spot_img
spot_img

3 ವರ್ಷದ ಹಿಂದೆ ಸಾವಾಗಿದ್ದ ವ್ಯಕ್ತಿಯ ಬಗ್ಗೆ ಮಹತ್ವದ ಅಪ್‌ಡೇಟ್‌ : ಏನ್‌ ವಿಷ್ಯಾ ಗೊತ್ತಾ..?

spot_img
spot_img

Share post:

ಧಾರವಾಡ: ಮೂರು ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರವಾಗಿ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಈಗ ತಿರುವು ಸಿಕ್ಕಿದೆ. ಮೃತ ಚಂದ್ರಶೇಖರನ ತಾಯಿ ಹಾಗೂ ಸಹೋದರರು ಪತ್ತೆಯಾಗಿದ್ದಾರೆ. ಮಾತ್ರವಲ್ಲದೇ ತನ್ನ ಪುತ್ರನು ಅನಾರೋಗ್ಯದಿಂದ ಸಾವಾಗಿಲ್ಲ. ಇದು ಮರ್ಡರ್ ಎಂದು ಶಂಕೆ ವ್ಯಕ್ತಪಡಿಸಿ, ಮೂವರ ಮೇಲೆ ಧಾರವಾಡ (Dharwad) ವಿದ್ಯಾಗಿರಿಯ ಪೋಲಿಸ್ ಠಾಣೆಯಲ್ಲಿ ಮೃತ ಚಂದ್ರಶೇಖರ್ ತಾಯಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದಲ್ಲಿ ನಟಿ ಸನ್ನಿ ಲಿಯೋನ್?

ಕಳೆದ ತಿಂಗಳು ಜುಲೈ 13 ಕ್ಕೆ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು, ಕಾಣೆಯಾದ ವ್ಯಕ್ತಿಯ ದೂರಿನ ತನಿಖೆಯ ಭಾಗವಾಗಿ ಧಾರವಾಡ ಮಾಳಮಡ್ಡಿಯಲ್ಲಿನ ಮನೆಯೊಂದರ ಬಾಗಿಲು ಮುರಿದು ನೋಡಿದ್ದರು. ಅಲ್ಲಿ ಆ ಮನೆ ಮಾಲೀಕ ಮಲಗಿದಲ್ಲಿಯೇ ಸತ್ತು ಅಸ್ಥಿಪಂಜರವಾಗಿದ್ದು ಪತ್ತೆಯಾಗಿತ್ತು. ಆ ವ್ಯಕ್ತಿ ಚಂದ್ರಶೇಖರ ಕೊಲ್ಲಾಪುರ ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ : ಸೋಡಾ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳೇನು ಗೊತ್ತೇ.?

ಮೃತನ ಪತ್ನಿಯ ಸೋದರಿಯ ಮಗ ರಾಣೇಬೆನ್ನೂರಿನ ಯಶವಂತ ಪಾಟೀಲ ಎಂಬಾತನೇ ಈ ಚಂದ್ರಶೇಖರ್ ಕಾಣೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದ. ಕೋವಿಡ್ ಅವಧಿಯಲ್ಲಿ 3‌ ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಆತ ಹೇಳಿಕೊಂಡಿದ್ದ. ತನ್ನ ಕಾಕನಿಗೆ ತಾನು ಬಿಟ್ಟರೆ ಬೇರೆ ಯಾರೂ ಸಂಭಂಧಿಕರೇ ಇಲ್ಲ ಎಂದು ಹೇಳಿ ಎಲ್ಲ ಅಂತ್ಯಕ್ರಿಯೆಗಳನ್ನು ಪೂರ್ಣಗೊಳಿಸಿದ್ದ.

ಇದನ್ನೂ ಓದಿ : ಚಿಕ್ಕೋಡಿ : ಕೋಮುವಾದವೇ ತುಂಬಿರುವ ಸಮಾಜದಲ್ಲಿ ಮುಸ್ಲಿಂ ಬಾಂಧವರು ಮಾಡಿದ ಈ ಕಾರ್ಯ ಶ್ಲಾಘನಿಯ..!

ಮೃತನ ತಾಯಿ ಮಲ್ಲವ್ವ ಕೊಟ್ಟಿರುವ ದೂರಿನಲ್ಲಿ 3ರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಅದರಲ್ಲಿ ಈ ಹಿಂದೆ ತನ್ನ ಚಿಕ್ಕಪ್ಪ ಕಾಣೆಯಾಗಿದ್ದಾನೆಂದು ದೂರು ದಾಖಲಿಸಿದ್ದ ಯಶವಂತ ಪಾಟೀಲ, ಸೇರಿದಂತೆ ಅಸ್ಥಿಪಂಜರ ಸಿಕ್ಕ ಮನೆಯ ಪಕ್ಕದಲ್ಲಿಯೇ ಅದೇ ಆಸ್ಥಿಗೆ ಸಂಬಂಧಿಸಿ ಹಲವಾರು ವರ್ಷಗಳಿಂದ ಮನೆಯಲ್ಲಿ ಭೋಗ್ಯದಲ್ಲಿರೋ ಶಹಾಬುದ್ದೀನ್ ಬಳ್ಳಾರಿ ಹಾಗೂ ಮೃತನ ಪತ್ನಿಯ ಇನ್ನೋರ್ವ ಸೋದರಿ ಸಾಂಗ್ಲಿಯ ವಿನೋದಾ ಉತ್ತಪ್ಪನ್ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :Sandalwood Queen ರಮ್ಯಾ ಮದುವೆ ಫಿಕ್ಸ್.? ಹುಡುಗ ಯಾರು ಗೊತ್ತಾ.?

