spot_img
spot_img

JACKPOT FOR YOUNG BOWLER : ಗೌತಮ್ ಗಂಭೀರ್ ಶಿಷ್ಯನಿಗೆ ಬಿಗ್ ಜಾಕ್ಪಾಟ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Cricket News :

ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್​​ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಮುಖ್ಯ ಕೋಚ್​ ಗೌತಮ್​ ಗಂಭೀರ್​ ಶಿಷ್ಯನಿಗೆ ಬಿಸಿಸಿಐನಿಂದ ಬಿಗ್​ ಆಫರ್​ ಸಿಕ್ಕಿದೆ.ಏತನ್ಮಧ್ಯೆ, ಚಾಂಪಿಯನ್ಸ್ JACKPOT ಮತ್ತು ಇಂಗ್ಲೆಂಡ್​ ವಿರುದ್ದದ ಏಕದಿನ ಸರಣಿಗಾಗಿ ಶನಿವಾರ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಬಲಿಷ್ಟ ತಂಡವನ್ನು ಪ್ರಕಟಿಸಿದೆ.ಈ ತಿಂಗಳು 22ನೇ ತಾರೀಖಿನಿಂದ ಭಾರತ ಮತ್ತು ಇಂಗ್ಲೆಂಡ್​ ನಡುವೆ 5 ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದೆ.

ಇದು ಮುಗಿದ ಬೆನ್ನಲ್ಲೆ ಫೆ.6 ರಿಂದ 3 ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಲಿದೆ. ಜೊತೆಗೆ ಯುವ ದಾಂಡಿಗ ಯಶಸ್ವಿ ಜೈಸ್ವಾಲ್​ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಇದು ಅವರ ಚೊಚ್ಚಲ ಏಕದಿನ ಸರಣಿ ಆಗಲಿದೆ. ಆದರೆ ಇಂಗ್ಲೆಂಡ್​ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಎರಡರಿಂದಲೂ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ.ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್​ ಅಗರ್ಕರ್​ ಮತ್ತು ನಾಯಕ ರೋಹಿತ್​ ಶರ್ಮಾ ಜಂಟಿ ಸುದ್ಧಿಗೋಷ್ಠಿ ನಡೆಸಿ ತಂಡವನ್ನು ಪ್ರಕಟಿಸಿದ್ದಾರೆ.

ಬರೋಬ್ಬರಿ ಒಂದು ವರ್ಷದ ಬಳಿಕ ಮೊಹಮ್ಮದ್​ ಶಮಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಕಮ್​ಬ್ಯಾಕ್​ ಮಾಡಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಐದು ಪಂದ್ಯಗಳ ಬಾರ್ಡರ್​ ಗವಾಸ್ಕರ್​ JACKPOT ಟೆಸ್ಟ್​ ಸರಣಿಯ ಭಾಗವಾಗಿದ್ದ ಟೀಂ ಇಂಡಿಯಾದ ಸ್ಟಾರ್​ ಬೌಲರ್​ ಜಸ್ಪ್ರೀತ್​ ಬುಮ್ರಾ ಸರಣಿ ಉದ್ದಕ್ಕೂ ಭರ್ಜರಿ ಪ್ರದರ್ಶನ ತೋರಿದ್ದರು. ಎಲ್ಲ 5 ಪಂದ್ಯಗಳಲ್ಲಿ ಕಾಂಗರೂ ಪಡೆ ಕಾಡಿದ್ದ ಬುಮ್ರಾ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್​ ಪಡದ ಬೌಲರ್​ ಎನಿಸಿಕೊಂಡರು.

ಸದ್ಯ ಅವರು ಗಾಯದಿಂದ ಚೇತರಿಸಿಕೊಂಡಿದ್ದರು ಮುಂದಿನ ತಿಂಗಳು ಆರಂಭವಾಗಲಿರುವ ಚಾಂಪಿಯನ್ಸ್​ JACKPOT ದೃಷ್ಟಿಯಿಂದ ತಂಡದಿಂದ ಹೊರಗಿಡಲಾಗಿದೆ.ಆದರೆ, ಸರಣಿಯ 5ನೇ ಮತ್ತು ಅಂತಿಮ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾದ ಬುಮ್ರಾ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದರು. ಇದಾದ ಬಳಿಕ ಎರಡನೇ ಇನ್ನಿಂಗ್ಸ್​ನಲ್ಲಿ ಅವರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗಿರಲಿಲ್ಲ.

ಏತನ್ಮಧ್ಯೆ ಇವರ ಸ್ಥಾನಕ್ಕೆ ಯುವ ವೇಗಿ ಹರ್ಷಿತ್​ ರಾಣಾ ಅವರಿಗೆ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಗೆ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಹರ್ಷಿತ್​ ರಾಣಾ, ಬುಮ್ರಾ ಅವರ ಬದಲಿ ಆಟಗಾರನಾಗಿ ಆಯ್ಕೆ ಆಗಿದ್ದು ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಪಡೆದರೇ ಇದು ಅವರ ಚೊಚ್ಚಲ ಏಕದಿನ ಸರಣಿ ಆಗಲಿದೆ.

ಒಂದು ವೇಳೆ, ಈ ಸರಣಿಯಲ್ಲಿ ಉತ್ತಮ ಪರ್ಫಾಮೆನ್ಸ್​ ತೋರಿದರೇ, ಬುಮ್ರಾ ಫಿಟ್ನೆಸ್​ ಕಾರಣದಿಂದ ಚಾಂಪಿಯನ್ಸ್​ JACKPOTಯಿಂದ ಹೊರಗುಳಿದರೇ ಇಲ್ಲಿಯೂ ಆಯ್ಕೆಯಾಗುವ ಸಾಧ್ಯತೆ ಇದೆ.

One Day Schedule: ಇಂಗ್ಲೆಂಡ್​​ ವಿರುದ್ಧ ಮೊದಲ ಏಕದಿನ ಪಂದ್ಯ ಫೆಬ್ರವರಿ 6ಕ್ಕೆ ನಡೆಯಲಿದೆ. ಎರಡನೇ ಪಂದ್ಯ ಫೆಬ್ರವರಿ 9, ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 12 ರಂದು ನಡೆಯಲಿದೆ.

India squad for England ODI series: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಇದನ್ನು ಓದಿರಿ : SUGARCANE DAMAGE COMPENSATION : ಕಬ್ಬು ಹಾನಿಗೆ ಪರಿಹಾರ ನೀಡಲು ₹50 ಲಕ್ಷ ನಿಧಿ ಸ್ಥಾಪನೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...