spot_img
spot_img

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

spot_img
spot_img

Share post:

Kalaburagi News:

ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ನಗರದ ಡಾ. ಎಸ್​.ಎಂ ಪಂಡಿತ್​ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಙಾನ ಮತ್ತು ಸಂಶೋಧನ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬೆಂಗಳೂರು, ಮೈಸೂರು ನಂತರ ಕಲ್ಯಾಣ ಕರ್ನಾಟಕದಲ್ಲಿ ಮೊದಲ ಜಯದೇವ ಹೃದ್ರೋಗ ಆಸ್ಪತ್ರೆ ಇದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB)ಯ 377 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ.ಒಟ್ಟು 371 ಬೆಡ್​ ಸಾಮರ್ಥ್ಯವಿರುವ ನೂತನ ಜಯದೇವ ಆಸ್ಪತ್ರೆಯನ್ನು ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ 377 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್​, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು.

Hospital specialties :

371 ಹಾಸಿಗೆ ಸಾಮರ್ಥ್ಯದ ಕಟ್ಟಡ

3 ಕ್ಯಾಥ್‌ಲ್ಯಾಬ್‌ಗಳು

3 ಆಪರೇಷನ್ ಥಿಯೇಟರ್‌ಗಳು

1 ಹೈಬ್ರಿಡ್ ಆಪರೇಷನ್ ಥಿಯೇಟರ್

105 ಐಸಿಸಿಯು ಹಾಸಿಗೆಗಳು

120 ಸಾಮಾನ್ಯ ವಾರ್ಡ್ ಬೆಡ್‌

ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು.

ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ವಿಶೇಷ ಸ್ಥಾನಮಾನ ನೀಡಲಾಗಿದೆ. 10 ವರ್ಷವಾಗಿದೆ. ಹೀಗಾಗಿ 371(ಜೆ) ಕಲಂ ಸವಿನೆನಪಿಗಾಗಿ 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಿದೆ. ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆ 2016ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಜಿಮ್ಸ್​ನಲ್ಲಿ ತಾತ್ಕಾಲಿಕವಾಗಿ ಆರಂಭವಾಗಿತ್ತು. ಎಂಟು ವರ್ಷದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದನೇ ಲೋಕಾರ್ಪಣೆಗೊಂಡಿದೆ.ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ ಸಿಟಿ ಸ್ಕ್ಯಾನ್, 1.5T ಎಂಆರ್ ಐ, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಒದಗಲಿದೆ. ಬಿಪಿಎಲ್​​ ಕಾರ್ಡ್​ದಾರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಸಿಗಲಿದ್ದು, ಎಪಿಎಲ್​ ಕಾರ್ಡ್​ದಾರರಿಗೆ ಅಲ್ಪಮೊತ್ತದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...