ಚಂದ್ರಶೇಖರ ಕುಟಂಬ ಧಾರವಾಡ ತಾಲ್ಲೂಕಿನ ಕವಲಗೇರಿ ಗ್ರಾಮದಲ್ಲಿದ್ದು, ಚಂದ್ರಶೇಖರ ಸೆಕ್ಯೂರಿಟಿ ಕೆಲಸಕ್ಕೆ ಅಂತಾ ಬಂದು ಧಾರವಾಡದಲ್ಲಿದ್ದರು. ಮಾಳಮಡ್ಡಿಯ ಸುರೇಖಾಳನ್ನು ಮದುವೆಯಾಗಿದ್ದ. 2015ರಲ್ಲಿ ಸುರೇಖಾ ಮೃತಪಟ್ಟ ಬಳಿಕ, ಹೆಂಡತಿಯ ಹೆಸರಿನಲ್ಲಿದ್ದ ಮನೆ ಮತ್ತು ಜಾಗವೆಲ್ಲ ಚಂದ್ರಶೇಖರ ಹೆಸರಿಗೆ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪತ್ನಿಯ ಸೋದರಿಯ ಮಗನಾದ ಯಶವಂತ ಮತ್ತು ಇನ್ನೋರ್ವ ಸೋದರಿ ವಿನೋದಾ ಆಗಾಗ ಬಂದು ಜಗಳ ತೆಗೆಯುತ್ತಿದ್ದರಂತೆ. ಇದಕ್ಕೆ ಈ ಮನೆಯ ಪಕ್ಕದಲ್ಲಿಯೇ ಇರೋ ಇನ್ನೊಂದು ಮನೆಯಲ್ಲಿ ಲೀಜ್‌ನಲ್ಲಿರುವ ಶಹಾಬುದ್ಧೀನ ಸಹ ಸಾಥ್ ನೀಡಿದ್ದಾನೆ. ಇವರ ವಿರುದ್ದ ಚಂದ್ರಶೇಖರ 2021ರ ಮಾರ್ಚ್‌ನಲ್ಲಿ ವಿದ್ಯಾಗಿರಿ ಠಾಣೆಗೆ ದೂರು ಸಹ ದಾಖಲಿಸಿದ್ದ.

ಇದನ್ನೂ ಓದಿ : ಬೆಳಗಾವಿ : ಹುಡುಗಿಯರೇ ಹುಷಾರ್‌! ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣ ಕೀಳುತ್ತಾರೆ ಈ ಖದೀಮರು

ಇದಾದ ಬಳಿಕವೇ ಚಂಧ್ರಶೇಖರ ತಾಯಿ ಮತ್ತು ಸೋದರರ ಭೇಟಿಗೂ ಬಾರದೇ ಕಾಣೆಯಾಗಿದ್ದನ್ನು. ಆತ ಊರುರು ತಿರುಗುವ ಖಯಾಲಿ ಇರೋದಕ್ಕೆ ಎಲ್ಲಿಗೋ ಹೋಗಿರಬಹುದು ಎಂದು ಸುಮ್ಮನಿದ್ದರಂತೆ. ಆದರೆ ಈಗ ಆತ ಸತ್ತು ಹೋಗಿರೋದು ಗೊತ್ತಾಗಿ, ಕಾನೂನು ಹೋರಾಟ ಆರಂಭಿಸುತ್ತಿದ್ದಾರೆ.

ಇದನ್ನೂ ಓದಿ : ಅಥಣಿ : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್‌; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ

ಚಂದ್ರಶೇಖರ ಮನೆಯಲ್ಲಿಯೇ ಸಾವಾಗಿದ್ದರೇ, ಮೃತದೇಹ ಕೊಳೆತಾಗ ವಾಸನೆಯೇ ಬರಲಿಲ್ಲವಾ? ಅನ್ನೋದು ಆಸ್ಥಿಪಂಜರ ಸಿಕ್ಕಾಗಿನಿಂದಲೂ ಪೊಲೀಸರಿಗೂ ಕಾಡುತ್ತಿದ್ದಪ್ರಶ್ನೆಯಾಗಿತ್ತು. ಈಗ ಆತನ ತಾಯಿ ಮತ್ತು ಸೋದರರು ಇರೋದು ಸಹ ದೃಢಪಟ್ಟಿದ್ದು, ಈಗ ಕೊಲೆಯ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಾರಾ ಎನ್ನುವುದನ್ನು ನೋಡಬೇಕಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...