spot_img
spot_img

ಭಾರತೀಯರಿದ್ದ ಬಸ್ ಮೇಲೆ ದಾಳಿ, ನಿಂದನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಗರ್ತಲಾ(ತ್ರಿಪುರಾ): ಬಾಂಗ್ಲಾದೇಶದಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ದಾಳಿ ನಡೆಸಲಾಗಿದೆ.
ಅಗರ್ತಲಾದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಮೇಲೆ ಬಾಂಗ್ಲಾದೇಶದಲ್ಲಿ ದಾಳಿ ನಡೆದಿದೆ ಎಂದು ತ್ರಿಪುರಾದ ಸಾರಿಗೆ ಸಚಿವ ಸುಶಾಂತ ಚೌಧರಿ ಆರೋಪಿಸಿದ್ದಾರೆ. ಬಾಂಗ್ಲಾದೇಶದ ಬ್ರಹ್ಮನ್ ಬಾರಿಯಾ ಜಿಲ್ಲೆಯ ಬಿಶ್ವಾ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ತ್ರಿಪುರಾದಿಂದ ಕೋಲ್ಕತಾಗೆ ತೆರಳುತ್ತಿದ್ದ ಸಹ್ಯಮೋಲಿ ಪರಿಬಹನ್ ಬಸ್ ಮೇಲೆ ಬಾಂಗ್ಲಾದೇಶದ ಬ್ರಹ್ಮನ್ ಬಾರಿಯಾ ಬಿಶ್ವಾ ರಸ್ತೆಯಲ್ಲಿ ದಾಳಿ ಮಾಡಲಾಗಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ ಭಾರತೀಯ ಪ್ರಯಾಣಿಕರು ಭಯಭೀತರಾಗಿದ್ದರು. ಈ ಘಟನೆಯ ನಂತರ ಸ್ಥಳೀಯರು ಜಮಾಯಿಸಿ ಬಸ್​ನಲ್ಲಿದ್ದ ಭಾರತೀಯ ಪ್ರಯಾಣಿಕರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು. ಭಾರತ ವಿರೋಧಿ ಘೋಷಣೆಗಳನ್ನು ಕೂಗಿ, ಭಾರತೀಯ ಪ್ರಯಾಣಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮತ್ತು ಅವರಿಗೆ ಜೀವ ಬೆದರಿಕೆ ಹಾಕಿದರು. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಭಾರತೀಯ ಪ್ರಯಾಣಿಕರ ಸುರಕ್ಷತೆಗಾಗಿ ಕ್ರಮಕೈಗೊಳ್ಳುವಂತೆ ನೆರೆಯ ಬಾಂಗ್ಲಾದೇಶ ಸರ್ಕಾರಕ್ಕೆ ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು. ಬಸ್ ತನ್ನ ಲೇನ್ ನಲ್ಲಿಯೇ ಇದ್ದರೂ ಉದ್ದೇಶಪೂರ್ವಕವಾಗಿ ಟ್ರಕ್​ವೊಂದು ಡಿಕ್ಕಿ ಹೊಡೆದಿದೆ. ಈ ಸಮಯದಲ್ಲಿ ಬಸ್ ಮುಂದೆ ಚಲಿಸುತ್ತಿದ್ದ ಆಟೋರಿಕ್ಷಾಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಚೌಧರಿ ಶನಿವಾರ ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.
ಅರ್ಧದಷ್ಟು ದೂರ ಕಡಿಮೆಯಾಗುವುದರಿಂದ ಕೊಲ್ಕತ್ತಾ ಮತ್ತು ಅಗರ್ತಲಾ ನಡುವೆ ಚಲಿಸುವ ಬಸ್ಸುಗಳು ಢಾಕಾ ಮೂಲಕ ಸಂಚರಿಸುತ್ತವೆ. ಇದು ವಿಮಾನದಲ್ಲಿ ಪ್ರಯಾಣಿಸುವುದಕ್ಕಿಂತ ಅಗ್ಗವಾಗಿದೆ. ಕೊಲ್ಕತ್ತಾ ಮತ್ತು ಅಗರ್ತಲಾ ನಡುವೆ ಅಸ್ಸಾಂ ಮೂಲಕ ರೈಲಿನಲ್ಲಿ ಪ್ರಯಾಣಿಸಿದರೆ 30 ಗಂಟೆಗಳಿಗಿಂತ ಹೆಚ್ಚು ಸಮಯ ಬೇಕಾಗುತ್ತದೆ. ಆದರೆ ಢಾಕಾ ಮೂಲಕ ಬಸ್​ ಪ್ರಯಾಣದ ಅವಧಿ ಇದಕ್ಕೂ ಕಡಿಮೆಯಾಗಿದೆ.
ಅಗರ್ತಲಾದಿಂದ ಕೋಲ್ಕತಾಗೆ ತೆರಳುತ್ತಿದ್ದ ಬಸ್ ಮೇಲೆ ಬ್ರಹ್ಮನ್ಬಾರಿಯಾದ ಬಿಶ್ವಾ ರಸ್ತೆಯಲ್ಲಿ ಶನಿವಾರ ದಾಳಿ ನಡೆದ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ನಾನು ಈ ವಿಷಯದ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ತಮಗೆ ಈ ದಾಳಿಯ ಬಗ್ಗೆ ಮಾಹಿತಿ ಬಂದಿದ್ದು ಹೆಚ್ಚಿನ ವಿವರಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.
ನೆರೆಯ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಹಾ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವುದು ಈಗ ಇಡೀ ಜಗತ್ತಿಗೆ ಗೊತ್ತಾಗಿದೆ ಎಂದರು.
“ನಮ್ಮ ರಾಜ್ಯವು ಮೂರು ಬದಿಗಳಲ್ಲಿ ಬಾಂಗ್ಲಾದೇಶದಿಂದ ಸುತ್ತುವರೆದಿರುವುದರಿಂದ, ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಕಟ್ಟುನಿಟ್ಟಾದ ನಿಗಾ ವಹಿಸುವಂತೆ ಬಿಎಸ್ಎಫ್ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ” ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...