spot_img
spot_img

KICHCHA SUDDEP : ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Sudeep News :

ಅಭಿನಯ ಚಕ್ರವರ್ತಿ KICHCHA SUDDEP​ ಅವರು ರಾಜ್ಯ ಸರ್ಕಾರ ಘೋಷಿಸಿರುವ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಕೋವಿಡ್ -19 ಹಾಗೂ ಇತರ ಕಾರಣಗಳ ಹಿನ್ನೆಲೆ 5 ವರ್ಷಗಳ ವಿಳಂಬದ ನಂತರ ಕರ್ನಾಟಕ ರಾಜ್ಯ ಸರ್ಕಾರ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದೆ. 2019ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿಯನ್ನು ಅಭಿನಯ ಚಕ್ರವರ್ತಿ KICHCHA SUDDEP​ ಅವರಿಗೆ ಘೋಷಿಸಲಾಗಿದೆ. ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ KICHCHA SUDDEP ಅತ್ಯುತ್ತಮ ನಟ ಗೌರವಕ್ಕೆ ಪಾತ್ರರಾಗಿದ್ದು, ಇದೀಗ ಈ ಬಗ್ಗೆ ಸುದೀಪ್​ ಟ್ವೀಟ್​ ಮಾಡಿದ್ದಾರೆ.

What’s in Sudeep’s tweet?

”ಗೌರವಾನ್ವಿತ ಕರ್ನಾಟಕ ಸರ್ಕಾರ ಹಾಗೂ ಜೂರಿ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಘೋಷಣೆಯಾಗಿರುವುದು ನಿಜಕ್ಕೂ ಒಂದು ಭಾಗ್ಯ. ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅದಾಗ್ಯೂ, ನಾನು ಹಲವು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದು, ಅದನ್ನು ಮುಂದುವರಿಸುತ್ತಿದ್ದೇನೆ. ಕಲೆಗೆ ತಮ್ಮನ್ನು ಸಮರ್ಪಿಸಿದ ಅನೇಕ ಅರ್ಹ ಕಲಾವಿದರಿದ್ದಾರೆ. ಈ ಪ್ರತಿಷ್ಠಿತ ಮನ್ನಣೆಯನ್ನು ಅವರು ಹೆಚ್ಚು ಪ್ರಶಂಸಿಸುತ್ತಾರೆ. ಅವರಲ್ಲಿ ಒಬ್ಬರು ಪ್ರಶಸ್ತಿ ಪಡೆಯುವುದನ್ನು ನೋಡೋದು ನನಗೆ ಖುಷಿ ನೀಡುತ್ತದೆ”.

”ಪ್ರಶಸ್ತಿಗಳ ನಿರೀಕ್ಷೆಯಿಲ್ಲದೇ ಜನರನ್ನು ಮನರಂಜಿಸೋದರಲ್ಲಿ ನನ್ನನ್ನು ಸಮರ್ಪಿಸಿಕೊಂಡಿದ್ದೇನೆ. ತೀರ್ಪುಗಾರರ ಈ ನಿರ್ಧಾರ ಶ್ರೇಷ್ಠತೆಗಾಗಿ ಶ್ರಮಿಸುವುದನ್ನು ಮುಂದುವರಿಸಲು ನನಗೆ ಉತ್ತೇಜನ ನೀಡುತ್ತದೆ”. ”ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

”ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತೀ ಜೂರಿ (ತೀರ್ಪುಗಾರರು) ಸದಸ್ಯರಿಗೂ ಕೃತಜ್ಞನಾಗಿದ್ದೇನೆ. ಏಕೆಂದರೆ, ಈ ಮನ್ನಣೆಯೇ ನನ್ನ ಕೆಲಸದ ಪ್ರತಿಫಲ. ನನ್ನ ನಿರ್ಧಾರ ನಿಮಗೆ ನಿರಾಶೆಯಾಗಬಹುದು, ತೀರ್ಪುಗಾರ ತಂಡದ ಸದಸ್ಯರು ಮತ್ತು ರಾಜ್ಯ ಸರ್ಕಾರದಲ್ಲಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ಮುನ್ನಡೆಯಲು ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ”.

ಇದನ್ನು ಓದಿರಿ : MAHAMASTAKABHISHEKA : ವರೂರಿನ 9 ತೀರ್ಥಂಕರರಿಗೆ ಮಹಾಮಸ್ತಕಾಭಿಷೇಕ ಪ್ರಾರಂಭ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...