spot_img
spot_img

KERALA BUSINESSMAN ROBBED CASE : ಕೇರಳ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ, ಎರಡು ಕಾರುಗಳು ಪತ್ತೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

KERALA BUSINESSMAN ROBBED CASE ಕ್ಕೆ ಸಂಬಂಧಿಸಿದಂತೆ ಪೊಲೀಸರು ಉದ್ಯಮಿ ಕಾರು ಹಾಗೂ ಡರೋಡೆಕೋರರ ಕಾರನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್.ಡಿ.ಕೋಟೆ ರಸ್ತೆಯ ಹಾರೋಹಳ್ಳಿ ಬಳಿ ಸೋಮವಾರ ಬೆಳಗ್ಗೆ 9.15 ಗಂಟೆ ವೇಳೆ ಕೇರಳ ಮೂಲದ ಉದ್ಯಮಿ ಅಶ್ರಫ್ ಅಹಮ್ಮದ್‌ ಹಾಗೂ ಆತನ ಚಾಲಕ ಸೂಫಿ ಎಂಬುವವರು ಚಲುಸುತ್ತಿದ್ದ ಕಾರನ್ನು, ಎರಡು ಕಾರುಗಳಲ್ಲಿ ಬಂದ ದರೋಡೆಕೋರರು ಅಡ್ಡಗಟ್ಟಿ ಕಾರಿನಿಂದ ಅವರನ್ನು ಕೆಳಗಿಳಿಸಿ, ಹಲ್ಲೆ ಮಾಡಿ ಹಣದ ಸಮೇತ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ.

ಬಳಿಕ ಸುಮಾರು 12 ಕಿ.ಮೀ. ದೂರದ ರಸ್ತೆಯಲ್ಲಿ ಉದ್ಯಮಿ ಕಾರನ್ನು ಬಿಟ್ಟು, ಅದರಲ್ಲಿದ್ದ 1.5 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. KERALA BUSINESSMAN ROBBED CASE ಉದ್ಯಮ ಕಾರು ಮಾಂಬಳ್ಳಿಯಲ್ಲಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು, ದರೋಡೆಕೋರರು ಬಳಸಿದ್ದ ಎರಡು ಕಾರುಗಳ ಪೈಕಿ ಒಂದು ಕಾರನ್ನು 6 ಕಿ.ಮೀ ದೂರದ ಗೋಪಾಲ್‌ ಪುರ ಎಂಬಲ್ಲಿ ಬಿಟ್ಟು ಹೋಗಿದ್ದಾರೆ. ಈ ಎರಡು ಕಾರುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

What did SP say?:

“ಡರೋಡೆ ಪ್ರಕರಣದ ಸಂಬಂಧ ನಿನ್ನೆಯೇ ಮೂರು ತಂಡ ರಚಿಸಿದ್ದು, ದೂರುದಾರರಿಂದ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಈಗಾಗಲೇ ಸ್ಥಳ ಮಹಜರು ನಡೆಸಿದ್ದೇವೆ. ಮೂರು ತಂಡಗಳು ಈಗಾಗಲೇ ತನಿಖೆ ಕೈಗೊಂಡಿದ್ದು, ಒಂದೆರಡು ದಿನಗಳಲ್ಲಿ ಪ್ರಕರಣವನ್ನು ಭೇದಿಸುತ್ತೇವೆ” ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌  ಮಾಹಿತಿ ನೀಡಿದ್ದಾರೆ.

What is in the FIR:

ಕಳೆದ 9 ವರ್ಷಗಳಿಂದ ಚಾಕೊಲೇಟ್ ವ್ಯಾಪಾರ ಮಾಡುತ್ತಿರುವ ಅಶ್ರಫ್, ಅಡಕೆ ಖರೀದಿಸಲೆಂದು ಹೆಚ್.ಡಿ.ಕೋಟೆಗೆ ಫೋರ್ಡ್ ಎಕೋ ಸ್ಪೋರ್ಟ್ ಕಾರಿನಲ್ಲಿ ಹೋಗುತ್ತಿದ್ದಾಗ, ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿ ಬಂದ ಐವರು ಮುಸುಕುಧಾರಿಗಳು, ಬೆಳಗ್ಗೆ ಸುಮಾರು 9.15 ಗಂಟೆ ವೇಳೆ ಸಿನಿಮೀಯ ಶೈಲಿಯಲ್ಲಿ ಕಾರು ಅಡ್ಡಗಟ್ಟಿದ್ದಾರೆ.

KERALA BUSINESSMAN ROBBED CASE ನಂತರ ಐದಾರು ಜನರು ಕಾರನ್ನು ಸುತ್ತುವರೆದು ಜಾಕ್, ರಾಡ್​ನಿಂದ ಕಾರಿನ ಸೈಡ್ ಗಾಜುಗಳನ್ನು ಒಡೆದು ಹಾಕಿ, ಅಶ್ರಫ್ ಮತ್ತು ಆತನ ಕಾರು ಚಾಲಕ ಸೂಫಿ ಅವರನ್ನು ಕಾರಿನಿಂದ ಕೆಳಗಿಳಿಸಿ ಹಣ ಕೊಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿರೋಧ ಒಡ್ಡಿದ ಅಶ್ರಫ್ ಮತ್ತು ಸೂಫಿ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಕಾರಿನಲ್ಲಿದ್ದ 1.5 ಲಕ್ಷ ರೂ. ನಗದು ದೋಚಿ ಕಾರಿನೊಂದಿಗೆ ಹೆಚ್.ಡಿ ಕೋಟೆಯ ಕಡೆಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿರಿ : SUGARCANE DAMAGE COMPENSATION : ಕಬ್ಬು ಹಾನಿಗೆ ಪರಿಹಾರ ನೀಡಲು ₹50 ಲಕ್ಷ ನಿಧಿ ಸ್ಥಾಪನೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...