spot_img
spot_img

JAGADISH SHETTAR : ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರದ ಪತನ ಖಚಿತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hubli News:

ಸಚಿವರಾದ ಕೆ. ಎನ್‌. ರಾಜಣ್ಣ, ಎಂ. ಬಿ. ಪಾಟೀಲ್ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್‌ ಎಂಬ ಎರಡು ಗುಂಪುಗಳು ಇರುವುದು ಎದ್ದು ಕಾಣುತ್ತಿದೆ ಎಂದು ಸಂಸದ JAGADISH SHETTAR ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ.‌

ಈಗಾಗಲೇ ಔತಣಕೂಟ ಆರಂಭವಾಗಿದೆ.‌ ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಕಾಂಗ್ರೆಸ್​ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ JAGADISH SHETTAR ಭವಿಷ್ಯ ನುಡಿದಿದ್ದಾರೆ. ಆದರೆ, ಎಸ್‌ಸಿ, ಎಸ್‌ಟಿ ಶಾಸಕರು, ಮಂತ್ರಿಗಳ ಔತಣಕೂಟಕ್ಕೆ ಅಡ್ಡಗಾಲು ಹಾಕಿದರು.‌ ಅಡ್ಡಗಾಲು ಹಾಕೋ ಕೆಲಸವನ್ನು ಡಿ. ಕೆ. ಶಿವಕುಮಾರ್ ಮಾಡಿದ್ದಾರೆ” ಎಂದು ಆರೋಪಿಸಿದರು.

“ಊಟಕ್ಕೆ ಕರೆ ಕೊಟ್ಟವರು ಸ್ಪಷ್ಟೀಕರಣ ನೀಡಿದ್ದಾರೆ. ನಮ್ಮಲ್ಲಿ ಸಮಸ್ಯೆ ಇದೆ. ಆದರೆ, ಅದನ್ನು ಸರಿ ಮಾಡುವ ಕೆಲಸ ಹೈಕಮಾಂಡ್‌ನವರು ಮಾಡ್ತಾರೆ. ಎಸ್‌ಸಿ, ಎಸ್‌ಟಿ ಸಮಸ್ಯೆಗಳ ಕುರಿತು ಚರ್ಚಿಸಲು ಔತಣಕೂಟ ಸೇರಿದ್ದೇವೆ ಅಂತ ರಾಜಣ್ಣ ಹೇಳುತ್ತಾರೆ. ಈ ರೀತಿಯ ಸಮಸ್ಯೆಗಳನ್ನು ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಬೇಕು. ಇದನ್ನು ಚರ್ಚೆ ಮಾಡೋಕೆ ಮಂತ್ರಿಗಳು ಸೇರಿದ್ರೆ ಜನ ನಂಬುತ್ತಾರಾ?.

ಎಸ್‌ಸಿ, ಎಸ್‌ಟಿ ಜನರ ಮೇಲೆ ಅವರಿಗೆ ಕಾಳಜಿಯೇ ಇಲ್ಲ. ರಾಜಣ್ಣ ಹೇಳಿಕೆ ನೋಡಿದ್ರೆ ರಾಜಕೀಯ ಸಲುವಾಗಿ ಮಾಡ್ತಿದ್ದಾರೆ. ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಅಲ್ಲ ಎಂದು ತಿಳಿಯುತ್ತದೆ. ಎಸ್‌ಸಿ, ಎಸ್‌ಟಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಡಿನ್ನರ್ ಮೀಟಿಂಗ್ ಮಾಡುವ ಅವಶ್ಯಕತೆಯೇ ಇರಲಿಲ್ಲ” ಎಂದು ಹೇಳಿದರು.

“ಸಚಿವರಾದ ಕೆ. ಎನ್‌. ರಾಜಣ್ಣ, ಎಂ. ಬಿ. ಪಾಟೀಲ್ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್‌ ಎಂಬ ಎರಡು ಗುಂಪುಗಳು ಇರುವುದು ಎದ್ದು ಕಾಣುತ್ತಿದೆ.‌ ಇದು ಮೊದಲು ಒಳಗೊಳಗೇ ಇತ್ತು, ಈಗ ಹೊರ ಬರುತ್ತಿದೆ.‌ ಆದಷ್ಟು ಬೇಗ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ” ಎಂದು ಹೇಳಿದರು.

ಪರಮೇಶ್ವರ್​ ಡಿನ್ನರ್ ಮೀಟಿಂಗ್ ರದ್ದಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಇದರ ಹಿಂದೆ ರಾಜಕೀಯ ಇದೆ. ಡಿ. ಕೆ. ಶಿವಕುಮಾರ್‌ಗೆ ತಮ್ಮ ವಿರುದ್ಧ ಷಡ್ಯಂತ್ರ ನಡೀತಾ ಇದೆ ಅಂತ ಅನಿಸಿದೆ. ಹೀಗಾಗಿ ಶತ್ರು ಸಂಹಾರದ ಪೂಜೆ ಪುನಸ್ಕಾರ ಆರಂಭಿಸಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಬಯಲಲ್ಲೇ ಗುದ್ದಾಟ ನಡೆಯುತ್ತದೆ” ಎಂದರು.

ಇದನ್ನು ಓದಿರಿ : CHIKALLUR FAIR : ಪ್ರಾಣಿ ಬಲಿ, ಟ್ಯಾಟೂ ಹಾಕುವುದಕ್ಕೆ ನಿಷೇಧ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...