spot_img
spot_img

INDIA BANGLADESH RELATIONS : ಬಾಂಗ್ಲಾದೇಶಕ್ಕೆ ಮತ್ತೆ 16,000 ಟನ್ ಅಕ್ಕಿ ಕಳುಹಿಸಿಕೊಟ್ಟ ಭಾರತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Dhaka (Bangladesh) News:

INDIA BANGLADESH RELATIONS ಎರಡು ಹಡಗುಗಳ ಮೂಲಕ 16,400 ಟನ್ ಅಕ್ಕಿ ಕಳುಹಿಸಿಕೊಟ್ಟಿದೆ. “ಎರಡು ಬೃಹತ್ ಗಾತ್ರದ ಹಡಗುಗಳು 16,400 ಟನ್‌ ಅಕ್ಕಿ ಹೊತ್ತು ಇಲ್ಲಿನ ಬಂದರು ತಲುಪಿವೆ” ಎಂದು ಢಾಕಾ ಟ್ರಿಬ್ಯೂನ್ ದಿನಪತ್ರಿಕೆ ವರದಿ ಮಾಡಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಶೇಖ್‌ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದ ನಂತರ ಉಭಯ ದೇಶಗಳ ನಡುವೆ ಸಂಬಂಧ ಹದಗೆಟ್ಟಿದ್ದು, ಈ ನಡುವೆಯೂ INDIA BANGLADESH RELATIONS ಎರಡನೇ ಬಾರಿಗೆ ಇದೀಗ ಸಾವಿರಾರು ಟನ್‌ ಅಕ್ಕಿ ಕಳುಹಿಸಿಕೊಟ್ಟಿದೆ. ಅಪಾರ ಪ್ರಮಾಣದ ಅಕ್ಕಿ ಹೊತ್ತ ಎರಡು ಹಡಗುಗಳು ಶನಿವಾರ ಬಾಂಗ್ಲಾದ ಮೊಂಗ್ಲಾ ಬಂದರು ತಲುಪಿದವು.

ಮುಕ್ತ ಟೆಂಡರ್‌ ಆಮದಿನ ಪೈಕಿ ಮೊದಲ ಸಾಗಣೆಯನ್ನು ಜನವರಿ 20ರಂದು ಬಾಂಗ್ಲಾದೇಶಕ್ಕೆ ರವಾನಿಸಲಾಗಿತ್ತು. ವಿಯೆಟ್ನಾಂ ಧ್ವಜ ಹೊಂದಿದ ಎಂವಿ ಪುಥಾನ್-36 ಹಡಗು 5,700 ಟನ್ ಅಕ್ಕಿ ಸಾಗಿಸಿದೆ ಎಂದು ವರದಿ ಹೇಳಿದೆ.ಒಪ್ಪಂದದ ಪ್ರಕಾರ, ಬಾಂಗ್ಲಾದೇಶ ಭಾರತದಿಂದ 300,000 ಟನ್‌ ಅಕ್ಕಿ ಪಡೆಯಲಿದೆ. ಮೊಂಗ್ಲಾ ಆಹಾರ ನಿಯಂತ್ರಕರ ಕಚೇರಿ ನೀಡಿದ ಮಾಹಿತಿಯಂತೆ, ಈ ಪೈಕಿ ಶೇ.40ರಷ್ಟು ಅಕ್ಕಿಯನ್ನು ಮೊಂಗ್ಲಾ ಬಂದರಿನಲ್ಲಿ ಇಳಿಸಲಾಗುತ್ತದೆ.

