spot_img
spot_img

KANNADA SAHITYA SAMMELANA : ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿರುತ್ತದೆ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mandya News:

ಬರುವ ವರ್ಷ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ನಿನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಭಾನುವಾರ ತೆರೆ ಬೀಳಲಿದೆ.ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಈ ಬಾರಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ದಾಖಲೆ ಪ್ರಮಾಣದಲ್ಲಿ ಸಾಹಿತ್ಯಾಭಿಮಾನಿಗಳು ಸಮ್ಮೇಳನದಲ್ಲಿ ಭಾಗಿಯಾಗುತ್ತಿದ್ದಾರೆ. ಒಂದೆಡೆ ವಿಚಾರಗೋಷ್ಠಿ, ಮತ್ತೊಂದೆಡೆ ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳು ಜನರನ್ನ ಆಕರ್ಷಿಸುತ್ತಿವೆ.

ವಿವಿಧ ಬಗೆಯ ಖಾದ್ಯ, ಈ ಬಾರಿಯ ಅಡುಗೆ ಭಾರೀ ಸದ್ದು ಮಾಡಿದೆ. ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಇಂದು ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಿರಲಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

PRAYAGRAJ MAHA KUMBH LIGHTING : ಗಮನ ಸೆಳೆಯುತ್ತಿದೆ ಮಹಾಕುಂಭದ ಲೈಟಿಂಗ್ ವ್ಯವಸ್ಥೆ

Lucknow, Uttar Pradesh News: PRAYAGRAJ MAHA KUMBH LIGHTING ವಿದ್ಯುತ್ ಇಲಾಖೆ ಕನಸಿನ ಲೋಕವನ್ನೇ ಸೃಷ್ಟಿಸಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದು ಭಕ್ತರ...

TRANSGENDERS IN AKKA CAFE : ಮಂಗಳಮುಖಿಯರಿಂದ ‘ಅಕ್ಕ’ ಕೆಫೆ ನಿರ್ವಹಣೆ

Haveri News: ಹಾವೇರಿ ಜಿಲ್ಲಾ ಪಂಚಾಯತ್​ ದಿಟ್ಟ ನಿರ್ಧಾರಕ್ಕೆ ಮಂಗಳಮುಖಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸುಮಾರು 10 ಜನ ಮಂಗಳಮುಖಿಯರು ನಿರ್ವಹಣೆ ಮಾಡಲಿರುವ TRANSGENDERS IN AKKA CAFEಗೆ...

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...