spot_img
spot_img

KALI BRIDGE COLLAPSE : ಕುಸಿದ ಕಾಳಿ ಸೇತುವೆ ತೆರವು ವೇಳೆ ಪಿಲ್ಲರ್ ಮುರಿದು ನದಿಗೆ ಬಿದ್ದ ಸ್ಲ್ಯಾಬ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Karwar News:

ಕಾಳಿ ಸೇತುವೆ ತೆರವು ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಘಟನೆ ನಡೆದಿದೆ. KALI BRIDGE COLLAPSE  ಗುರುವಾರ ಇದೇ ಸ್ಲ್ಯಾಬ್ ಮೇಲೆ 4-5 ಕಾರ್ಮಿಕರು ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ದಿನ ರಾತ್ರಿ 12 ಗಂಟೆಯವರೆಗೂ ಕಾರ್ಯಾಚರಣೆ ನಡೆಸುತ್ತಿದ್ದರು.

ಈಗಾಗಲೇ ಶೇ.70ರಷ್ಟು ತೆರವು ಕಾರ್ಯಾಚರಣೆ ಪೂರ್ಣಗೊಳಿಸಲಾಗಿದೆ. ಆದರೆ ಇದೀಗ ಶುಕ್ರವಾರ ಬೆಳಗ್ಗೆ ವೇಳೆ ಘಟನೆ ಸಂಭವಿಸಿದ್ದು, ಈ ವೇಳೆ ಕೆಲಸಗಾರರಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. KALI BRIDGE COLLAPSE ಕಾಳಿ ಸೇತುವೆ ತೆರವು ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಪರಿಣಾಮ ಹೊಸ ಸೇತುವೆಗೆ ಸಂಭವಿಸಬಹುದಾದ ಬಹುದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಶುಕ್ರವಾರ ಈ ದುರ್ಘಟನೆ ನಡೆದಿದೆ.

ಈ ವೇಳೆ ಯಾವುದೇ ಕಾರ್ಯಾಚರಣೆ ನಡೆಯದೇ ಇರುವ ಕಾರಣ ಸಂಭವಿಸಬಹುದಾಗಿದ್ದ ಇನ್ನಷ್ಟು ಹಾನಿ ತಪ್ಪಿದೆ. KALI BRIDGE COLLAPSE  ಕಳೆದ ಆಗಸ್ಟ್ 7 ರಂದು ಮಳೆಯ ಅಬ್ಬರಕ್ಕೆ ಕಾಳಿ ಸೇತುವೆ ಕುಸಿದು ಬಿದ್ದಿತ್ತು. ಈ ವೇಳೆ ಸೇತುವೆ ಮೇಲೆ ಚಲಿಸುತ್ತಿದ್ದ ಲಾರಿ ಸಹ ನದಿಯಲ್ಲಿ ಮುಳುಗಡೆಯಾಗಿ ಅದೃಷ್ಟವಶಾತ್ ಲಾರಿಯ ಕ್ಯಾಬಿನ್ ಮೇಲೆ ನಿಂತುಕೊಂಡು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದ.

KALI BRIDGE COLLAPSE  ಇದೀಗ ಸೇತುವೆ ತೆರವು ಕಾರ್ಯ ನಡೆಯುತ್ತಿದೆ. ಆದರೆ ಮುರಿದು ಬಿದ್ದ ಸೇತುವೆಯ ಒಂದು ಭಾಗ ನಿನ್ನೆ ತಡರಾತ್ರಿ ಏಕಾಏಕಿಯಾಗಿ ಪಿಲ್ಲರ್ ತಳಭಾಗದಿಂದ ಕಳಚಿ ಕುಸಿತ ಉಂಟಾಗಿದೆ. ಇದರಿಂದಾಗಿ ಫಿಲ್ಲರ್‌ಗೆ ಹೊಂದಿಕೊಂಡಿದ್ದ ಸೇತುವೆ ಮೇಲ್ಮುಖವಾಗಿ ನಿಂತುಕೊಂಡಿದೆ. ಪಕ್ಕದಲ್ಲೇ ಹೊಸ ಸೇತುವೆ ಇದ್ದು, ಮುರಿದ ಸೇತುವೆ ಹೊಸ ಸೇತುವೆಗೆ ತಾಗಿ ಹಾನಿಯಾಗುವುದು ತಪ್ಪಿದೆ.

Karwar – Goa Connecting Link:

ಇನ್ನು ಕುಸಿದ ಸೇತುವೆ ಮತ್ತೆ ಕುಸಿದಿರುವ ಬಗ್ಗೆ ತಿಳಿದ ಜನ ಇದೀಗ ಹೆದ್ದಾರಿಯಲ್ಲಿಯೇ ನಿಂತು ಕಾರ್ಯಾಚರಣೆ ವೀಕ್ಷಣೆ ಮಾಡುತ್ತಿದ್ದಾರೆ. ಹಳೆ ಸೇತುವೆ ಮುರಿದ ಬಳಿಕ ಹೊಸ ಸೇತುವೆ ಮೇಲೆಯೇ ದ್ವೀಪಥ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೇತುವೆ ಮೇಲೆ ಸಂಚಾರಕ್ಕೆ ಕೈಗೊಳ್ಳಬೇಕಾದ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ.

