spot_img
spot_img

INDIAN NATIONAL ANTHEM IN PAKISTAN:ಭಾರತ ತಂಡ ದುಬೈನಲ್ಲಿದ್ದರೂ ಪಾಕ್ ಮೈದಾನದಲ್ಲಿ ಮೊಳಗಿದ ರಾಷ್ಟ್ರಗೀತೆ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Indian National Anthem in Pakistan News :

ಈ ಪಂದ್ಯದಲ್ಲಿ ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಿದ್ದು, PAKISTANದ ಗಡಾಫಿ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಐಸಿಸಿ ನಿಯಮದಂತೆ ಪಂದ್ಯ ಪ್ರಾರಂಭಕ್ಕೂ ಮೊದಲು ಉಭಯ ತಂಡಗಳ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಲಾಗುತ್ತದೆ.

ಐಸಿಸಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಿ ಇಂದಿಗೆ 4 ದಿನಗಳಾಗಿದೆ. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯಗೊಂಡಿದ್ದು, ಇಂದು ಟೂರ್ನಿಯ ನಾಲ್ಕನೇ ಪಂದ್ಯ ನಡೆಯುತ್ತಿದೆ.ಆದರೆ ಪಿಸಿಬಿ ಎಡವಟ್ಟು ಮಾಡಿದ್ದರಿಂದ ಲಾಹೋರ್​ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದೆ. ಹೌದು, ಆಸ್ಟ್ರೇಲಿಯಾದ ರಾಷ್ಟ್ರಗೀತೆ ಪ್ರಸಾರ ಮಾಡುವ ಬದಲು ಭಾರತದ ರಾಷ್ಟ್ರಗೀತೆ ಪ್ರಸಾರವಾಗಿದೆ. ಎರಡು ಸೆಕೆಂಡ್​ಗಳ ಕಾಲ ಪ್ಲೇ ಮಾಡಲಾಗಿದೆ. ‘ಭಾರತ ಭಾಗ್ಯವಿದಾತ’ ಎಂದು ಕೇಳಿಸಿದೆ. ಇದರ ಬೆನ್ನಲ್ಲೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು ನೆಟ್ಟಿಗರು ಕಾಮೆಂಟ್​ ಮಾಡುತ್ತಿದ್ದಾರೆ.

ಚಾಂಪಿಯನ್ಸ್​ ಟ್ರೋಫಿ ಭಾಗವಾಗಿ ಇಂದು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ ತಂಡಗಳ ನಡುವೆ ಗಡಾಫಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದ ನಡುವೆ ಪಿಸಿಬಿ ಮಹಾ ಎಡವಟ್ಟು ಮಾಡಿದೆ.

ಕೆಲವರು ಇದು PAKISTAN ವಿರುದ್ಧ ನಡೆಯಲಿರುವ ಭಾರತ ಪಂದ್ಯ ಗೆಲುವಿನ ಸಂಕೇತವಾಗಿದೆ ಎಂದಿದ್ದಾರೆ. ಮತ್ತೆ ಕೆಲವರು ನಾಳೆಯ ಪಂದ್ಯ ದುಬೈನಲ್ಲಿ ನಡೆಯುತ್ತಿದೆ ಎಂದು ಕಾಲೆಳೆದಿದ್ದಾರೆ. ಪಾಕಿಸ್ತಾನ ಭಾರತೀಯರನ್ನು ರಂಜಿಸುವುದರಲ್ಲಿ ಸದಾ ಮುಂದಿರುತ್ತದೆ ಎಂದು ನೆಟ್ಟಿಗರು ಕಾಮೆಂಟ್​ಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ಭಾರತ ದುಬೈನಲ್ಲಿದ್ದರು ಪಾಕ್​ನಲ್ಲಿ ರಾಷ್ಟ್ರಗೀತೆ ಮೊಳಗುತ್ತಿದೆ. ಇದು ಭಾರತದ ಗತ್ತು ಎಂದಿದ್ದಾರೆ.

Flag Controversy:ಆದರೆ ಪಾಕ್​ ಭಾರತದ ಧ್ವಜ ಹೊರತುಪಡಿಸಿ ಉಳಿದ ತಂಡಗಳ ರಾಷ್ಟ್ರೀಯ ಧ್ವಜ ಪ್ರದರ್ಶನ ಮಾಡಿತ್ತು. ಇದರ ಬೆನ್ನಲ್ಲೇ ಟೀಕೆಗಳು ಕೇಳಿಬಂದ ನಂತರ ಎಚ್ಚೆತ್ತುಕೊಂಡ ಪಾಕ್​ ಪಂದ್ಯಾವಳಿ ಆರಂಭಕ್ಕೂ ಮೊದಲು ಭಾರತದ ಧ್ವಜವನ್ನು ಪ್ರದರ್ಶನ ಮಾಡಿತು.ಇದಕ್ಕೂ ಮುನ್ನ, ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ PAKISTANದ ಮೈದಾನಗಳಲ್ಲಿ ಭಾರತದ ಧ್ವಜವನ್ನು ಹಾರಿಸದೆ ಟೀಕೆಗೆ ಗುರಿಯಾಗಿತ್ತು. ಸಮಾನ್ಯವಾಗಿ ಐಸಿಸಿ ಆಯೋಜಿತ ಟೂರ್ನಿಗಳನ್ನು ಹೋಸ್ಟ್​ ಮಾಡುವ ರಾಷ್ಟ್ರವು, ಪಂದ್ಯಗಳು ನಡೆಯುವ ಎಲ್ಲಾ ಮೈದಾನಗಳಲ್ಲಿ ಟೂರ್ನಿಯಲ್ಲಿ ಭಾಗಿಯಾಗುವ ತಂಡಗಳ ರಾಷ್ಟ್ರಧ್ವಜವನ್ನು ಪ್ರದರ್ಶಿಸಬೇಕು.

Tomorrow India-Pakistan Fight:ಈ ಹೈವೊಲ್ಟೇಜ್​ ಪಂದ್ಯಕ್ಕೆ ದುಬೈ ಮೈದಾನ ಆತಿಥ್ಯ ವಹಿಸಿಕೊಂಡಿದೆ.ಏತನ್ಮಧ್ಯೆ, ಟೂರ್ನಿಯ ಭಾಗವಾಗಿ ಭಾನುವಾರ (ಫೆ.23) ಭಾರತ ಮತ್ತು PAKISTAN ತಂಡಗಳು ಮುಖಾಮುಖಿ ಆಗಲಿವೆ.

Possible Teams – India : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ.

Pakistan: ಬಾಬರ್ ಅಜಮ್, ಸೌದ್ ಶಕೀಲ್, ಇಮಾಮ್ ಉಲ್ ಹಕ್, ಖುಶ್ದಿಲ್ ಶಾ, ತಯ್ಯಬ್ ತಾಹಿರ್, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಲಿ ಆಘಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್, ಶಾಹೀನ್ ಅಫ್ರಿದಿ, ನಸೀಮ್ ಶಾ.

 

ಇದನ್ನು ಓದಿರಿ :India vs Pakistan Champions Trophy: Former Pakistan captain Shahid Afridi spoke about the gulf between the two teams,

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...