನು ಎಂದಿನಂತೆ ಭೇಟಿಯಾಗುತ್ತಿದ್ದೇನೆ. ಪೊಲೀಸರು ತಮ್ಮ ಕರ್ತವ್ಯವನ್ನು ಪರಿಣಾಕಾರಿಯಾಗಿ ಮಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...