Bangalore NEWS:
KARNATAKA BUDGET 2025 ಸಾಲಿನಲ್ಲಿ ಪಂಚ ಗ್ಯಾರಂಟಿಗಾಗಿ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಆ ಮೂಲಕ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ಮುಂದುವರಿಸಲಾಗಿದೆ. ಕಳೆದ ಬಜೆಟ್ನಲ್ಲಿ ಪಂಚ ಗ್ಯಾರಂಟಿಗಳಿಗೆ 52,000 ಕೋಟಿ ರೂ. ಅನುದಾನ ಹಂಚಿಕೆ ಮಾಡಿತ್ತು.
ಶಕ್ತಿ ಯೋಜನೆಗೆ KARNATAKA BUDGET 2025 ಸಾಲಿನಲ್ಲಿ ಒಟ್ಟು 5,300 ಕೋಟಿ ರೂ. ಅನುದಾನ ಒದಗಿಸಲಾಗಿದೆ.KARNATAKA BUDGET 2025 ಸಾಲಿನಲ್ಲಿ ಒಟ್ಟು 5,015 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು.
ಇನ್ನು ಗೃಹ ಲಕ್ಷ್ಮಿ ಯೋಜನೆಗೆ 2025-26 ಸಾಲಿನಲ್ಲಿ ಗೃಹ ಲಕ್ಷ್ಮಿಗೆ 28,608 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗುವುದು.KARNATAKA BUDGET 2025 ಸಾಲಿನಲ್ಲೂ 28,608 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು.
ಗೃಹ ಜ್ಯೋತಿ ಯೋಜನೆಗೆ KARNATAKA BUDGET 2025 ಸಾಲಿನಲ್ಲಿ 10,100 ಕೋಟಿ ರೂ. ಅನುದಾನ ಒದಗಿಸಲಾಗಿದೆ. KARNATAKA BUDGET 2025 ಸಾಲಿನಲ್ಲಿ ಒಟ್ಟು 9,657 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು.
ಉಳಿದಂತೆ ಅನ್ನಭಾಗ್ಯ ಯೋಜನೆಯಡಿ, ಇದುವರೆಗೆ ಹೆಚ್ಚುವರಿ 5 ಕೆ.ಜಿ. ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ನೀಡಲಾಗುತ್ತಿರುವ ಸಹಾಯಧನದ ಬದಲಾಗಿ, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ. 2025-26 ಸಾಲಿನಲ್ಲಿ ಸುಮಾರು 6,500 ಕೋಟಿ ರೂ. ಅನ್ನಭಾಗ್ಯಕ್ಕೆ ವೆಚ್ಚವಾಗುವ ಅಂದಾಜಿಸಲಾಗಿದೆ.
ಯುವನಿಧಿ ಯೋಜನೆಯಡಿ ಸುಮಾರು 2.58 ಲಕ್ಷ ಯುವಕರು ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಿದೆ.