spot_img
spot_img

INVEST KARNATAKA 2025 : ರಾಜ್ಯದ ‘ಪ್ರಗತಿಯ ಮರುಕಲ್ಪನೆ’ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಇಂದು ಚಾಲನೆ

spot_img
spot_img

Share post:

Bangalore News:

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ರಾಜನಾಥ್​ ಸಿಂಗ್​ INVEST KARNATAKA 2025 ಕ್ಕೆ ಚಾಲನೆ ನೀಡಲಿದ್ದಾರೆ. ಇಂದಿನಿಂದ ಫೆ.14ರ ವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು, ಹೂಡಿಕೆದಾರರು, ನವೋದ್ಯಮಗಳ ಕನಸುಗಾರರು, ನೀತಿ ನಿರೂಪಣೆಯ ಚಿಂತಕರಿಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಕೆಂಪುರತ್ನಗಂಬಳಿಯ ಸ್ವಾಗತ ಕೋರುವ ಸಿದ್ಧತೆಗಳೆಲ್ಲ ಪೂರ್ಣಗೊಂಡಿವೆ.

ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ‘ಪ್ರಗತಿಯ ಮರುಕಲ್ಪನೆ’ ಧ್ಯೇಯದ INVEST KARNATAKA 2025 ರ ಮೂಲಕ ವಿಶ್ವದ ಹೂಡಿಕೆದಾರರನ್ನು ರಾಜ್ಯದತ್ತ ಸೆಳೆಯಲು ಸಜ್ಜಾಗಿದೆ.

“ಕೆಲವು ಕೇಂದ್ರ ಸಚಿವರು ನಾಲ್ಕು ದಿನಗಳಲ್ಲಿ ಯಾವುದಾದರೊಂದು ದಿನ ಭಾಗವಹಿಸುವ ಭರವಸೆ ನೀಡಿದ್ದಾರೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗುವುದು” ಎಂದು ವಿವರಿಸಿದರು.

INVEST KARNATAKA 2025 “ಇಂದು ಸಂಜೆ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.

“INVEST KARNATAKA 2025  ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ, ಎಸ್‌ಎಂಇ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ʼಎಸ್‌ಎಂಇ ಕನೆಕ್ಟ್‌- 25ʼ, ವೆಂಚುರೈಸ್‌ನ ಎರಡನೆ ಆವೃತ್ತಿ ಇತರ ವಿಶೇಷತೆಗಳಾಗಿವೆ. 60ಕ್ಕೂ ಹೆಚ್ಚು ಕಂಪನಿಗಳು ಮತ್ತು ನವೋದ್ಯಮಗಳು ತಯಾರಿಕೆ, ಸಂಚಾರ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‌ ಸಿಟಿ-ನಲ್ಲಿ ಸಹಭಾಗಿತ್ವ ವಿಸ್ತರಿಸಲು ಆದ್ಯತೆ ನೀಡಲಾಗುವುದು” ಎಂದು ಹೇಳಿದರು.

“75ಕ್ಕೂ ಹೆಚ್ಚು ಗಣ್ಯ ಭಾಷಣಕಾರರು ಭಾಗವಹಿಸಲಿದ್ದಾರೆ. 25ಕ್ಕೂ ಹೆಚ್ಚು ತಾಂತ್ರಿಕ ಅಧಿವೇಶನಗಳು, 10ಕ್ಕೂ ಹೆಚ್ಚು ದೇಶಗಳ ಜೊತೆಗಿನ ಸಭೆ ಮತ್ತು ಎಸ್‌ಎಂಇ ಕನೆಕ್ಟ್‌ಗೆ ಸಂಬಂಧಿಸಿದ ಸಮಾಲೋಚನೆಗಳಿಗೆ ಈ ಹೂಡಿಕೆ ಶೃಂಗಸಭೆಯು ಸಾಕ್ಷಿಯಾಗಲಿದೆ. ರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲು ಅಗತ್ಯವಾದ ಭೂಮಿಕೆಯನ್ನು ರಾಜ್ಯ ಸರ್ಕಾರವು ಹದಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹತ್ತಾರು ಪ್ರಥಮಗಳನ್ನು ತನ್ನ ಮುಡಿಗೆ ಏರಿಸಿಕೊಂಡಿರುವ ಕರ್ನಾಟಕವು, ಈ ಸಮಾವೇಶದ ನೆರವಿನಿಂದ ತನ್ನ ಕೈಗಾರಿಕಾ ಪ್ರಗತಿಯ ವೇಗ ಹೆಚ್ಚಿಸಲು ದೃಢ ನಿರ್ಧಾರ ಮಾಡಿದೆ” ಎಂದು ವಿವರಿಸಿದರು.

ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಪ್ರಮುಖ ತಾಣವನ್ನಾಗಿ ಇಡೀ ವಿಶ್ವಕ್ಕೆ ಪ್ರದರ್ಶಿಸಲು, ಪಾಲುದಾರಿಕೆ ಉತ್ತೇಜಿಸಲು ಮತ್ತು ವಿವಿಧ ಕೈಗಾರಿಕಾ ವಲಯಗಳಲ್ಲಿ ನಾವೀನ್ಯತೆಗೆ ಚಾಲನೆ ನೀಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಇದು ಬಂಡವಾಳ ಹೂಡಿಕೆಗೆ ವೇದಿಕೆಯಾಗಿರುವುದರ ಜೊತೆಗೆ, ಸರ್ಕಾರ ಮತ್ತು ಉದ್ಯಮ ವಲಯದ ನಡುವಣ ಅರ್ಥಪೂರ್ಣ ಸಹಯೋಗ ಬೆಸೆಯುವುದಕ್ಕೂ ನೆರವಾಗಲಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಮತ್ತೊಮ್ಮೆ ಮನದಟ್ಟು ಮಾಡಿಕೊಡಲಿದೆ ಎಂದರು.

ಫೆಬ್ರುವರಿ 12 ರಿಂದ 14ರ ವರೆಗೆ ಸಮಾವೇಶ ಸ್ಥಳದಲ್ಲಿ ವಿವಿಧ ವಿಚಾರಗೋಷ್ಠಿಗಳು, ಸಂವಾದ, ಸಮೂಹ ಚರ್ಚೆಗಳೂ ನಡೆಯಲಿವೆ.

Feb. 12:

  • ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ
  • ಕ್ಷಮತೆಯ ಮಾರ್ಗೋಪಾಯಗಳು
  • ಭವಿಷ್ಯಕ್ಕೆ ನಾವೀನ್ಯತೆ.
  • ಮುಂದಾಳತ್ವ

Feb. 13:

  • ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ- ಸಂವಾದ.
  • ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ- ಸಮೂಹ ಚರ್ಚೆ.

Feb. 14 :

  • ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು

ಇದನ್ನು ಓದಿರಿ : The World Congress on Translational Cancer Research discusses innovative cancer treatments,

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...