spot_img
spot_img

LETTER FOR MERCY DEATH : ‘ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರೂ ದುಡ್ಡು ಕೊಡ್ತಿಲ್ಲ’

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Davangere News:

ಗುತ್ತಿಗೆದಾರರೊಬ್ಬರು, ಕಾಮಗಾರಿಯೊಂದನ್ನು ಮುಗಿಸಿ ಒಂದೂವರೆ ವರ್ಷವಾದರೂ ಅನುದಾನ ಬಿಡುಗಡೆಯಾಗಿಲ್ಲ. ಇದೇ ಹಣ ನಂಬಿಕೊಂಡು ಮಗಳ ಮದುವೆಯನ್ನು ಮಾಡಿಸಲಾಗುತ್ತಿಲ್ಲ. ಈ ಕೂಡಲೇ ಅನುದಾನ ಬಿಡುಗಡೆ ಮಾಡಿ, ಇಲ್ಲ ದಯಾಮರಣ ನೀಡಿ ಎಂದು ಮನವಿ ಪತ್ರ ಬರೆದಿದ್ದಾರೆ. ಈ ಕುರಿತು ಹರಿಹರದ ನಿವಾಸಿ ಪ್ರಥಮ ದರ್ಜೆಯ ಗುತ್ತಿಗೆದಾರ ಮೊಹಮ್ಮದ್ ಮಝರ್ ಅವರು ಮಾತನಾಡಿ, ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರು ಅನುದಾನ ಬಿಡುಗಡೆಯಾಗಿಲ್ಲ. ವಯಸ್ಸಿಗೆ ಬಂದಿರುವ ಮಗಳಿಗೆ ಮದುವೆ ಮಾಡಲು ಹಣ ಇಲ್ಲದೆ ಗುತ್ತಿಗೆದಾರ ಅಸಹಾಯಕತೆಯಿಂದ ದಯಾಮರಣ ಕೋರಿ ಸಿಎಂ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

“2022-23ನೇ ಸಾಲಿನ ವಿಶೇಷ ಅನುದಾನ ಅಡಿಯಲ್ಲಿ ಟೆಂಡರ್ ಕರೆದಿದ್ದರು. ಟೆಂಡರ್ ಪಡೆಯಲು ನಾನು ಭಾಗಿಯಾಗಿದ್ದೆ. ಹರಿಹರ ನಗರಸಭೆ ಹಾಗು ಜಿಲ್ಲಾಧಿಕಾರಿ ಅವರು ಕಾಮಗಾರಿ ಕಾರ್ಯದೇಶ ನೀಡಿದ್ದರು. ಅನುಮೋದನೆ ಆದ ಬಳಿಕ ಟೆಂಡರ್ ನನಗೆ ಸಿಕ್ಕಿತು. ನಾನು ಸಾಲಸೋಲ ಮಾಡಿ ಕಾಮಗಾರಿ ಮಾಡಿದ್ದೇನೆ. ಕಾಮಗಾರಿಗಾಗಿ ಮೆಟಿರಿಯಲ್ ಖರೀದಿ ಮಾಡಿದ್ದೇನೆ. ಅದರ ಹಣ ಸಂದಾಯ ಮಾಡಬೇಕು.

ಹಣ ಬಿಡುಗಡೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸಾಕಾಗಿದೆ. ಹರಿಹರ ನಗರಸಭೆ ವ್ಯಾಪ್ತಿಯ 29ನೇ ವಾರ್ಡ್​ನ ಖಬರಸ್ಥಾನದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಿದ್ದೇನೆ. 21ನೇ ವಾರ್ಡ್​ನಲ್ಲಿ 5 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಮಾಡಿದ್ದೇನೆ. ಕಾಮಗಾರಿ ಮುಗಿದಿದೆ, ಹಣ ಕೇಳಿದರೆ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ. ನನಗೆ 25 ಲಕ್ಷ ಹಣ ಬರಬೇಕಾಗಿದೆ.