INDIA BANGLADESH RELATIONS ಪನಾಮಾ ಧ್ವಜ ಹೊಂದಿರುವ ಬಿಎಂಸಿ ಆಲ್ಫಾ ಹಡಗು ಒಡಿಶಾದ ಧರ್ಮಾ ಬಂದರಿನಿಂದ 7,700 ಟನ್ ಅಕ್ಕಿ ಹೊತ್ತು ಬಂದರೆ, ಥಾಯ್ಲೆಂಡ್‌ ಧ್ವಜ ಹೊಂದಿದ ಎಂವಿ ಸೀ ಫಾರೆಸ್ಟ್ ಹಡಗು ಕೊಲ್ಕತ್ತಾ ಬಂದರಿನಿಂದ 8,700 ಟನ್‌ ಅಕ್ಕಿ ಸಾಗಿಸಿತು. ಕೆಲ ದಿನಗಳ ಹಿಂದೆ, ಗಡಿ ಭದ್ರತಾ ಪಡೆಯ ಡೆರೆಕ್ಟರ್‌ ಜನರಲ್ ಮಟ್ಟದ ಅಧಿಕಾರಿಗಳ ಸಭೆಯಲ್ಲಿ, ಗಡಿ ಭದ್ರತೆಯ ವಿಚಾರವಾಗಿ ಉಭಯ ದೇಶಗಳ ನಡುವೆ ಇರುವ ಕೆಲವು “ಅಸಮ” ಒಪ್ಪಂದಗಳನ್ನು ರದ್ದುಗೊಳಿಸಲು ತಾನು ಬಯಸುತ್ತಿರುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾರತಕ್ಕೆ ತಿಳಿಸಿತ್ತು.

ಬಾಂಗ್ಲಾದಲ್ಲಿ ದೇಶವ್ಯಾಪಿ ನಡೆದ ಭಾರೀ ಹಿಂಸಾತ್ಮಕ ಪ್ರತಿಭಟನೆಗಳು ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಉರುಳಿಸಿದ್ದವು. INDIA BANGLADESH RELATIONS ಇದರೊಂದಿಗೆ 16 ವರ್ಷಗಳ ಆಡಳಿತವೂ ಅಂತ್ಯಗೊಂಡಿತ್ತು. ಹಾಗಾಗಿ, ಕಳೆದ ಆಗಸ್ಟ್‌ 5ರಿಂದ 77 ವರ್ಷದ ಶೇಖ್ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಇನ್ನು, 2024ರ ಆಗಸ್ಟ್‌ನಲ್ಲಿ ಪ್ರಧಾನಿ ಶೇಕ್ ಹಸೀನಾ ದೇಶದಿಂದ ಪಲಾಯನಗೈದ ಬಳಿಕ ನೊಬೆಲ್‌ ಪ್ರಶಸ್ತಿ ಪುರಸ್ಕೃತ 84 ವರ್ಷದ ಮುಹಮ್ಮದ್ ಯೂನಸ್, ಬಾಂಗ್ಲಾದೇಶದ ಸರ್ಕಾರದ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡಿದ್ದರು.

“ಮಾನವತೆಯ ವಿರುದ್ಧದ ಅಪರಾಧ, ನರಹತ್ಯೆ”ಗಳ ಆರೋಪ ಹೊರಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್‌, ಶೇಕ್ ಹಸೀನಾ ಹಾಗೂ ಅವರ ಸರ್ಕಾರದ ಕೆಲವು ಸಂಪುಟ ಸಚಿವರು, ಸಲಹೆಗಾರರು ಮತ್ತು ಸೇನೆ ಮತ್ತು ನಾಗರಿಕ ಸೇವೆಗಳ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಢಾಕಾ, ನವದೆಹಲಿಗೆ ರಾಜತಾಂತ್ರಿಕ ಚಿಪ್ಪಣಿ ಕಳುಹಿಸಿ, ಹಸೀನಾರ ಗಡಿಪಾರಿಗೆ ಆಗ್ರಹಿಸಿತ್ತು.

ಇದನ್ನು ಓದಿರಿ : MANGALURU DELHI FLIGHT : ಮಂಗಳೂರು-ದೆಹಲಿ ನಡುವೆ ಪ್ರತಿದಿನ ನೇರ ವಿಮಾನಯಾನ ಸೇವೆ ಆರಂಭಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...