spot_img
spot_img

ವಕ್ಫ್ ತಿದ್ದುಪಡಿ ಮಸೂದೆಯ ಜೆಪಿಸಿ ಕಾಲಾವಧಿ ವಿಸ್ತರಣೆ

spot_img
spot_img

Share post:

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ಕಾಲಾವಧಿಯನ್ನು ವಿಸ್ತರಿಸಬೇಕೆಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಲಾಗಿದೆ.
ಸಮಗ್ರ ಸಮಾಲೋಚನೆ ಮತ್ತು ಚರ್ಚೆ ನಡೆಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಸಮಿತಿಯ ಸದಸ್ಯರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.
“ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸ ಸಮಯದವರೆಗೆ ವಿಸ್ತರಿಸುವಂತೆ ವಿನಂತಿಸಿ ನಾವು ನಿಮಗೆ ಪತ್ರ ಬರೆಯುತ್ತಿದ್ದೇವೆ” ಎಂದು ಸದಸ್ಯರು ಸ್ಪೀಕರ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಸಮಿತಿಯು ಈವರೆಗೆ ಸಾಧಿಸಿದ ಪ್ರಗತಿಯನ್ನು ಪತ್ರದಲ್ಲಿ ಎತ್ತಿ ತೋರಿಸಲಾಗಿದ್ದು, ಆಗಸ್ಟ್ 22, 2024 ರಂದು ನಡೆದ ಮೊದಲ ಸಭೆಯಿಂದ, ಜೆಪಿಸಿ ಈವರೆಗೆ ಕೇವಲ 25 ಸಭೆಗಳನ್ನು ನಡೆಸಿದೆ ಎಂದು ಉಲ್ಲೇಖಿಸಲಾಗಿದೆ.
ಜೆಪಿಸಿ ಈವರೆಗೆ ಕೇವಲ 25 ಸಭೆಗಳನ್ನು ನಡೆಸಿದೆ. ಇದರಲ್ಲಿ ವಿವಿಧ ಸಂಸ್ಥೆಗಳು ಮತ್ತು ವ್ಯಕ್ತಿಗಳ ಪುರಾವೆಗಳು / ಪ್ರಸ್ತುತಿಗಳು ಸೇರಿವೆ. ಆದರೆ ಬಿಹಾರ, ನವದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಇನ್ನೂ ಸಮಿತಿಯ ಮುಂದೆ ಹಾಜರಾಗಿಲ್ಲ. ಇದಲ್ಲದೆ, ವಿವಿಧ ಪ್ರಾತಿನಿಧಿಕ ಪಾಲುದಾರ ಸಂಸ್ಥೆಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸಾಧ್ಯವಾಗುವಂತೆ ಸಮಿತಿಯ ಕಾಲಾವಧಿಯನ್ನು ಇನ್ನಷ್ಟು ವಿಸ್ತರಿಸುವಂತೆ ಕೋರುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಗಮನಾರ್ಹವಾಗಿ ಬದಲಾಯಿಸಲಿದೆ ಮತ್ತು ಈ ಬದಲಾವಣೆಗಳು ಭಾರತದ ಬಹುದೊಡ್ಡ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿವೆ ಎಂದು ಅದು ಹೇಳಿದೆ.
“ಈ ಬದಲಾವಣೆಗಳು ಭಾರತದ ಜನಸಂಖ್ಯೆಯ ದೊಡ್ಡ ಭಾಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯ ನೀಡಿರುವುದು ಅಸಮರ್ಪಕ ಮಾತ್ರವಲ್ಲ, ತಪ್ಪು ನಿರ್ಧಾರಗಳಿಗೆ ಕಾರಣವಾಗಬಹುದು. ಹೀಗಾಗಿ ಸರಿಯಾದ ಸಮಾಲೋಚನೆ ಮತ್ತು ಚರ್ಚೆಗಳನ್ನು ನಡೆಸಲು ಸಾಧ್ಯವಾಗುವಂತೆ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸ ಸಮಯದವರೆಗೆ ವಿಸ್ತರಿಸಬೇಕು” ಎಂದು ಜೆಪಿಸಿ ಸದಸ್ಯರು ಕೋರಿದ್ದಾರೆ.
ಆಗಸ್ಟ್ 8, 2024 ರಂದು ಲೋಕಸಭೆಯಲ್ಲಿ ಪರಿಚಯಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬಿಸಿ ಚರ್ಚೆಯ ನಂತರ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿಗೆ ಕಳುಹಿಸಲಾಯಿತು. ಜೆಪಿಸಿ ವಿವಿಧ ಮಧ್ಯಸ್ಥಗಾರರೊಂದಿಗೆ ಚರ್ಚೆಗಳನ್ನು ನಡೆಸುತ್ತಿದೆ. ವಕ್ಫ್ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಮಸೂದೆಯ ಕೆಲ ಕಾನೂನುಗಳಿಗೆ ವಿರೋಧ ವ್ಯಕ್ತವಾಗಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...