spot_img
spot_img

INDIA ಕೂಟದ ನಾಯಕತ್ವ : ಟಿಎಂಸಿ – ಕಾಂಗ್ರೆಸ್​ ಜಟಾಪಟಿ

spot_img
spot_img

Share post:

ನವದೆಹಲಿ: ವಿಪಕ್ಷಗಳ I.N.D.I.A ಕೂಟದಲ್ಲಿ ಅಸಮಾಧಾನದ ಬುಗ್ಗೆ ಮತ್ತೆ ಹೊಗೆಯಾಡುತ್ತಿದೆ. ಕೂಟದ ನಾಯಕತ್ವದ ವಿಚಾರವಾಗಿ ಟಿಎಂಸಿ, ಕಾಂಗ್ರೆಸ್​ ಮಧ್ಯೆ ಜಟಾಪಟಿ ಶುರುವಾಗಿದೆ.
ವಿಪಕ್ಷಗಳ I.N.D.I.A ಕೂಟದಲ್ಲಿ ಮತ್ತೆ ಅಪಸ್ವರ ಕೇಳಿಬಂದಿದೆ. ಕಾಂಗ್ರೆಸ್​​ ನೇತೃತ್ವದಲ್ಲಿ ನಿರೀಕ್ಷಿತ ಯಶಸ್ಸು ಸಿಗದ ಕಾರಣ, ಮೈತ್ರಿಕೂಟದ ನಾಯಕತ್ವವನ್ನು ತಾನು ವಹಿಸಿಕೊಳ್ಳುವುದಾಗಿ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಇದಕ್ಕೆ ಮಿತ್ರಪಕ್ಷಗಳು ಮಿಶ್ರ ಬೆಂಬಲ ವ್ಯಕ್ತಪಡಿಸಿವೆ.
ಇಂಡಿಯಾ ಕೂಟವನ್ನು ರಚಿಸಿದ್ದು ನಾನೇ. ಅದನ್ನು ಸರಿಯಾದ ದಿಸೆಯಲ್ಲಿ ನಡೆಸಿಕೊಂಡು ಹೋಗಬೇಕಾದುದು ನೇತೃತ್ವ ವಹಿಸಿದವರ ಜವಾಬ್ದಾರಿ. ಮಿತ್ರಪಕ್ಷಗಳು ಬಯಸಿದಲ್ಲಿ ನಾನೇ ಕೂಟದ ಮುಂದಾಳತ್ವ ವಹಿಸಿಕೊಳ್ಳುವೆ ಎಂದು ಮಮತಾ ಬ್ಯಾನರ್ಜಿ ಅವರು ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಯ ಫಲಿತಾಂಶದ ಆಧಾರದ ಮೇಲೆ ವಿಪಕ್ಷಗಳ ಕೂಟದ ನಾಯಕತ್ವವನ್ನು ತಾನು ವಹಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವ ಮಮತಾಗೆ ಕಾಂಗ್ರೆಸ್​​ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಮಮತಾ ಬ್ಯಾನರ್ಜಿ ಅವರು ರಾಷ್ಟ್ರೀಯ ಮಟ್ಟದಲ್ಲಿ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ. ಬಂಗಾಳದಲ್ಲಿ ಸತತ 3 ಬಾರಿ ಅಧಿಕಾರ ವಹಿಸಿಕೊಂಡರೂ ತಮ್ಮ ಪಕ್ಷವನ್ನು ಬೇರೆ ರಾಜ್ಯಗಳಲ್ಲಿ ವಿಸ್ತರಿಸಲು ಸಾಧ್ಯವಾಗಿಲ್ಲ. ಹೀಗಿದ್ದಾಗ, ರಾಷ್ಟ್ರೀಯ ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುವ ಸಾಮರ್ಥ್ಯ ಅವರಿಗೆ ಇದೆಯೇ ಎಂದು ಕಾಂಗ್ರೆಸ್ ನಾಯಕರು ಕೇಳಿದ್ದಾರೆ.
ಕೂಟದಲ್ಲಿ ಕೆಲ ಮಿತ್ರಪಕ್ಷಗಳಲ್ಲಿ ಅಸಮಾಧಾನ ಇದೆ. ಅದನ್ನು ಹೊಣೆಗಾರಿಕೆ ಹೊತ್ತವರು ನಿಭಾಯಿಸಬೇಕು. ನಾನು ಬಂಗಾಳವನ್ನು ಬಿಡಲ್ಲ. ಕೂಟದ ನಾಯಕತ್ವ ನೀಡಿದಲ್ಲಿ ಇಲ್ಲಿಂದಲೇ ನಾನು ಅದನ್ನು ನಡೆಸಬಲ್ಲೆ. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಉತ್ತಮ ಸಾಧನೆ ಮಾಡಲು ಎಡವಿದ ಕಾಂಗ್ರೆಸ್​ನ ಸಾಮರ್ಥ್ಯವನ್ನೂ ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.
ವಿಪಕ್ಷ ಕೂಟದಲ್ಲಿರುವ ಸಮಾಜವಾದಿ ಪಕ್ಷ ಮತ್ತು ಶಿವಸೇನೆ (ಉದ್ಧವ್ ಬಣ) ಮಮತಾ ಹೇಳಿಕೆಯನ್ನು ಸಮರ್ಥಿಸಿವೆ. ಮಮತಾ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲು ಮೈತ್ರಿಕೂಟ ಸಂಪೂರ್ಣ ಬೆಂಬಲಿಸುವುದಾಗಿ ಹೇಳಿವೆ. ಬಂಗಾಳದಲ್ಲಿ ಬಿಜೆಪಿ ವಿರುದ್ಧ ದೀದಿ ಏಕಾಂಗಿಯಾಗಿ, ಸಮರ್ಥವಾಗಿ ಎದುರಿಸುತ್ತಿದ್ದಾರೆ ಎಂದು ಎಸ್‌ಪಿ ನಾಯಕರು ಹೊಗಳಿದ್ದಾರೆ.
ಮೈತ್ರಿಕೂಟವನ್ನು ಮುನ್ನಡೆಸಲು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಸೂಕ್ತ ನಾಯಕ ಎಂದು ಆರ್​​ಜೆಡಿ ಅಭಿಪ್ರಾಯಪಟ್ಟಿದ್ದರೆ, ಹರಿಯಾಣ ಮತ್ತು ಮಹಾರಾಷ್ಟ್ರ ಫಲಿತಾಂಶಗಳ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ. ವಿಪಕ್ಷಗಳ ಕೂಟದಲ್ಲಿ ಎಲ್ಲ ಮಿತ್ರಪಕ್ಷಗಳಿಗೆ ಸರಿಯಾದ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದಿದ್ದಾರೆ.
ಇಂಡಿಯಾ ಕೂಟದ ಆಂತರಿಕ ಬೇಗುದಿಯನ್ನು ಅಣಕವಾಡಿರುವ ಬಿಜೆಪಿ ಅಧಿಕಾರ ದಾಹ ಮತ್ತು ಭ್ರಷ್ಟರನ್ನು ರಕ್ಷಿಸುವುದೇ ಅದರ ಮುಖ್ಯ ಉದ್ದೇಶ ಎಂದು ಆರೋಪಿಸಿದೆ. ಪ್ರಧಾನಿ ಮೋದಿ ಅವರನ್ನು ಸೋಲಿಸುವುದನ್ನು ಹೊರತುಪಡಿಸಿ ಯಾವುದೇ ಅಜೆಂಡಾ ಇಲ್ಲದ ಗುಂಪು ಎಂದು ವ್ಯಂಗ್ಯವಾಡಿದೆ.
ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಯಲ್ಲಿ ಪ್ರಮುಖ ಪಾಲುದಾರರಾಗಲು ಬಯಸಿದ್ದಾರೆ. ಸದ್ಯದಲ್ಲೇ ಮಿತ್ರಪಕ್ಷಗಳೊಂದಿಗೆ ಕೋಲ್ಕತ್ತಾಗೆ ತೆರಳಿ ದೀದಿಯನ್ನು ಭೇಟಿಯಾಗಲಿದ್ದೇವೆ. ಮೈತ್ರಿಕೂಟದ ಸಭೆ ನಡೆಯುವಾಗ ನಾಯಕತ್ವದ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಉದ್ಧವ್ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...