spot_img
spot_img

KEN BETWA RIVER LINKING PROJECT – ಕೆನ್-ಬೆಟ್ವಾ ನದಿ ಜೋಡಣೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Khajuraho (Central Region):

ಮಧ್ಯ ಪ್ರದೇಶದಲ್ಲಿ ಹುಟ್ಟುವ ಎರಡು ನದಿಗಳಾದ ಕೆನ್​ ಮತ್ತು ಬೆಟ್ವಾ ನದಿಗಳನ್ನು ಜೋಡಿಸಿ, ಅದರ ನೀರನ್ನು ಮಧ್ಯ ಪ್ರದೇಶ ಮತ್ತು ಉತ್ತರ ಪ್ರದೇಶದ ಜನರಿಗೆ ನೀಡುವುದು ಯೋಜನೆಯ ಉದ್ದೇಶ. ಈ ಮೂಲಕ ಅತಿದೊಡ್ಡ ಸಾಹಸಕ್ಕೆ ಸರ್ಕಾರ ನಾಂದಿ ಹಾಡಿದೆ. ಕೆನ್-ಬೆಟ್ವಾ ನದಿಗಳ ನೀರನ್ನು ಒಟ್ಟಾಗಿ ಸುರಿಯುವ ಮೂಲಕ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ದೇಶದ ಜಲಸಂಪನ್ಮೂಲ ಅಭಿವೃದ್ಧಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ. ಇದನ್ನು ಕಾಂಗ್ರೆಸ್ ಸರ್ಕಾರಗಳು ಕಡೆಗಣಿಸಿದ್ದವು” ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನದಿ ಜೋಡಣೆಯ ಮೊದಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯ ಪ್ರದೇಶದ ಖುಜುರಾಹೊದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

“Ambedkar had a vision for the country’s water resources” :

“ಪ್ರಮುಖ ನದಿ ಕಣಿವೆ ಯೋಜನೆಗಳ ಅಭಿವೃದ್ಧಿ ಮತ್ತು ಕೇಂದ್ರ ಜಲ ಆಯೋಗದ ರಚನೆಯಲ್ಲಿ ಅಂಬೇಡ್ಕರ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಆದರೆ, ಕಾಂಗ್ರೆಸ್ ನೀರಿನ ಸಂರಕ್ಷಣೆಯ ಬಗ್ಗೆ ಎಂದಿಗೂ ಗಮನ ನೀಡಲಿಲ್ಲ. ಅಂಬೇಡ್ಕರ್ ಅವರನ್ನು ‘ಜಲ ಸಂರಕ್ಷಣಾವಾದಿ’ಯಾಗಿ ಗುರುತಿಸಲಿಲ್ಲ” ಎಂದು ಟೀಕಿಸಿದರು. “21ನೇ ಶತಮಾನದ ಈ ಯುಗದಲ್ಲಿ ಜಲ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ರಾಷ್ಟ್ರಗಳು ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ದೇಶದ ಜಲ ಸಂಪನ್ಮೂಲಗಳ ಬಗ್ಗೆ ಅಂಬೇಡ್ಕರ್ ಅವರು ದೂರದೃಷ್ಟಿ ಹೊಂದಿದ್ದರು. ಅವುಗಳ ಬಲವರ್ಧನೆ, ನಿರ್ವಹಣೆ ಮತ್ತು ಅಣೆಕಟ್ಟು ನಿರ್ಮಾಣಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ” ಎಂದು ಮೋದಿ ಬಣ್ಣಿಸಿದರು.

ಅತೀ ಮಹತ್ವದ ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಯು ಎರಡು ರಾಜ್ಯಗಳ ಜನರ ನೀರಿನ ಬವಣೆಗೆ ಪರಿಹಾರ ನೀಡಲಿದೆ. ಮಧ್ಯ ಪ್ರದೇಶದ 10 ಜಿಲ್ಲೆಗಳ ಸುಮಾರು 44 ಲಕ್ಷ ಮತ್ತು ಉತ್ತರ ಪ್ರದೇಶದ 4 ಜಿಲ್ಲೆಗಳ 21 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಿದೆ. ಇದರ ಅಂದಾಜು ವೆಚ್ಚ 44,605 ​​ಕೋಟಿ ರೂಪಾಯಿ ಆಗಿದೆ. ಈ ಯೋಜನೆಯಿಂದ 2 ಸಾವಿರ ಗ್ರಾಮಗಳ ಸುಮಾರು 7.18 ಲಕ್ಷ ಕೃಷಿ ಕುಟುಂಬಗಳ, 10 ಲಕ್ಷ ಹೆಕ್ಟೇರ್​ ಭೂಮಿಗೆ ನೀರು ಸಿಗಲಿದೆ. ಜೊತೆಗೆ, 103 ಮೆಗಾವ್ಯಾಟ್ ಜಲವಿದ್ಯುತ್ ಮತ್ತು 27 ಮೆಗಾವ್ಯಾಟ್ ಸೌರಶಕ್ತಿಯೂ ಯೋಜನೆಯಡಿ ಉತ್ಪಾದನೆಯಾಗಲಿದೆ. ಶೇಕಡಾ 90 ರಷ್ಟು ಅನುದಾನವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

The outline of the scheme is as follows:

ಕೆನ್​ ನದಿಗೆ ಅಡ್ಡಲಾಗಿ ಪನ್ನಾ ಹುಲಿ ಸಂರಕ್ಷಿತಾರಣ್ಯದಲ್ಲಿ 77 ಮೀಟರ್​ ಎತ್ತರ ಮತ್ತು 2.13 ಕಿಲೋ ಮೀಟರ್​ ಉದ್ದದ ದೌಧನ್​ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಹೊಂದಿಕೊಂಡಂತೆ 221 ಕಿ.ಮೀ. ಉದ್ದದ ಕಾಲುವೆಯನ್ನು ರೂಪಿಸಲಾಗುತ್ತದೆ. ಇದರ ಮೂಲಕ ಉತ್ತರಪ್ರದೇಶದಲ್ಲಿ ಹರಿಯುವ ಬೆಟ್ವಾ ನದಿಗೆ ಕೆನ್​​ ನದಿಯ ನೀರನ್ನು ಹರಿಸಲಾಗುತ್ತದೆ. ಈ ಕಾಲುವೆ ಪರಿಧಿಯಲ್ಲಿ ಬರುವ ಬುಂದೇಲಖಂಡದ ಜನರಿಗೆ ಕುಡಿಯಲು ಮತ್ತು ಕೃಷಿಗೆ ನೀರು ದೊರೆಯಲಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...