ಸದ್ಯ ಸಂಚಾರಕ್ಕೆ ಕಿರಿದಾಗಿದ್ದರೂ ಎರಡು ಬದಿಯಲ್ಲಿಯೂ ಹಂಪ್ ಎಂಬುದು ಇಲ್ಲ. ಇದರಿಂದ ವಾಹನಗಳು ವೇಗವಾಗಿಯೇ ಸಂಚರಿಸುತ್ತಿವೆ. ಇದರ ಜೊತೆಗೆ ಇದೀಗ ಸೇತುವೆ ಮತ್ತೆ ಕುಸಿದ ಕಾರಣ ಸೇತುವೆ ನೋಡಲು ಜನ ಹೊಸ ಸೇತುವೆ ಸೇತುವೆ ಮೇಲೆಯೇ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಅಲ್ಲದೆ ಲೈಟ್ ವ್ಯವಸ್ಥೆ ಸರಿಯಾಗಿ ಇಲ್ಲ. ಡಿವೈಡರ್ ಕೂಡ ಮುರಿದು ಹೋಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಇಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರ ಸೂರಜ್ ನಾಯ್ಕ ಒತ್ತಾಯಿಸಿದ್ದಾರೆ.

ಇನ್ನು ಕಾರವಾರ-ಗೋವಾ ಸಂಪರ್ಕಿಸಲು ಈ ಸೇತುವೆಯೊಂದೇ ಸಂಪರ್ಕಕೊಂಡಿಯಾಗಿದೆ. ಕಾಳಿ ನದಿಯ ಮುರಿದ ಸೇತುವೆಯ ಭಾಗ ಒಂದೊಮ್ಮೆ ಹೊಸ ಸೇತುವೆಗೆ ಅಪ್ಪಳಿಸಿದ್ದಲ್ಲಿ ದೊಡ್ಡ ಮಟ್ಟದ ಹಾನಿ ಉಂಟಾಗುತಿತ್ತು. ಆದರೆ ಇದೀಗ ಆ ಸಮಸ್ಯೆಯಿಂದ ಪಾರಾದಂತಾಗಿದೆ.

ಹಳೆಯ ಸೇತುವೆಯನ್ನು ತೆರವು ಮಾಡುವುದು ಸಹ ಅಷ್ಟೆ ಕಷ್ಟಕರವಾಗಿದ್ದು, ಸ್ವಲ್ಪ ಯಾಮಾರಿದ್ದರು ಹೊಸ ಸೇತುವೆಗೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ತೆರವು ಗುತ್ತಿಗೆ ಪಡೆದಿರುವ ಕಂಪನಿಯವರು ಎಚ್ಚರಿಕೆಯಿಂದ ಫಿಲ್ಲರ್ ತೆರವು ಕಾರ್ಯ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ.

ಇನ್ನು ಸೇತುವೆ ತೆರವು ಮಾಡುವ ಸಿಬ್ಬಂದಿ ಯಾವುದೇ ಮುಂಜಾಗ್ರತೆ ವಹಿಸುತ್ತಿಲ್ಲ. ಸಾರ್ವಜನಿಕರ ದೃಷ್ಟಿಯಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸಿ ಕಾಮಗಾರಿ ಮಾಡುವಂತೆ ಸ್ಥಳೀಯ ವಿನಾಯಕ ನಾಯ್ಕ ಆಗ್ರಹಿಸಿದ್ದಾರೆ. ಒಟ್ಟಾರೆ ಹಳೆಯ ಕಾಳಿ ಸೇತುವೆ ತೆರವು ಮಾಡಿ ಹಳೆ ಸೇತುವೆ ಜಾಗದಲ್ಲಿಯೇ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಪ್ಲ್ಯಾನ್ ರೂಪಿಸಲಾಗಿದೆ.

ಇದೀಗ ತೆರವು ವೇಳೆ ದುರ್ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಇನ್ನು ಸೇತುವೆ ಸ್ಲ್ಯಾಬ್ ಕುಸಿತದ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ಐಆರ್​ಬಿ ಕಂಪೆನಿ ಎಂಜಿನಿಯರ್ ಪ್ರತಿಕ್ರಿಯೆ ನೀಡಿ, ಮುರಿದ ಸೇತುವೆ ತೆರವು ಮಾಡುತ್ತಿದ್ದು ಈಗಾಗಲೇ ಶೇ.70 ರಷ್ಟು ತೆರವು ಮಾಡಲಾಗಿದೆ. ಆದರೆ ಇದೀಗ ಸ್ಲ್ಯಾಬ್ ತೆರವು ಮಾಡುವ ಸಂಬಂಧ ಎರಡು ಬದಿ ಕಂಬಗಳ ಕೊಂಡಿ ಕಡಿತ ಮಾಡಲಾಗಿತ್ತು.

ಸ್ಲ್ಯಾಬ್ ಭಾರ ತಡೆಯಲಾಗದೆ ಕಂಬ ತುಂಡಾಗಿರಬಹುದು. ಆದರೆ ಇದರಿಂದ ಕಾರ್ಯಾಚರಣೆಗೆ ಅಥವಾ ಹೊಸ ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿರಿ : The experts said the govt should fix a minimum price for the crops to assess crop loss compensation.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...