ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಪರ ಸಮಾನ ಮನಸ್ಕರಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
“ನಮ್ಮ ನಾಡು ನಮ್ಮ ಆಳ್ವಿಕೆ” ವೇದಿಕೆ ಮತ್ತು ಕನ್ನಡಪರ ಸಮಾನ ಮನಸ್ಕರೆಲ್ಲಾ ಸೇರಿ ನಡೆಸುತ್ತಿರುವ ಬೈಕ್ ರ್ಯಾಲಿ, ನವೆಂಬರ್ 1 ಬೆಳಿಗ್ಗೆ 9.20 ರಿಂದ ಕಾರ್ಪೋರೇಶನ್ ಸರ್ಕಲ್ ಹತ್ತಿರ ಇರುವ ಬನಪ್ಪ ಪಾರ್ಕ್ ನಿಂದ ಶುರುವಾಗಲಿದೆ.
ಬೆಂಗಳೂರಿನ ಪ್ರಮುಖ ಸರ್ಕಲ್ ಗಳಲ್ಲಿ ಹಾಯ್ದು ಮಾರತಹಳ್ಳಿಯ ಮೂಲಕ ಫೀನಿಕ್ಸ್ ಮಾಲ್ ಮುಂದೆ ಬಾವುಟ ಹಾರಿಸುವ ಮೂಲಕ ಕೊನೆಗೊಳ್ಳಲಿದೆ.
ಈ ಸಂಭ್ರಮೋತ್ಸವದಲ್ಲಿ ಪಾಲ್ಗೊಳ್ಳಲು ಈಗಾಗಲೇ ನೂರಾರು ಜನ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ, ಎಲ್ಲರೂ ನಾಡಿನ ಉಡುಗೆ ತೊಡುಗೆಯನ್ನು ತೊಟ್ಟು ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನ ಪಾಲಿಸುತ್ತ ಕನ್ನಡ ಬಾವುಟ ಹಾರಿಸುತ್ತಾ ಬೈಕ್ ರ್ಯಾಲಿ ಸಾಗಲಿದೆ.
ಈ ಸಡಗರದಲ್ಲಿ ಮತ್ತಷ್ಟು ಬೆರೆಯಬೇಕೆಂದರೆ ಬೆಂಗಳೂರಿನಲ್ಲಿರುವ ಈ ಬೈಕ್ ರ್ಯಾಲಿಗೆ ಕನ್ನಡ ಮನಸ್ಸುಗಳೆಲ್ಲಾ ಜೊತೆಯಾಗಿ, ಒಗ್ಗಟ್ಟಿನಿಂದ ಬೆಂಬಲಿಸಿ ಎಂದು ಆಯೋಜಕರು ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.
ಶುಕ್ರವಾರ ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಕ್ಯೋತ್ಸವದ ಸಂಭ್ರಮ ಮನೆಮಾಡಿದೆ. ರಾಜ್ಯ ಸರ್ಕಾರದಿಂದಲೂ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆರಚಣೆ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಇನ್ನು ಎಲ್ಲಾ ಸಂಸ್ಥೆಗಳಲ್ಲೂ ಈ ಭಾರಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲು ಕರೆ ಕೊಡಲಾಗಿದೆ. ಆದರೆ ಯಾವುದೇ ಬಲವಂತ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕನ್ನಡ ಪರ ಸಂಘಟನೆಗಳಲ್ಲೂ ಮನವಿ ಮಾಡಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now