ನನ್ನ ಮಗಳ ಮದುವೆ ಇದೆ. ಮದುವೆ ದಿನಾಂಕ ನಿಗದಿ ಮಾಡಿಸಬೇಕಾಗಿದೆ. ಅದಕ್ಕಾಗಿ ನಾನು ದಯಾಮರಣ ಕೋರಿ ಸಿಎಂ ಸಿದ್ದರಾಮಯ್ಯ ಹಾಗು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದೇನೆ. ನಾನು ಕಣ್ಣು ಮುಚ್ಚಬಹುದು, ಆ ದೇವರು ಅವರನ್ನು ನೋಡಿಕೊಳ್ಳಲಿ. ಕಳೆದ ಸರ್ಕಾರದಲ್ಲಿ ಹೀಗಾಯಿತು. ಇದೀಗ ಈ ಸರ್ಕಾರದಲ್ಲೂ ಅದೇ ಆಗುತ್ತಿದೆ. ಮೊದಲು ನನ್ನ ಕಾಮಗಾರಿ ನೋಡಿ ಹಣ ಬಿಡುಗಡೆ ಮಾಡಲಿ” ಎಂದು ಮನವಿ ಮಾಡಿಕೊಂಡರು.

Money required for daughter’s marriage:

“ಮಗಳು ಮದುವೆ ಇದೆ, ದಿನಾಂಕ ನಿಗದಿ ಮಾಡಬೇಕಾಗಿದೆ. ಹಣ ಇಲ್ಲದೇ ಮುಂದೂಡುತ್ತಿದ್ದೇನೆ. ಮದುವೆನೇ ಮುರಿದು ಬೀಳುವ ಹಂತಕ್ಕೆ ಬಂದಿದೆ. ಎಲ್ಲಿಂದ ಹಣ ತರಲಿ, ಮದುವೆ ಹೇಗೆ ಮಾಡಲಿ” ಎಂದು ಅಳಲು ಮೊಹಮ್ಮದ್​ ಅವರು ತೋಡಿಕೊಂಡರು.

Outrage from locals too:

ಅನುದಾನಕ್ಕಾಗಿ ಸ್ಥಳೀಯ ಮಸೀದಿಯವರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ. ಅದರೆ ಯಾವುದೇ ಪ್ರಯೋಜನ ಆಗಿಲ್ಲ. ಮೆಕ್ಕಾ ಮಸೀದಿಯ ಮುತವಲ್ಲಿ ಎಮ್ ಇಲಿಯಾಜ್ ಈ ಬಗ್ಗೆ ಪ್ರತಿಕ್ರಿಯಿಸಿ “ಮೊಹಮ್ಮದ್ ಮಝರ್​​ ಅವರು ವಿಶೇಷ ಅನುದಾನ ಅಡಿಯಲ್ಲಿ ಕೆಲಸ ಶುರು ಮಾಡಿದ್ದರು. ಸಾಲ ಮಾಡಿ ಹಣ ಹಾಕಿ ಕಾಮಗಾರಿ ಪುರ್ಣಗೊಳಿಸಿದ್ದಾರೆ. ಆದರೆ ಹಣ ಮಾತ್ರ ಬಂದಿಲ್ಲ.

ಒಂದೂವರೆ ವರ್ಷ ಕಳೆದರು ಕೂಡ ಯಾವುದೇ ಪ್ರಯೋಜನವಿಲ್ಲ. ಕಳೆದ ಸರ್ಕಾರದಲ್ಲಿ ಗುತ್ತಿಗೆದಾರರ ಸಮಸ್ಯೆ ಹೆಚ್ಚಿತ್ತು. ಇದೀಗ ಈ ಸರ್ಕಾರದಲ್ಲೂ ಇದೇ ರೀತಿ ಆಗುತ್ತಿದೆ. ಮಗಳ ಮದುವೆ ಇದೆ ಅವರು ಹಣಕ್ಕಾಗಿ ಕಾಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗಮನ ಹರಿಸಿ ಹಣ ಬಿಡುಗಡೆ ಮಾಡಬೇಕೆಂದು” ಮನವಿ ಮಾಡಿದರು.

ಇದನ್ನು ಓದಿರಿ : WELCOMING THE NEW YEAR 2025 : ಜಗತ್ತಿನಲ್ಲಿ ಎಲ್ಲರಿಗಿಂತ ಮೊದಲೇ ‘ಹೊಸ ವರ್ಷ-2025’

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...